TOP STORIES:

ಅನಿಶಾ ಪೂಜಾರಿಯ ಪ್ರಕರಣದ ಆರೋಪಿ ಬಂಧನ ಆಗದಿದ್ದಲ್ಲಿ ಪ್ರತಿಭಟನೆಗೆ ನಿರ್ಧಾರ


ಕುಂದಾಪುರ ಸೆ.1: ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾದ ಅನಿಶಾ ಪೂಜಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಮಟ್ಟು ಆರೋಪಿ ಚೇತನ್ ಶೆಟ್ಟಿ ಬಂಧನಕ್ಕೆ ಒತ್ತಾಯಿಸುವ ಕುರಿತು ಬಿಲ್ಲವ ಸಮಾಜ ಭಾಂದವರ ಅಭಿಪ್ರಾಯ ಕ್ರೋಡೀಕರಿಸುವ ಸಲುವಾಗಿ ನಿನ್ನೆ ದಿನಾಂಕ 31-08-2020. ಸೋಮವಾರ ಸಂಜೆ 4.00ಗಂಟೆಗೆ ಸ್ಯಾಬರಕಟ್ಟೆ, ಕಾಜ್ರಳ್ಳಿಯಲ್ಲಿ ವಿವಿಧ ಬಿಲ್ಲವ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಮುಖಂಡರ ಸಭೆ ನಡೆಯಿತು.ಸಭೆಯಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಸಂಘಟನೆ ಮತ್ತು ಮುಖಂಡರ ಅಭಿಪ್ರಾಯದ ಪ್ರಕಾರ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಎರಡು ದಿವಸದೊಳಗಾಗಿ ಚೇತನ್ ಶೆಟ್ಟಿಯ ಬಂಧನ ಆಗಬೇಕು ಮತ್ತು ಬಂಧನ ಆಗದಿದ್ದಲ್ಲಿ ಮುಂದಿನ ದಿನದಲ್ಲಿ ಎಲ್ಲಾ ಬಿಲ್ಲವ ಸಮಾಜ ಸಂಘಟನೆಗಳನ್ನು ಸೇರಿಸಿ ಪ್ರತಿಭಟನೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಯಿತು.

ಸಭೆ ಮುಗಿದ ನಂತರ ಬ್ರಹ್ಮಾವರದ ಪೊಲೀಸ್ ವೃತ್ತ ನಿರೀಕ್ಷರನ್ನು ಭೇಟಿ ಮಾಡಿ ಪ್ರಕರಣ ಬಗ್ಗೆ ಮಾಹಿತಿಯನ್ನು ಪಡೆದು ಶ್ರೀಘದಲ್ಲಿ ಆರೋಪಿಯನ್ನು ಬಂಧನ ಮಾಡಬೇಕೆಂದು ಅವರಲ್ಲಿ ಮನವಿ ಮಾಡಲಾಯಿತು. ಮನವಿಗೆ ಸ್ಪಂದಿಸಿದ ಪೊಲೀಸ್ ನಿರೀಕ್ಷರು ಪ್ರಕರಣದ ಆರೋಪಿಯನ್ನು ಶ್ರೀಘದಲ್ಲಿ ಬಂಧನ ಮಾಡಿ ಸೂಕ್ತ ರೀತಿಯಲ್ಲಿ ತನಿಖೆ ಮಾಡುತ್ತೇನೆ ಎನ್ನುವ ಭರವಸೆಯನ್ನು ನೀಡಿರುತ್ತಾರೆ.

ಸಭೆಯಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿ ಮತ್ತು ಪದಾಧಿಕಾರಿಗಳು, ಉಡುಪಿ ಜಿಲ್ಲಾ ಪರಿಷತ್ ಅಧ್ಯಕ್ಷರಾದ ನವೀನ್ ಶಂಕರಪುರ ಮತ್ತು ಪದಾಧಿಕಾರಿಗಳು, ಯಡ್ತಾಡಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಗೀತಾ ಪೂಜಾರಿ ಮತ್ತು ಪದಾಧಿಕಾರಿಗಳು, ಸಮಾಜದ ಮುಖಂಡರುಗಳಾದ ಶೇಖರ್ ಕರ್ಕೇರ, ಸಂಕಪ್ಪ ಎ. ವಕೀಲರು, ಶಂಕರ್ ಶಾಂತಿ ಬಾರ್ಕುರು, ಶೇಖರ್ ಪೂಜಾರಿ ಹಂದಟ್ಟು, ಕೃಷ್ಣ ಪೂಜಾರಿ ಕುಂದಾಪುರ, ಮದನ್ ಪೂಜಾರಿ ಶೇಡಿಮನೆ, ಅನಿಶಾ ಪೂಜಾರಿ ಕುಂಟುಬಸ್ಥರು ಹಾಗೂ ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.

hosakirananews


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »