TOP STORIES:

FOLLOW US

ಹೀಗೆ ಮಾಡಿ, ಒಂದು ತಿಂಗಳು ಬರುವ ಗ್ಯಾಸ್ ಎರಡು ತಿಂಗಳು ಬರುತ್ತೆ!


ಅಡುಗೆ ಅನಿಲದ ಬೆಲೆಯು ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಇದು ಜನಸಾಮಾನ್ಯರ ಮೇಲೆ ತೀವ್ರ ಹೊಡೆತ ಹಾಕಿದೆ. ಹೀಗಾಗಿ ಅಡುಗೆ ಗ್ಯಾಸ್ ಬಳಕೆ ಮಾಡುವ ಜನರು ಅಡುಗೆ ಮನೆಯಲ್ಲಿ ಅಡುಗೆ ಮಾಡುವ ಸಂದರ್ಭ ಆದಷ್ಟು ಗ್ಯಾಸ್ ಉಳಿತಾಯ ಮಾಡಲು ಪ್ರಯತ್ನಿಸಬೇಕು.

ಗ್ಯಾಸ್ ನ್ನು ಉಳಿತಾಯ ಮಾಡಿದರೆ ಅದರಿಂದ ಹಣದ ಉಳಿತಾಯವು ಆಗುವುದು. ಹಾಗಾದರೆ ಗ್ಯಾಸ್ ಉಳಿಸುವುದು ಅಷ್ಟು ಸುಲಭವೇ ಎನ್ನುವ ಪ್ರಶ್ನೆಯು ಬರಬಹುದು. ಗ್ಯಾಸ್ ಉಳಿಸಲು ಏನು ಮಾಡಬೇಕು ಎಂದು ನೀವು ತಿಳಿಯಿರಿ.

​ಬರ್ನರ್ ಶುಚಿಯಾಗಿರಬೇಕು

ಗ್ಯಾಸ್ ನ್ನು ಉಳಿತಾಯ ಮಾಡಲು ನಿಯಮಿತವಾಗಿ ಬರ್ನರ್ ನ್ನು ಶುಚಿ ಮಾಡುತ್ತಲಿರಬೇಕು. ಬೆಂಕಿಯ ಬಣ್ಣವನ್ನು ಗಮನಿಸಿ ಮತ್ತು ಅದು ನೀಲಿ ಇದ್ದರೆ ಆಗ ಸರಿಯಾಗಿದೆ ಎಂದು ಹೇಳಬಹುದು.
ಆದರೆ ಕೆಂಪು, ಹಳದಿ ಅಥವಾ ಕಿತ್ತಳೆ ಬಣ್ಣದಲ್ಲಿದ್ದರೆ, ಆಗ ಅದು ಸರಿಯಾಗಿ ಉರಿಯುತ್ತಿಲ್ಲ ಎಂದರ್ಥ.ಬರ್ನರ್ ನ್ನು ನಿಯಮಿತವಾಗಿ ಶುಚಿ ಮಾಡುತ್ತಲಿದ್ದರೆ, ಅದರಿಂದ ಬೆಂಕಿಯ ಬಣ್ಣವು ನೀಲಿ ಆಗಿರುವುದು. ಇದರಿಂದ ಗ್ಯಾಸ್ ನಷ್ಟವಾಗುವುದು ತಪ್ಪುವುದು.

​ಪಾತ್ರೆಗಳನ್ನು ಒರೆಸಿ

ಕೆಲವರು ಕುಕ್ಕರ್, ಪಾತ್ರೆ ಇತ್ಯಾದಿಗಳನ್ನು ತೊಳೆದು ನೇರವಾಗಿ ಗ್ಯಾಸ್ ಮೇಲೆ ಇಟ್ಟುಬಿಡುವರು. ಆಧರೆ ಇದರಿಂದ ಗ್ಯಾಸ್ ವೆಚ್ಚವಾಗುವುದು.
ಇದಕ್ಕಾಗಿ ಪಾತ್ರೆಯನ್ನು ತೊಳೆದ ಬಳಿಕ ಸ್ವಲ್ಪ ಒರೆಸಿಕೊಳ್ಳಿ. ಇದರಿಂದ ಪಾತ್ರೆ ಬೇಗ ಬಿಸಿ ಆಗುವುದು ಹಾಗೂ ಗ್ಯಾಸ್ ವೆಚ್ಚವಾಗುವುದು ತಪ್ಪುವುದು.
ಮೊದಲೇ ತಯಾರಿಸಿಡಿ

ಅಡುಗೆ ಮಾಡಲು ಬೇಕಾಗಿರುವಂತಹ ಸಾಮಗ್ರಿಗಳನ್ನು ನೀವು ಮೊದಲೇ ತಯಾರು ಮಾಡಿಟ್ಟುಕೊಂಡು ಇದರ ಬಳಿಕ ಗ್ಯಾಸ್ ಉರಿಸಿ. ಗ್ಯಾಸ್ ಉರಿಸಿದ ಬಳಿಕ ತರಕಾರಿ ಕತ್ತರಿಸುವುದು ಸರಿಯಲ್ಲ. ಬೇಕಾಗುವಂತಹ ಸಾಮಗ್ರಿಗಳನ್ನು ಪಕ್ಕದಲ್ಲೇ ಇಟ್ಟುಕೊಂಡು ಅಡುಗೆ ಮಾಡಿ.

​ಪಾತ್ರೆಯ ಮುಚ್ಚಳ ಹಾಕಿಡಿ

ನೀವು ಯಾವುದೇ ಆಡುಗೆ ಮಾಡುತ್ತಲಿದ್ದರೂ ಆಗ ಪಾತ್ರೆಯ ಮುಚ್ಚಳ ಹಾಕಿಟ್ಟರೆ ಅದರಿಂದ ಬೇಗ ಬೇಯುವುದು ಹಾಗೂ ಅದರಿಂದ ಗ್ಯಾಸ್ ಕೂಡ ಉಳಿತಾಯ ಆಗುವುದು. ಪಾತ್ರೆಯ ಮುಚ್ಚಳವನ್ನು ಮುಚ್ಚಿಟ್ಟರೆ ಅದರಿಂದ ಹಬೆಯು ನಿರ್ಮಾಣವಾಗಿ ಆಹಾರ ಬೇಗ ಬೇಯುವುದು.

ಧಾನ್ಯ ಮತ್ತು ಅಕ್ಕಿ ನೆನೆಸಿಡಿ

ಕೆಲವೊಂದು ಧಾನ್ಯಗಳು ಬೇಯಲು ತುಂಬಾ ಸಮಯ ಬೇಕಾಗುವುದು. ಹೀಗಾಗಿ ಧಾನ್ಯಗಳು ಮತ್ತು ಅಕ್ಕಿಯನ್ನು ಕೆಲವು ಗಂಟೆಗಳ ಕಾಲ ನೆನೆಯಲು ಹಾಕಿ. ಇದರಿಂದ ಬೇಗನೆ ಬೇಯಲು ನೆರವಾಗುವುದು ಹಾಗೂ ಗ್ಯಾಸ್ ಉಳಿತಾಯವಾಗುವುದು.

​ಕೆಲವು ನಿಮಿಷ ಬಳಿಕ ಗ್ಯಾಸ್ ಕಡಿಮೆ ಮಾಡಿ

ಒಮ್ಮೆ ಪಾತ್ರೆಯು ಬಿಸಿಯಾದ ಬಳಿಕ ಗ್ಯಾಸ್ ಬೆಂಕಿ ಕಡಿಮೆ ಮಾಡಿ. ಆಹಾರ ಕುದಿಯಲು ಆರಂಭಿಸಿದ ವೇಳೆ ತುಂಬಾ ಕಡಿಮೆ ಮಾಡಿಕೊಳ್ಳಬಹುದು. ಇದರಿಂದ ತರಕಾರಿಗಳಲ್ಲಿ ಪೋಷಕಾಂಶಗಳು ಹಾಗೆ ಉಳಿಯುವುದು ಹಾಗೂ ಗ್ಯಾಸ್ ಬಳಕೆ ಕಡಿಮೆ ಆಗುವುದು.

​ಕುಕ್ಕರ್ ಬಳಸಿ

ಪ್ರೆಶರ್ ಕುಕ್ಕರ್ ನಲ್ಲಿ ಅಡುಗೆ ಬೇಗ ಆಗುವುದು ಎನ್ನುವುದು ಎಲ್ಲರಿಗೂ ತಿಳಿದೇ ಇದೆ. ಹೀಗಾಗಿ ಗ್ಯಾಸ್ ಖರ್ಚು ಕಡಿಮೆ ಮಾಡಲು ಕುಕ್ಕರ್ ನ್ನು ಬಳಸಿ. ಇದು ಸಮಯ ಹಾಗೂ ಗ್ಯಾಸ್ ಎರಡನ್ನು ಉಳಿತಾಯ ಮಾಡುವುದು.

ಅಗಲವಾದ ಪಾತ್ರೆ ಬಳಸಿ

ಕೆಲವರು ತುಂಬಾ ಸಣ್ಣ ಪಾತ್ರೆಗಳನ್ನು ಗ್ಯಾಸ್ ನಲ್ಲಿ ಇಡುವರು. ಇದರಿಂದ ಗ್ಯಾಸ್ ಹೊರಭಾಗಕ್ಕೆ ಬರುವುದು. ಗ್ಯಾಸ್ ನಲ್ಲಿ ಅಗಲವಾದ ಪಾತ್ರೆಗಳನ್ನು ಇಡಬೇಕು. ಇದರಿಂದ ಗ್ಯಾಸ್ ಹೊರಗೆ ಬರುವುದು ತಪ್ಪುವುದು ಹಾಗೂ ಗ್ಯಾಸ್ ನ ಉಳಿತಾಯ ಕೂಡ ಆಗುವುದು.

​ಲೀಕ್ ಇದೆಯಾ ಎಂದು ನೋಡಿ

ಬರ್ನರ್, ಪೈಪ್ ಮತ್ತು ರೆಗ್ಯೂಲೇಟರ್ ನಲ್ಲಿ ಗ್ಯಾಸ್ ಲೀಕ್ ಆಗುತ್ತಿದೆಯಾ ಎಂದು ನೋಡಿ. ಮೂಗಿನ ಮೂಲಕ ಸೋರಿಕೆ ಪತ್ತೆ ಮಾಡಬಹುದು. ಯಾವುದೇ ಲೀಕ್ ಇದ್ದರೆ ಆಗ ನೀವು ಬೇಗನೆ ಇದನ್ನು ಪತ್ತೆ ಮಾಡಿ.
ಗ್ಯಾಸ್ ನ ವಾಸನೆ ಬರುತ್ತಲಿದ್ದರೆ, ಆಗ ಲೀಕ್ ಇದೆ ಎಂದು ಅರ್ಥ ಮಾಡಿಕೊಳ್ಳಿ. ಕೆಲವೊಂದು ಸಲ ಇದು ಅಪಾಯಕಾರಿ ಕೂಡ ಆಗಬಹುದು. ಹೀಗಾಗಿ ಪದೇ ಪದೇ ಇದನ್ನು ಗಮನಿಸುತ್ತಿರಬೇಕು.
ಸೂಕ್ತ ಸರಬರಾಜುದಾರರಿಂದ ಪಡೆಯಿರಿ: ನೀವು ಸೂಕ್ತ ಸರಬರಾಜುದಾರರಿಂದ ಗ್ಯಾಸ್ ಖರೀದಿ ಮಾಡಿ. ಅನಧಿಕೃತ ಗ್ಯಾಸ್ ಬಳಕೆ ಮಾಡಬೇಡಿ. ಇದರ ತೂಕವನ್ನು ಸರಿಯಾಗಿ ಗಮನಿಸಿ ಪಡೆಯಿರಿ.

​ಕೊನೆ ಮಾತು

ನಿಮಗೆ ಈಗ ಗ್ಯಾಸ್ ಉಳಿತಾಯದ ಬಗ್ಗೆ ತಿಳಿದಿದೆ. ಇನ್ನು ನೀವು ಇದನ್ನು ಪಾಲಿಸಿಕೊಂಡು ಹೋಗಿ ನಿಮಗಾಗಿ ಹಾಗೂ ಕುಟುಂಬಕ್ಕಾಗಿ ಗ್ಯಾಸ್ ಉಳಿತಾಯ ಮಾಡಿ.
ಗ್ಯಾಸ್ ಉಳಿತಾಯವು ಪ್ರತಿನಿತ್ಯವೂ ಏನೂ ಬದಲಾವಣೆ ಉಂಟು ಮಾಡದು, ಆದರೆ ಇದು ತಿಂಗಳಲ್ಲಿ ಹಣ ಉಳಿತಾಯ ಮಾಡುವುದು. ಸಣ್ಣ ಸಣ್ಣ ಪ್ರಮಾಣದಲ್ಲಿನ ಉಳಿತಾಯವು ದೊಡ್ಡದಾಗುವುದು.


Share:

More Posts

Category

Send Us A Message

Related Posts

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


Share       ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ


Read More »

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


Share       ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು


Read More »