TOP STORIES:

ಅನಿಶಾ ಪೂಜಾರಿ ಸಾವಿಗೆ ನ್ಯಾಯ ಒದಗಿಸಲು ಹೋರಾಟಕ್ಕೆ ಸಿದ್ದ : ಬಿಲ್ಲವ ಯುವ ವೇದಿಕೆ ಹೇಳಿಕೆ..!


ಬ್ರಹ್ಮಾವರ : ಉಡುಪಿ ಜಿಲ್ಲೆಯ ಸಾಯಿಬ್ರಕಟ್ಟೆ, ಕಾಜ್ರಳ್ಳಿ ಎಂಬಲ್ಲಿನ ನಿವಾಸಿ ಅನಿಶಾ ಜಿ ಪೂಜಾರಿ ಎಂಬ ಹುಡುಗಿಯ ಆತ್ಮಹತ್ಯೆ ಪ್ರಕರಣ ಈಗ ಅನುಮಾನಕ್ಕೆ ಕಾರಣವಾಗಿದೆ. ಹುಡುಗಿಯ ಸಾವಿನ ಪ್ರಕರಣ ಸಮಗ್ರ ತನಿಖೆಗೆ ಬಿಲ್ಲವ ಯುವ ವೇದಿಕೆ ಒತ್ತಾಯಿಸಿದೆ.ಹಾಗೂ ಪ್ರೀತಿಯ ಹೆಸರಿನಲ್ಲಿ ಮೋಸ ಮಾಡಿ ಆತ್ಮಹತ್ಯೆಗೆ ಕಾರಣವಾದ ಹುಡಗನಿಗೆ ತಕ್ಕ ಶಿಕ್ಷೆಯಾಗ‌ಬೇಕೆಂದು ಆತನ ವಿರುದ್ಧ ಬಿಲ್ಲವರ ಸಂಘ ಆಗ್ರಹಿಸಿದೆ.

ಅನಿಶಾ ಜಿ. ಪೂಜಾರಿ ಹಾಗೂ ಸ್ಥಳೀಯ ಚೇತನ್ ಶೆಟ್ಟಿಯ ಪ್ರೇಮಪ್ರಕರಣದ ಕುಮ್ಮಕ್ಕಿನಿಂದ ಮನನೊಂದು ದಿನಾಂಕ-21-08-2020 ರಂದು ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದನೀಯ. ಎಂ.ಬಿ.ಎ ಪದವೀಧರೆಯಾಗಿ,ಕಂಪೆನಿಯೊಂದರಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದ ಅನಿಶಾ ಮತ್ತು ಚೇತನ್ ಶೆಟ್ಟಿಯೊಡನೆ ಪ್ರೀತಿ ಸಂಬಂಧಗಳಿದ್ದು ಇದು ಮದುವೆಯ ವಿಚಾರದವರೆಗೆ ಮುಂದುವರಿದಿತ್ತು.

ಈ ಹಂತದಲ್ಲಿ ಜಾಣತನದಿಂದ ವಿವಿಧ ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಚೇತನ್ ಶೆಟ್ಟಿಯೊಡನೆ ಪರಿಪರಿಯಾಗಿ ನಿವೇದಿಸಿಕೊಂಡಿದ್ದರೂ ಆತನ ವಂಚನೆಯ ಬಲೆಗೆ ಸಿಲುಕಿ ಆತನಿಗೇ ಸಂಬಂಧಿಸಿದ ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚೇತನ್ ಶೆಟ್ಟಿಯ ಎಲ್ಲ ವಂಚನೆಗಳ ಬಗೆಗೆ ಸವಿವರ ಡೆತ್ ನೋಟ್‌ ಮತ್ತು ಮೊಬೈಲ್ ಸಂಭಾಷಣೆ ಸಿಕ್ಕಿದ್ದು, ಈ ಪ್ರಕರಣಕ್ಕೆ ಚೇತನ್ ಶೆಟ್ಟಿಯ ಮೋಸವೆ ಪ್ರಧಾನ ಕಾರಣವಾಗಿದೆ.

ಕೌಟುಂಬಿಕವಾಗಿ ಬಡತನದ ಹಿನ್ನೆಲೆಯಿರುವ ಅನಿಶಾ ಮನೆಯವರು ಒಂದೆಡೆ ಮನೆ ಮಗಳ ಸಾವಿನ ನೋವು ಮತ್ತೊಂದೆಡೆ ಅನ್ಯಾಯವನ್ನು ಎದುರಿಸುವುದು ಹೇಗೆಂದು ಪರಿತಪಿಸುತ್ತಿರುವ ಸಂದರ್ಭ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಮಾನ್ಯ ಪ್ರವೀಣ್ ಎಂ. ಪೂಜಾರಿ ಯವರನ್ನು ಸಂಪರ್ಕಿಸಿದ್ದಾರೆ.

ತಕ್ಷಣವೆ ಶ್ರೀಯುತರು ಮಾನವೀಯ ದೃಷ್ಟಿ ಮತ್ತು ಸಮಾಜಾಭಿಮಾನದಿಂದ ವೇದಿಕೆಯ ಸದಸ್ಯರೊಡಗೂಡಿ ಬ್ರಹ್ಮಾವರ ಪೋಲಿಸ್ ಉಪನಿರೀಕ್ಷಕರನ್ನು ಖುದ್ದು ಭೇಟಿಯಾದಾಗ, ಈಗಾಗಲೇ ಚೇತನ್ ಶೆಟ್ಟಿಯ ವಿರುದ್ಧ FIR ದಾಖಲಿಸಲಾಗಿದ್ದು, ಪ್ರಕರಣವನ್ನು ಕೂಲಂಕುಷ ವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಅನಿಶಾ ಮನೆಯವರ ಅಸಹಾಯಕತೆಯನ್ನು ಅರಿತಿರುವ ಚೇತನ್ ಶೆಟ್ಟಿ ತನ್ನ ಮುಂದಿನ ವೈಯಕ್ತಿಕ ಮತ್ತು ವೈವಾಹಿಕ ಜೀವನಕ್ಕೆ ಕುಂದು ಬರಬಾರದೆಂದು ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಇನ್ನಿಲ್ಲದ ರಾಜಕೀಯ ಪ್ರಭಾವವನ್ನು ಬಳಸಿ ಕೊಂಡಿರುವುದು ಗಮನಕ್ಕೆ ಬಂದಿದೆ. ಈ ವಿಚಾರದಲ್ಲಿ ನಮ್ಮ ಬಿಲ್ಲವ ಸಮಾಜ ಅನಿಶಾ ಪೂಜಾರಿಯವರ ಪರ ನಿಲ್ಲಬೇಕಾಗಿದೆ.

ಚೇತನ್ ಶೆಟ್ಟಿಯಂತಹ ದುಷ್ಟರಿಂದ ಇನ್ನಷ್ಟು ಅಮಾಯಕ ಹೆಣ್ಣು ಮಕ್ಕಳು ಶೋಷಣೆಗೊಳಗಾಗು ವುದನ್ನು ತಪ್ಪಿಸಲು ಅತ್ಯವಶ್ಯ ಜಾಗೃತರಾಗಬೇಕಿದೆ. ಹಾಗೂ ಅಸಹಾಯಕರಾದ ಅನಿಶಾ ಪೂಜಾರಿಯ ಮನೆಯವರಿಗೆ ನ್ಯಾಯ ದೊರಕಿಸಲು ಸಮಸ್ತ ಸಮಾಜ ಸಂಘಟಿತ ಧ್ವನಿಯಾಗುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಬಯಸುತ್ತದೆ. ಹಾಗೂ ಈ ಪ್ರಕರಣದಲ್ಲಿ ತಪ್ಪಿತಸ್ಥನಿಗೆ ಶಿಕ್ಷೆಯಾಗಲೇಬೇಕೆಂಬ ನಿಟ್ಟಿನಲ್ಲಿ ಅಗತ್ಯ ಕಾನೂನಿನ ನೆರವಿನೊಡನೆ ಅಮಾಯಕರ ಪರವಾದ ಯಾವುದೇ ಹೋರಾಟಕ್ಕೂ ಪ್ರವೀಣ್ ಪೂಜಾರಿ ಮುಂದಾಳತ್ವದ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಹಗಲಿರುಳು ಸಿದ್ಧವಿದೆ ಎಂದು ಹೇಳಿಕೆ ನೀಡಿದ್ದಾರೆ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »