TOP STORIES:

FOLLOW US

ಹೊಟ್ಟೆ ಬೊಜ್ಜಿನ ಚಿಂತೇನಾ ? ಅಡುಗೆ ಮನೆಯಲ್ಲಿಯೇ ಇದೆ ಮದ್ದು


ಬೊಜ್ಜಿಲ್ಲದ ವ್ಯಕ್ತಿಗಳಿಲ್ಲ ಎನ್ನುವ ಸ್ಥಿತಿ ಈಗಿದೆ. ಎಲ್ಲರ ಹೊಟ್ಟೆ ಮುಂದೆ ಬಂದಿರೋದನ್ನು ನಾವು ನೋಡ್ಬಹುದು. ಏನೇ ಮಾಡಿದ್ರೂ ಈ ಕೊಬ್ಬು ಇಳಿಯಲ್ಲ ಎನ್ನುವವರು ಅಡುಗೆ ಮನೆಯಲ್ಲಿರೋ ಈ ಮನೆಮದ್ದನ್ನು ಒಮ್ಮೆ ಟ್ರೈ ಮಾಡಿ.

 

ನಿಮ್ಮ ಹೊಟ್ಟೆ ಬೊಜ್ಜು ಇಳಿಸುತ್ತೆ ಈ ಪಾನೀಯ : ಅಡುಗೆ ಮನೆಯಲ್ಲಿರುವ ಜೇನುತುಪ್ಪ ಹಾಗೂ ದಾಲ್ಚಿನಿಯನ್ನು ಬಳಸಿ ನೀವು ಬೊಜ್ಜನ್ನು ಕಡಿಮೆ ಮಾಡ್ಕೊಳ್ಳಬಹುದು. ಜೇನುತುಪ್ಪ ಮತ್ತು ದಾಲ್ಚಿನಿ ವಿವಿಧ ಪೋಷಕಾಂಶ (Nutrient) ಗಳನ್ನು ಹೊಂದಿದೆ. ಅದು ಆರೋಗ್ಯ (Health) ಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಆದ್ರೆ ಅವುಗಳನ್ನು ಸೇವಿಸುವ ಸರಿಯಾದ ಸಮಯ ಮತ್ತು ಸರಿಯಾದ ಮಾರ್ಗ ತಿಳಿದಿರಬೇಕು.

ದಾಲ್ಚಿನಿ (Cinnamon) ಹಾಗೂ ಜೇನುತುಪ್ಪ (Honey) ದ ಪಾನೀಯ ತಯಾರಿಸುವ ವಿಧಾನ : ಒಂದು ಪಾತ್ರೆಗೆ ಒಂದು ಕಪ್ ನೀರನ್ನು ಹಾಕಿ, ಅದನ್ನು ಕುದಿಸಿ. ನೀರು ಕುದಿಯುತ್ತಿರುವ ವೇಳೆ ಅದಕ್ಕೆ ಒಂದು ದಾಲ್ಚಿನಿ ಕಡ್ಡಿಯನ್ನು ಹಾಕಿ. ನೀವು ದಾಲ್ಚಿನಿ ಪುಡಿಯನ್ನು ಕೂಡ ಹಾಕ್ಬಹುದು. ಈ ನೀರನ್ನು 5 -7 ನಿಮಿಷ ಚೆನ್ನಾಗಿ ಕುದಿಸಿ. ನಂತ್ರ ಗ್ಯಾಸ್ ಬಂದ್ ಮಾಡಿ ಇದು ಸ್ವಲ್ಪ ತಣ್ಣಗಾದ್ಮೇಲೆ ಒಂದು ಚಮಚ ಜೇನುತುಪ್ಪ ಬೆರೆಸಿ ಸೇವನೆ ಮಾಡಿ. ಇದಕ್ಕೆ ನೀವು ನಿಂಬೆ ರಸವನ್ನು ಕೂಡ ಬೆರೆಸಿಕೊಂಡು ಕುಡಿಯಬಹುದು. ವರ್ಕ್ ಔಟ್ ಗೆ ಹೋಗುವ ಮುನ್ನ, ಹಸಿವಾದಾಗ ಅಥವಾ ರಾತ್ರಿ ಮಲಗಲು ಹೋಗುವ ಮೊದಲು ನೀವು ಈ ನೀರನ್ನು ಅವಶ್ಯವಾಗಿ ಸೇವನೆ ಮಾಡಿ.

ಈ ಪಾನೀಯದಿಂದಾಗುವ ಲಾಭಗಳು : ಜೇನುತುಪ್ಪದಲ್ಲಿ ಅನೇಕ ಪೋಷಕಾಂಶಗಳಿವೆ. ಅದು ತೂಕ ಇಳಿಕೆಗೆ ಸಹಕಾರಿಯಾಗಿದೆ. ಜೇನುತುಪ್ಪದಲ್ಲಿ ಅನೇಕ ಪ್ರಮುಖ ಜೀವಸತ್ವಗಳು ಮತ್ತು ಖನಿಜಗಳಿವೆ. ಈ ಎಲ್ಲಾ ಪೋಷಕಾಂಶಗಳು ಅದರಲ್ಲಿರುವ ಸಕ್ಕರೆಯ ಪರಿಣಾಮವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಜೇನುತುಪ್ಪದಲ್ಲಿರುವ ಫ್ರಕ್ಟೋಸ್ ಹೊಟ್ಟೆಯ ಕೊಬ್ಬನ್ನು ಸುಡುತ್ತದೆ. ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ದೀರ್ಘ ಸಮಯ ದೈಹಿಕವಾಗಿ ಸಕ್ರಿಯವಾಗಿರಲು ಇದು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಗೂ ಜೇನುತುಪ್ಪ ಒಳ್ಳೆಯದು. ಸರಿಯಾದ ಪ್ರಮಾಣದಲ್ಲಿ ಜೇನುತುಪ್ಪ ಸೇವನೆ ಮಾಡಿದ್ರೆ ಜೀರ್ಣಕ್ರಿಯೆ ಸರಿಯಾಗಿ ಆಗುತ್ತದೆ.

 

ಇನ್ನು ದಾಲ್ಚನಿಯಲ್ಲಿ ಸಾಕಷ್ಟು ಪೋಷಕಾಂಶವಿದೆ. ತೂಕ ಇಳಿಕೆ ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಇದು ಸಹಕಾರಿ. ದಾಲ್ಚಿನಿ ನೀರಿನ ಸೇವನೆ ಮಾಡೋದ್ರಿಂದ ಚಯಾಪಚಯ ಸುಗಮವಾಗುತ್ತದೆ. ಹೊಟ್ಟೆಯಲ್ಲಿ ಸಂಗ್ರಹವಾಗಿರುವ ಕೊಬ್ಹು ಕರಗುತ್ತದೆ. ದಾಲ್ಚಿನಿ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ದೇಹದಲ್ಲಿ ಹೆಚ್ಚುತ್ತಿರುವ ಸಕ್ಕರೆಯ ಮಟ್ಟವು ಹೊಟ್ಟೆಯ ಮೇಲೆ ಹೆಚ್ಚುವರಿ ಕೊಬ್ಬಿನ ಶೇಖರಣೆಗೆ ಕಾರಣವಾಗಬಹುದು. ಈ ಸಂದರ್ಭದಲ್ಲಿ ಜೇನುತುಪ್ಪ ನೈಸರ್ಗಿಕವಾಗಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಸಿವನ್ನು ನಿಯಂತ್ರಿಸುತ್ತದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »