TOP STORIES:

ಅನಂತಾಡಿಯಲ್ಲಿ ಕುದ್ರೋಳಿ ಗುರು ಬೆಳದಿಂಗಳು ಸಂಘಟನೆಯಿಂದ ‘ಗುರುವನ’ ಲೋಕಾರ್ಪಣೆ


ಬದುಕಿನಲ್ಲಿ ಕನಸು ಕಾಣುವುದು ಸುಲಭ ಆದರೆ ಅದನ್ನು ನನಸು ಮಾಡುವುದು ಬಲುಕಷ್ಟತ್ಯಾಗ, ಪರಿಶ್ರಮ, ಇಚ್ಚಾಶಕ್ತಿ ಇರುವತಂಡವೊಂದಿದ್ದರೆ ಯಾವುದನ್ನು ಸಾಧಿಸಲು ಸಾಧ್ಯ ಎಂದು ಹಿಂದುಳಿದ ವರ್ಗ ಹಾಗೂ ಸಮಾಜಕಲ್ಯಾಣ ಸಚಿವರಾದ ಕೋಟಶ್ರೀನಿವಾಸ ಪೂಜಾರಿರವರು ಹೇಳಿದರು.

ಅವರು   ಗುರು ಬೆಳದಿಂಗಳು ರಿ. ಕುದ್ರೋಳಿ ಇದರ ವತಿಯಿಂದ ಅನಂತಾಡಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ, ಶ್ರೀಬ್ರಹ್ಮಬೈದರ್ಕಳ ಗರಡಿಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ೧೬೭ನೇ ಜನ್ಮದಿನಾಚರಣೆಯ ಪ್ರಯುಕ್ತ ೧೬೭ ಔಷದೀಯ ಸಸಿನೆಡುವ ಕಾರ್ಯಕ್ರಮ ಹಾಗೂ ನೂತನವಾಗಿ ನಿರ್ಮಿಸಿರುವ  ಗುರುವವನ್ನು ಲೋಕಾರ್ಪಣೆಗೊಳಿಸಿ ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಬದುಕಿನ ಜೊತೆಗೆ ಪರಿಸರವನ್ನು ಉಳಿಸಿಬೆಳೆಸುವ ಕೆಲಸ ಎಲ್ಲರಿಂದ ಆಗಬೇಕಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿಸಮಾಜದಲ್ಲಿರುವ ಕಟ್ಟಕಡೇಯ ವ್ಯಕ್ತಿಗೂ ಸಹಕಾರ ಮಾಡಬೇಕೆನ್ನುವುದು ಆಶಯ ನನ್ನದಾಗಿದೆ. ಗುರುಬೆಳದಿಂಗಳು ಸಂಸ್ಥೆಯಯೋಜನೆ ಯೋಚನೆಗಳು ಹಲವಿದ್ದು ಅವೆಲ್ಲವೂ ಸಫಲವಾಗಲಿ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ  ಮಾಜಿ ಸಚಿವರಾದ ರಮಾನಾಥ ರೈರವರು ಮಾತನಾಡಿ ಗುರುಗಳು ನಡೆದು ಬಂದ ಹಾದಿಅವಿಸ್ಮರಣೀಯ. ಈಗಿನ ಪೀಳಿಗೆ ಹಿಂದಿನ ಪೀಳಿಗೆಯನ್ನು ಅರ್ಥಮಾಡಿಕೊಂಡು ಮುನ್ನಡೆಯ ಬೇಕಾದುದು ಅಗತ್ಯ. ಗುರುಬೆಳದಿಂಗಳು ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯುತ್ತಾ ಬರುತ್ತಿದೆ. ದೈವಗಳ ಸಾನಿಧ್ಯವಿರುವ ಬಾಕಿಲದ ಮಣ್ಣಿನಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಔಷದೀಯ ವನವನ್ನು ನಿರ್ಮಿಸಿರುವುದು ಒಂದು ಒಳ್ಳೆಯಬೆಳವಣಿಗೆಯಾಗಿದೆ ಎಂದರು.

ಗುರುಬೆಳದಿಂಗಳು ರಿ.ಕುದ್ರೋಳಿ ಇದರ ಅಧ್ಯಕ್ಷರಾದ ಪದ್ಮರಾಜ್ ಆರ್. ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅತಿಥಿಗಳನ್ನುಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ಜಿಲ್ಲೆಯ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಬ್ರಹ್ಮ ಶ್ರೀನಾರಾಯಣಗುರುಗಳ ೧೬೭ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಂಡು ಬಂದಿದ್ದೇವೆ. ಬಾಕಿಲಗುತ್ತಿವಿನಲ್ಲಿ ೧೬೭ಔಷದೀಯಗಿಡಗಳನ್ನು‌ ನೆಟ್ಟು ಇದೀಗ  ಗುರುವನವನ್ನು ಲೋಕಾರ್ಪಣೆ ಗೊಳಿಸಲಾಗಿದೆ. ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಸಿದ್ದಂತವನ್ನುನಾವೆಲ್ಲರೂ ಸಾಧಿಸುತ್ತೇವೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಸಹಾಯ, ನಿರ್ಗತಿಕರಿಗೆ ಆಸರೆ, ಅನಾರೋಗ್ಯದಿಂದಿರುವ ಬಡವರನ್ನುಚಿಕಿತ್ಸೆಗೆ ಸಹಕಾರ ನೀಡುತ್ತಾ ಬಂದಿದ್ದೇವೆ. ಇನ್ನು ಮುಂದಿನ ದಿನಗಳಲ್ಲಿ ಹಲವಾರು ಸಮಾಜ ಮುಖಿ‌ಕಾರ್ಯವನ್ನು ನಡೆಸುವ ಇರಾದೆಇದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ  ಬಂದರು ಹಾಗೂ ಮೀನುಗಾರಿಕ ಸಚಿವರಾದ ಅಂಗಾರ ಎಸ್., ಬಂಟ್ವಾಳ ಶಾಸಕರಾದ ರಾಜೇಶ್ನಾಯ್ಕ್,ರವರು ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಅಧ್ಯಕ್ಷರಾದ ದೇವೇಂದ್ರ ಪೂಜಾರಿ, ಅನಂತಾಡಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ ಕ್ಷೇತ್ರದ ಆಡಳಿತ ಅಧ್ಯಕ್ಷ ವಸಂತಪೂಜಾರಿ, ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಜಯಾನಾಂದ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ಕೆ.ಬಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು‌.

ಇಂತಹ ಕಾರ್ಯಕ್ರಮ ರಾಜ್ಯದ್ಯಂತ ನಡೆಯಬೇಕು:

ಎಸ್. ಅಂಗಾರ

ಕಾರ್ಯಕ್ರಮಕ್ಕೆ ಆಗಮಿಸಿದ ಬಂದರು ಹಾಗೂ ಮೀನುಗಾರಿಕ ಸಚಿವರಾದ ಎಸ್ ಅಂಗಾರರವರು ಪತ್ರಕರ್ತರೊಂದಿಗೆ ಮಾತನಾಡಿ

ಗಿಡಮೂಲಿಕೆಗಳ ಸಸಿಗಳನ್ನು ನೆಟ್ಟು ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಾಕಿಲದಲ್ಲಿ ಔಷದೀಯ ವನವನ್ನುನಿರ್ಮಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಅಳಿವಿನಂಚಿನಲ್ಲಿರುವ ಗಿಡಮೂಲಿಕೆ ಗಿಡಗಳನ್ನು ನೆಟ್ಟುಬೆಳೆಸುವುದು ಅಗತ್ಯವಾಗಿದೆ. ಇಂತಹ ಮಹತ್ಕಾರ್ಯಗಳಿಗೆ ಸರಕಾರದ ಭಾಗದಿಂದ ಸಹಕಾರವನ್ನು ನೀಡಲು ಶ್ರಮಿಸುತ್ತೇನೆ. ಇಂತಹಕಾರ್ಯಕ್ರಮಗಳು ನಮ್ಮ ಜಿಲ್ಲೆಗೆ ಮಾತ್ರ ಸೀಮಿತವಾಗದೆ  ರಾಜ್ಯಾದ್ಯಾಂತ ಔಷದೀಯ ಸಸಿಗಳನ್ನು ನೆಟ್ಟು ಬೆಳೆಸುವಕಾರ್ಯವಾಗಬೇಕು ಎಂದರು


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »