TOP STORIES:

FOLLOW US

ಹೊಟ್ಟೆ ಬೊಜ್ಜಿನ ಚಿಂತೇನಾ ? ಅಡುಗೆ ಮನೆಯಲ್ಲಿಯೇ ಇದೆ ಮದ್ದು


ಬೊಜ್ಜಿಲ್ಲದ ವ್ಯಕ್ತಿಗಳಿಲ್ಲ ಎನ್ನುವ ಸ್ಥಿತಿ ಈಗಿದೆ. ಎಲ್ಲರ ಹೊಟ್ಟೆ ಮುಂದೆ ಬಂದಿರೋದನ್ನು ನಾವು ನೋಡ್ಬಹುದು. ಏನೇ ಮಾಡಿದ್ರೂ ಈ ಕೊಬ್ಬು ಇಳಿಯಲ್ಲ ಎನ್ನುವವರು ಅಡುಗೆ ಮನೆಯಲ್ಲಿರೋ ಈ ಮನೆಮದ್ದನ್ನು ಒಮ್ಮೆ ಟ್ರೈ ಮಾಡಿ.

 

ನಿಮ್ಮ ಹೊಟ್ಟೆ ಬೊಜ್ಜು ಇಳಿಸುತ್ತೆ ಈ ಪಾನೀಯ : ಅಡುಗೆ ಮನೆಯಲ್ಲಿರುವ ಜೇನುತುಪ್ಪ ಹಾಗೂ ದಾಲ್ಚಿನಿಯನ್ನು ಬಳಸಿ ನೀವು ಬೊಜ್ಜನ್ನು ಕಡಿಮೆ ಮಾಡ್ಕೊಳ್ಳಬಹುದು. ಜೇನುತುಪ್ಪ ಮತ್ತು ದಾಲ್ಚಿನಿ ವಿವಿಧ ಪೋಷಕಾಂಶ (Nutrient) ಗಳನ್ನು ಹೊಂದಿದೆ. ಅದು ಆರೋಗ್ಯ (Health) ಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಆದ್ರೆ ಅವುಗಳನ್ನು ಸೇವಿಸುವ ಸರಿಯಾದ ಸಮಯ ಮತ್ತು ಸರಿಯಾದ ಮಾರ್ಗ ತಿಳಿದಿರಬೇಕು.

ದಾಲ್ಚಿನಿ (Cinnamon) ಹಾಗೂ ಜೇನುತುಪ್ಪ (Honey) ದ ಪಾನೀಯ ತಯಾರಿಸುವ ವಿಧಾನ : ಒಂದು ಪಾತ್ರೆಗೆ ಒಂದು ಕಪ್ ನೀರನ್ನು ಹಾಕಿ, ಅದನ್ನು ಕುದಿಸಿ. ನೀರು ಕುದಿಯುತ್ತಿರುವ ವೇಳೆ ಅದಕ್ಕೆ ಒಂದು ದಾಲ್ಚಿನಿ ಕಡ್ಡಿಯನ್ನು ಹಾಕಿ. ನೀವು ದಾಲ್ಚಿನಿ ಪುಡಿಯನ್ನು ಕೂಡ ಹಾಕ್ಬಹುದು. ಈ ನೀರನ್ನು 5 -7 ನಿಮಿಷ ಚೆನ್ನಾಗಿ ಕುದಿಸಿ. ನಂತ್ರ ಗ್ಯಾಸ್ ಬಂದ್ ಮಾಡಿ ಇದು ಸ್ವಲ್ಪ ತಣ್ಣಗಾದ್ಮೇಲೆ ಒಂದು ಚಮಚ ಜೇನುತುಪ್ಪ ಬೆರೆಸಿ ಸೇವನೆ ಮಾಡಿ. ಇದಕ್ಕೆ ನೀವು ನಿಂಬೆ ರಸವನ್ನು ಕೂಡ ಬೆರೆಸಿಕೊಂಡು ಕುಡಿಯಬಹುದು. ವರ್ಕ್ ಔಟ್ ಗೆ ಹೋಗುವ ಮುನ್ನ, ಹಸಿವಾದಾಗ ಅಥವಾ ರಾತ್ರಿ ಮಲಗಲು ಹೋಗುವ ಮೊದಲು ನೀವು ಈ ನೀರನ್ನು ಅವಶ್ಯವಾಗಿ ಸೇವನೆ ಮಾಡಿ.

ಈ ಪಾನೀಯದಿಂದಾಗುವ ಲಾಭಗಳು : ಜೇನುತುಪ್ಪದಲ್ಲಿ ಅನೇಕ ಪೋಷಕಾಂಶಗಳಿವೆ. ಅದು ತೂಕ ಇಳಿಕೆಗೆ ಸಹಕಾರಿಯಾಗಿದೆ. ಜೇನುತುಪ್ಪದಲ್ಲಿ ಅನೇಕ ಪ್ರಮುಖ ಜೀವಸತ್ವಗಳು ಮತ್ತು ಖನಿಜಗಳಿವೆ. ಈ ಎಲ್ಲಾ ಪೋಷಕಾಂಶಗಳು ಅದರಲ್ಲಿರುವ ಸಕ್ಕರೆಯ ಪರಿಣಾಮವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಜೇನುತುಪ್ಪದಲ್ಲಿರುವ ಫ್ರಕ್ಟೋಸ್ ಹೊಟ್ಟೆಯ ಕೊಬ್ಬನ್ನು ಸುಡುತ್ತದೆ. ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ದೀರ್ಘ ಸಮಯ ದೈಹಿಕವಾಗಿ ಸಕ್ರಿಯವಾಗಿರಲು ಇದು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಗೂ ಜೇನುತುಪ್ಪ ಒಳ್ಳೆಯದು. ಸರಿಯಾದ ಪ್ರಮಾಣದಲ್ಲಿ ಜೇನುತುಪ್ಪ ಸೇವನೆ ಮಾಡಿದ್ರೆ ಜೀರ್ಣಕ್ರಿಯೆ ಸರಿಯಾಗಿ ಆಗುತ್ತದೆ.

 

ಇನ್ನು ದಾಲ್ಚನಿಯಲ್ಲಿ ಸಾಕಷ್ಟು ಪೋಷಕಾಂಶವಿದೆ. ತೂಕ ಇಳಿಕೆ ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಇದು ಸಹಕಾರಿ. ದಾಲ್ಚಿನಿ ನೀರಿನ ಸೇವನೆ ಮಾಡೋದ್ರಿಂದ ಚಯಾಪಚಯ ಸುಗಮವಾಗುತ್ತದೆ. ಹೊಟ್ಟೆಯಲ್ಲಿ ಸಂಗ್ರಹವಾಗಿರುವ ಕೊಬ್ಹು ಕರಗುತ್ತದೆ. ದಾಲ್ಚಿನಿ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ದೇಹದಲ್ಲಿ ಹೆಚ್ಚುತ್ತಿರುವ ಸಕ್ಕರೆಯ ಮಟ್ಟವು ಹೊಟ್ಟೆಯ ಮೇಲೆ ಹೆಚ್ಚುವರಿ ಕೊಬ್ಬಿನ ಶೇಖರಣೆಗೆ ಕಾರಣವಾಗಬಹುದು. ಈ ಸಂದರ್ಭದಲ್ಲಿ ಜೇನುತುಪ್ಪ ನೈಸರ್ಗಿಕವಾಗಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಸಿವನ್ನು ನಿಯಂತ್ರಿಸುತ್ತದೆ.


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »