TOP STORIES:

ಅನಿಶಾ ಪೂಜಾರಿಯ ಪ್ರಕರಣದ ಆರೋಪಿ ಬಂಧನ ಆಗದಿದ್ದಲ್ಲಿ ಪ್ರತಿಭಟನೆಗೆ ನಿರ್ಧಾರ


ಕುಂದಾಪುರ ಸೆ.1: ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾದ ಅನಿಶಾ ಪೂಜಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಮಟ್ಟು ಆರೋಪಿ ಚೇತನ್ ಶೆಟ್ಟಿ ಬಂಧನಕ್ಕೆ ಒತ್ತಾಯಿಸುವ ಕುರಿತು ಬಿಲ್ಲವ ಸಮಾಜ ಭಾಂದವರ ಅಭಿಪ್ರಾಯ ಕ್ರೋಡೀಕರಿಸುವ ಸಲುವಾಗಿ ನಿನ್ನೆ ದಿನಾಂಕ 31-08-2020. ಸೋಮವಾರ ಸಂಜೆ 4.00ಗಂಟೆಗೆ ಸ್ಯಾಬರಕಟ್ಟೆ, ಕಾಜ್ರಳ್ಳಿಯಲ್ಲಿ ವಿವಿಧ ಬಿಲ್ಲವ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಮುಖಂಡರ ಸಭೆ ನಡೆಯಿತು.ಸಭೆಯಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಸಂಘಟನೆ ಮತ್ತು ಮುಖಂಡರ ಅಭಿಪ್ರಾಯದ ಪ್ರಕಾರ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಎರಡು ದಿವಸದೊಳಗಾಗಿ ಚೇತನ್ ಶೆಟ್ಟಿಯ ಬಂಧನ ಆಗಬೇಕು ಮತ್ತು ಬಂಧನ ಆಗದಿದ್ದಲ್ಲಿ ಮುಂದಿನ ದಿನದಲ್ಲಿ ಎಲ್ಲಾ ಬಿಲ್ಲವ ಸಮಾಜ ಸಂಘಟನೆಗಳನ್ನು ಸೇರಿಸಿ ಪ್ರತಿಭಟನೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಯಿತು.

ಸಭೆ ಮುಗಿದ ನಂತರ ಬ್ರಹ್ಮಾವರದ ಪೊಲೀಸ್ ವೃತ್ತ ನಿರೀಕ್ಷರನ್ನು ಭೇಟಿ ಮಾಡಿ ಪ್ರಕರಣ ಬಗ್ಗೆ ಮಾಹಿತಿಯನ್ನು ಪಡೆದು ಶ್ರೀಘದಲ್ಲಿ ಆರೋಪಿಯನ್ನು ಬಂಧನ ಮಾಡಬೇಕೆಂದು ಅವರಲ್ಲಿ ಮನವಿ ಮಾಡಲಾಯಿತು. ಮನವಿಗೆ ಸ್ಪಂದಿಸಿದ ಪೊಲೀಸ್ ನಿರೀಕ್ಷರು ಪ್ರಕರಣದ ಆರೋಪಿಯನ್ನು ಶ್ರೀಘದಲ್ಲಿ ಬಂಧನ ಮಾಡಿ ಸೂಕ್ತ ರೀತಿಯಲ್ಲಿ ತನಿಖೆ ಮಾಡುತ್ತೇನೆ ಎನ್ನುವ ಭರವಸೆಯನ್ನು ನೀಡಿರುತ್ತಾರೆ.

ಸಭೆಯಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿ ಮತ್ತು ಪದಾಧಿಕಾರಿಗಳು, ಉಡುಪಿ ಜಿಲ್ಲಾ ಪರಿಷತ್ ಅಧ್ಯಕ್ಷರಾದ ನವೀನ್ ಶಂಕರಪುರ ಮತ್ತು ಪದಾಧಿಕಾರಿಗಳು, ಯಡ್ತಾಡಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಗೀತಾ ಪೂಜಾರಿ ಮತ್ತು ಪದಾಧಿಕಾರಿಗಳು, ಸಮಾಜದ ಮುಖಂಡರುಗಳಾದ ಶೇಖರ್ ಕರ್ಕೇರ, ಸಂಕಪ್ಪ ಎ. ವಕೀಲರು, ಶಂಕರ್ ಶಾಂತಿ ಬಾರ್ಕುರು, ಶೇಖರ್ ಪೂಜಾರಿ ಹಂದಟ್ಟು, ಕೃಷ್ಣ ಪೂಜಾರಿ ಕುಂದಾಪುರ, ಮದನ್ ಪೂಜಾರಿ ಶೇಡಿಮನೆ, ಅನಿಶಾ ಪೂಜಾರಿ ಕುಂಟುಬಸ್ಥರು ಹಾಗೂ ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.

hosakirananews


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »