TOP STORIES:

ಅನಂತಾಡಿಯಲ್ಲಿ ಕುದ್ರೋಳಿ ಗುರು ಬೆಳದಿಂಗಳು ಸಂಘಟನೆಯಿಂದ ‘ಗುರುವನ’ ಲೋಕಾರ್ಪಣೆ


ಬದುಕಿನಲ್ಲಿ ಕನಸು ಕಾಣುವುದು ಸುಲಭ ಆದರೆ ಅದನ್ನು ನನಸು ಮಾಡುವುದು ಬಲುಕಷ್ಟತ್ಯಾಗ, ಪರಿಶ್ರಮ, ಇಚ್ಚಾಶಕ್ತಿ ಇರುವತಂಡವೊಂದಿದ್ದರೆ ಯಾವುದನ್ನು ಸಾಧಿಸಲು ಸಾಧ್ಯ ಎಂದು ಹಿಂದುಳಿದ ವರ್ಗ ಹಾಗೂ ಸಮಾಜಕಲ್ಯಾಣ ಸಚಿವರಾದ ಕೋಟಶ್ರೀನಿವಾಸ ಪೂಜಾರಿರವರು ಹೇಳಿದರು.

ಅವರು   ಗುರು ಬೆಳದಿಂಗಳು ರಿ. ಕುದ್ರೋಳಿ ಇದರ ವತಿಯಿಂದ ಅನಂತಾಡಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ, ಶ್ರೀಬ್ರಹ್ಮಬೈದರ್ಕಳ ಗರಡಿಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ೧೬೭ನೇ ಜನ್ಮದಿನಾಚರಣೆಯ ಪ್ರಯುಕ್ತ ೧೬೭ ಔಷದೀಯ ಸಸಿನೆಡುವ ಕಾರ್ಯಕ್ರಮ ಹಾಗೂ ನೂತನವಾಗಿ ನಿರ್ಮಿಸಿರುವ  ಗುರುವವನ್ನು ಲೋಕಾರ್ಪಣೆಗೊಳಿಸಿ ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಬದುಕಿನ ಜೊತೆಗೆ ಪರಿಸರವನ್ನು ಉಳಿಸಿಬೆಳೆಸುವ ಕೆಲಸ ಎಲ್ಲರಿಂದ ಆಗಬೇಕಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿಸಮಾಜದಲ್ಲಿರುವ ಕಟ್ಟಕಡೇಯ ವ್ಯಕ್ತಿಗೂ ಸಹಕಾರ ಮಾಡಬೇಕೆನ್ನುವುದು ಆಶಯ ನನ್ನದಾಗಿದೆ. ಗುರುಬೆಳದಿಂಗಳು ಸಂಸ್ಥೆಯಯೋಜನೆ ಯೋಚನೆಗಳು ಹಲವಿದ್ದು ಅವೆಲ್ಲವೂ ಸಫಲವಾಗಲಿ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ  ಮಾಜಿ ಸಚಿವರಾದ ರಮಾನಾಥ ರೈರವರು ಮಾತನಾಡಿ ಗುರುಗಳು ನಡೆದು ಬಂದ ಹಾದಿಅವಿಸ್ಮರಣೀಯ. ಈಗಿನ ಪೀಳಿಗೆ ಹಿಂದಿನ ಪೀಳಿಗೆಯನ್ನು ಅರ್ಥಮಾಡಿಕೊಂಡು ಮುನ್ನಡೆಯ ಬೇಕಾದುದು ಅಗತ್ಯ. ಗುರುಬೆಳದಿಂಗಳು ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯುತ್ತಾ ಬರುತ್ತಿದೆ. ದೈವಗಳ ಸಾನಿಧ್ಯವಿರುವ ಬಾಕಿಲದ ಮಣ್ಣಿನಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಔಷದೀಯ ವನವನ್ನು ನಿರ್ಮಿಸಿರುವುದು ಒಂದು ಒಳ್ಳೆಯಬೆಳವಣಿಗೆಯಾಗಿದೆ ಎಂದರು.

ಗುರುಬೆಳದಿಂಗಳು ರಿ.ಕುದ್ರೋಳಿ ಇದರ ಅಧ್ಯಕ್ಷರಾದ ಪದ್ಮರಾಜ್ ಆರ್. ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅತಿಥಿಗಳನ್ನುಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ಜಿಲ್ಲೆಯ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಬ್ರಹ್ಮ ಶ್ರೀನಾರಾಯಣಗುರುಗಳ ೧೬೭ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಂಡು ಬಂದಿದ್ದೇವೆ. ಬಾಕಿಲಗುತ್ತಿವಿನಲ್ಲಿ ೧೬೭ಔಷದೀಯಗಿಡಗಳನ್ನು‌ ನೆಟ್ಟು ಇದೀಗ  ಗುರುವನವನ್ನು ಲೋಕಾರ್ಪಣೆ ಗೊಳಿಸಲಾಗಿದೆ. ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಸಿದ್ದಂತವನ್ನುನಾವೆಲ್ಲರೂ ಸಾಧಿಸುತ್ತೇವೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಸಹಾಯ, ನಿರ್ಗತಿಕರಿಗೆ ಆಸರೆ, ಅನಾರೋಗ್ಯದಿಂದಿರುವ ಬಡವರನ್ನುಚಿಕಿತ್ಸೆಗೆ ಸಹಕಾರ ನೀಡುತ್ತಾ ಬಂದಿದ್ದೇವೆ. ಇನ್ನು ಮುಂದಿನ ದಿನಗಳಲ್ಲಿ ಹಲವಾರು ಸಮಾಜ ಮುಖಿ‌ಕಾರ್ಯವನ್ನು ನಡೆಸುವ ಇರಾದೆಇದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ  ಬಂದರು ಹಾಗೂ ಮೀನುಗಾರಿಕ ಸಚಿವರಾದ ಅಂಗಾರ ಎಸ್., ಬಂಟ್ವಾಳ ಶಾಸಕರಾದ ರಾಜೇಶ್ನಾಯ್ಕ್,ರವರು ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಅಧ್ಯಕ್ಷರಾದ ದೇವೇಂದ್ರ ಪೂಜಾರಿ, ಅನಂತಾಡಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ ಕ್ಷೇತ್ರದ ಆಡಳಿತ ಅಧ್ಯಕ್ಷ ವಸಂತಪೂಜಾರಿ, ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಜಯಾನಾಂದ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ಕೆ.ಬಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು‌.

ಇಂತಹ ಕಾರ್ಯಕ್ರಮ ರಾಜ್ಯದ್ಯಂತ ನಡೆಯಬೇಕು:

ಎಸ್. ಅಂಗಾರ

ಕಾರ್ಯಕ್ರಮಕ್ಕೆ ಆಗಮಿಸಿದ ಬಂದರು ಹಾಗೂ ಮೀನುಗಾರಿಕ ಸಚಿವರಾದ ಎಸ್ ಅಂಗಾರರವರು ಪತ್ರಕರ್ತರೊಂದಿಗೆ ಮಾತನಾಡಿ

ಗಿಡಮೂಲಿಕೆಗಳ ಸಸಿಗಳನ್ನು ನೆಟ್ಟು ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಾಕಿಲದಲ್ಲಿ ಔಷದೀಯ ವನವನ್ನುನಿರ್ಮಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಅಳಿವಿನಂಚಿನಲ್ಲಿರುವ ಗಿಡಮೂಲಿಕೆ ಗಿಡಗಳನ್ನು ನೆಟ್ಟುಬೆಳೆಸುವುದು ಅಗತ್ಯವಾಗಿದೆ. ಇಂತಹ ಮಹತ್ಕಾರ್ಯಗಳಿಗೆ ಸರಕಾರದ ಭಾಗದಿಂದ ಸಹಕಾರವನ್ನು ನೀಡಲು ಶ್ರಮಿಸುತ್ತೇನೆ. ಇಂತಹಕಾರ್ಯಕ್ರಮಗಳು ನಮ್ಮ ಜಿಲ್ಲೆಗೆ ಮಾತ್ರ ಸೀಮಿತವಾಗದೆ  ರಾಜ್ಯಾದ್ಯಾಂತ ಔಷದೀಯ ಸಸಿಗಳನ್ನು ನೆಟ್ಟು ಬೆಳೆಸುವಕಾರ್ಯವಾಗಬೇಕು ಎಂದರು


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »