TOP STORIES:

ಅನಿಶಾ ಪೂಜಾರಿ ಸಾವಿಗೆ ನ್ಯಾಯ ಒದಗಿಸಲು ಹೋರಾಟಕ್ಕೆ ಸಿದ್ದ : ಬಿಲ್ಲವ ಯುವ ವೇದಿಕೆ ಹೇಳಿಕೆ..!


ಬ್ರಹ್ಮಾವರ : ಉಡುಪಿ ಜಿಲ್ಲೆಯ ಸಾಯಿಬ್ರಕಟ್ಟೆ, ಕಾಜ್ರಳ್ಳಿ ಎಂಬಲ್ಲಿನ ನಿವಾಸಿ ಅನಿಶಾ ಜಿ ಪೂಜಾರಿ ಎಂಬ ಹುಡುಗಿಯ ಆತ್ಮಹತ್ಯೆ ಪ್ರಕರಣ ಈಗ ಅನುಮಾನಕ್ಕೆ ಕಾರಣವಾಗಿದೆ. ಹುಡುಗಿಯ ಸಾವಿನ ಪ್ರಕರಣ ಸಮಗ್ರ ತನಿಖೆಗೆ ಬಿಲ್ಲವ ಯುವ ವೇದಿಕೆ ಒತ್ತಾಯಿಸಿದೆ.ಹಾಗೂ ಪ್ರೀತಿಯ ಹೆಸರಿನಲ್ಲಿ ಮೋಸ ಮಾಡಿ ಆತ್ಮಹತ್ಯೆಗೆ ಕಾರಣವಾದ ಹುಡಗನಿಗೆ ತಕ್ಕ ಶಿಕ್ಷೆಯಾಗ‌ಬೇಕೆಂದು ಆತನ ವಿರುದ್ಧ ಬಿಲ್ಲವರ ಸಂಘ ಆಗ್ರಹಿಸಿದೆ.

ಅನಿಶಾ ಜಿ. ಪೂಜಾರಿ ಹಾಗೂ ಸ್ಥಳೀಯ ಚೇತನ್ ಶೆಟ್ಟಿಯ ಪ್ರೇಮಪ್ರಕರಣದ ಕುಮ್ಮಕ್ಕಿನಿಂದ ಮನನೊಂದು ದಿನಾಂಕ-21-08-2020 ರಂದು ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದನೀಯ. ಎಂ.ಬಿ.ಎ ಪದವೀಧರೆಯಾಗಿ,ಕಂಪೆನಿಯೊಂದರಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದ ಅನಿಶಾ ಮತ್ತು ಚೇತನ್ ಶೆಟ್ಟಿಯೊಡನೆ ಪ್ರೀತಿ ಸಂಬಂಧಗಳಿದ್ದು ಇದು ಮದುವೆಯ ವಿಚಾರದವರೆಗೆ ಮುಂದುವರಿದಿತ್ತು.

ಈ ಹಂತದಲ್ಲಿ ಜಾಣತನದಿಂದ ವಿವಿಧ ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಚೇತನ್ ಶೆಟ್ಟಿಯೊಡನೆ ಪರಿಪರಿಯಾಗಿ ನಿವೇದಿಸಿಕೊಂಡಿದ್ದರೂ ಆತನ ವಂಚನೆಯ ಬಲೆಗೆ ಸಿಲುಕಿ ಆತನಿಗೇ ಸಂಬಂಧಿಸಿದ ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚೇತನ್ ಶೆಟ್ಟಿಯ ಎಲ್ಲ ವಂಚನೆಗಳ ಬಗೆಗೆ ಸವಿವರ ಡೆತ್ ನೋಟ್‌ ಮತ್ತು ಮೊಬೈಲ್ ಸಂಭಾಷಣೆ ಸಿಕ್ಕಿದ್ದು, ಈ ಪ್ರಕರಣಕ್ಕೆ ಚೇತನ್ ಶೆಟ್ಟಿಯ ಮೋಸವೆ ಪ್ರಧಾನ ಕಾರಣವಾಗಿದೆ.

ಕೌಟುಂಬಿಕವಾಗಿ ಬಡತನದ ಹಿನ್ನೆಲೆಯಿರುವ ಅನಿಶಾ ಮನೆಯವರು ಒಂದೆಡೆ ಮನೆ ಮಗಳ ಸಾವಿನ ನೋವು ಮತ್ತೊಂದೆಡೆ ಅನ್ಯಾಯವನ್ನು ಎದುರಿಸುವುದು ಹೇಗೆಂದು ಪರಿತಪಿಸುತ್ತಿರುವ ಸಂದರ್ಭ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಮಾನ್ಯ ಪ್ರವೀಣ್ ಎಂ. ಪೂಜಾರಿ ಯವರನ್ನು ಸಂಪರ್ಕಿಸಿದ್ದಾರೆ.

ತಕ್ಷಣವೆ ಶ್ರೀಯುತರು ಮಾನವೀಯ ದೃಷ್ಟಿ ಮತ್ತು ಸಮಾಜಾಭಿಮಾನದಿಂದ ವೇದಿಕೆಯ ಸದಸ್ಯರೊಡಗೂಡಿ ಬ್ರಹ್ಮಾವರ ಪೋಲಿಸ್ ಉಪನಿರೀಕ್ಷಕರನ್ನು ಖುದ್ದು ಭೇಟಿಯಾದಾಗ, ಈಗಾಗಲೇ ಚೇತನ್ ಶೆಟ್ಟಿಯ ವಿರುದ್ಧ FIR ದಾಖಲಿಸಲಾಗಿದ್ದು, ಪ್ರಕರಣವನ್ನು ಕೂಲಂಕುಷ ವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಅನಿಶಾ ಮನೆಯವರ ಅಸಹಾಯಕತೆಯನ್ನು ಅರಿತಿರುವ ಚೇತನ್ ಶೆಟ್ಟಿ ತನ್ನ ಮುಂದಿನ ವೈಯಕ್ತಿಕ ಮತ್ತು ವೈವಾಹಿಕ ಜೀವನಕ್ಕೆ ಕುಂದು ಬರಬಾರದೆಂದು ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಇನ್ನಿಲ್ಲದ ರಾಜಕೀಯ ಪ್ರಭಾವವನ್ನು ಬಳಸಿ ಕೊಂಡಿರುವುದು ಗಮನಕ್ಕೆ ಬಂದಿದೆ. ಈ ವಿಚಾರದಲ್ಲಿ ನಮ್ಮ ಬಿಲ್ಲವ ಸಮಾಜ ಅನಿಶಾ ಪೂಜಾರಿಯವರ ಪರ ನಿಲ್ಲಬೇಕಾಗಿದೆ.

ಚೇತನ್ ಶೆಟ್ಟಿಯಂತಹ ದುಷ್ಟರಿಂದ ಇನ್ನಷ್ಟು ಅಮಾಯಕ ಹೆಣ್ಣು ಮಕ್ಕಳು ಶೋಷಣೆಗೊಳಗಾಗು ವುದನ್ನು ತಪ್ಪಿಸಲು ಅತ್ಯವಶ್ಯ ಜಾಗೃತರಾಗಬೇಕಿದೆ. ಹಾಗೂ ಅಸಹಾಯಕರಾದ ಅನಿಶಾ ಪೂಜಾರಿಯ ಮನೆಯವರಿಗೆ ನ್ಯಾಯ ದೊರಕಿಸಲು ಸಮಸ್ತ ಸಮಾಜ ಸಂಘಟಿತ ಧ್ವನಿಯಾಗುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಬಯಸುತ್ತದೆ. ಹಾಗೂ ಈ ಪ್ರಕರಣದಲ್ಲಿ ತಪ್ಪಿತಸ್ಥನಿಗೆ ಶಿಕ್ಷೆಯಾಗಲೇಬೇಕೆಂಬ ನಿಟ್ಟಿನಲ್ಲಿ ಅಗತ್ಯ ಕಾನೂನಿನ ನೆರವಿನೊಡನೆ ಅಮಾಯಕರ ಪರವಾದ ಯಾವುದೇ ಹೋರಾಟಕ್ಕೂ ಪ್ರವೀಣ್ ಪೂಜಾರಿ ಮುಂದಾಳತ್ವದ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಹಗಲಿರುಳು ಸಿದ್ಧವಿದೆ ಎಂದು ಹೇಳಿಕೆ ನೀಡಿದ್ದಾರೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »