TOP STORIES:

ಅನಿಶಾ ಪೂಜಾರಿ ಸಾವಿಗೆ ನ್ಯಾಯ ಒದಗಿಸಲು ಹೋರಾಟಕ್ಕೆ ಸಿದ್ದ : ಬಿಲ್ಲವ ಯುವ ವೇದಿಕೆ ಹೇಳಿಕೆ..!


ಬ್ರಹ್ಮಾವರ : ಉಡುಪಿ ಜಿಲ್ಲೆಯ ಸಾಯಿಬ್ರಕಟ್ಟೆ, ಕಾಜ್ರಳ್ಳಿ ಎಂಬಲ್ಲಿನ ನಿವಾಸಿ ಅನಿಶಾ ಜಿ ಪೂಜಾರಿ ಎಂಬ ಹುಡುಗಿಯ ಆತ್ಮಹತ್ಯೆ ಪ್ರಕರಣ ಈಗ ಅನುಮಾನಕ್ಕೆ ಕಾರಣವಾಗಿದೆ. ಹುಡುಗಿಯ ಸಾವಿನ ಪ್ರಕರಣ ಸಮಗ್ರ ತನಿಖೆಗೆ ಬಿಲ್ಲವ ಯುವ ವೇದಿಕೆ ಒತ್ತಾಯಿಸಿದೆ.ಹಾಗೂ ಪ್ರೀತಿಯ ಹೆಸರಿನಲ್ಲಿ ಮೋಸ ಮಾಡಿ ಆತ್ಮಹತ್ಯೆಗೆ ಕಾರಣವಾದ ಹುಡಗನಿಗೆ ತಕ್ಕ ಶಿಕ್ಷೆಯಾಗ‌ಬೇಕೆಂದು ಆತನ ವಿರುದ್ಧ ಬಿಲ್ಲವರ ಸಂಘ ಆಗ್ರಹಿಸಿದೆ.

ಅನಿಶಾ ಜಿ. ಪೂಜಾರಿ ಹಾಗೂ ಸ್ಥಳೀಯ ಚೇತನ್ ಶೆಟ್ಟಿಯ ಪ್ರೇಮಪ್ರಕರಣದ ಕುಮ್ಮಕ್ಕಿನಿಂದ ಮನನೊಂದು ದಿನಾಂಕ-21-08-2020 ರಂದು ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದನೀಯ. ಎಂ.ಬಿ.ಎ ಪದವೀಧರೆಯಾಗಿ,ಕಂಪೆನಿಯೊಂದರಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದ ಅನಿಶಾ ಮತ್ತು ಚೇತನ್ ಶೆಟ್ಟಿಯೊಡನೆ ಪ್ರೀತಿ ಸಂಬಂಧಗಳಿದ್ದು ಇದು ಮದುವೆಯ ವಿಚಾರದವರೆಗೆ ಮುಂದುವರಿದಿತ್ತು.

ಈ ಹಂತದಲ್ಲಿ ಜಾಣತನದಿಂದ ವಿವಿಧ ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಚೇತನ್ ಶೆಟ್ಟಿಯೊಡನೆ ಪರಿಪರಿಯಾಗಿ ನಿವೇದಿಸಿಕೊಂಡಿದ್ದರೂ ಆತನ ವಂಚನೆಯ ಬಲೆಗೆ ಸಿಲುಕಿ ಆತನಿಗೇ ಸಂಬಂಧಿಸಿದ ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚೇತನ್ ಶೆಟ್ಟಿಯ ಎಲ್ಲ ವಂಚನೆಗಳ ಬಗೆಗೆ ಸವಿವರ ಡೆತ್ ನೋಟ್‌ ಮತ್ತು ಮೊಬೈಲ್ ಸಂಭಾಷಣೆ ಸಿಕ್ಕಿದ್ದು, ಈ ಪ್ರಕರಣಕ್ಕೆ ಚೇತನ್ ಶೆಟ್ಟಿಯ ಮೋಸವೆ ಪ್ರಧಾನ ಕಾರಣವಾಗಿದೆ.

ಕೌಟುಂಬಿಕವಾಗಿ ಬಡತನದ ಹಿನ್ನೆಲೆಯಿರುವ ಅನಿಶಾ ಮನೆಯವರು ಒಂದೆಡೆ ಮನೆ ಮಗಳ ಸಾವಿನ ನೋವು ಮತ್ತೊಂದೆಡೆ ಅನ್ಯಾಯವನ್ನು ಎದುರಿಸುವುದು ಹೇಗೆಂದು ಪರಿತಪಿಸುತ್ತಿರುವ ಸಂದರ್ಭ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಮಾನ್ಯ ಪ್ರವೀಣ್ ಎಂ. ಪೂಜಾರಿ ಯವರನ್ನು ಸಂಪರ್ಕಿಸಿದ್ದಾರೆ.

ತಕ್ಷಣವೆ ಶ್ರೀಯುತರು ಮಾನವೀಯ ದೃಷ್ಟಿ ಮತ್ತು ಸಮಾಜಾಭಿಮಾನದಿಂದ ವೇದಿಕೆಯ ಸದಸ್ಯರೊಡಗೂಡಿ ಬ್ರಹ್ಮಾವರ ಪೋಲಿಸ್ ಉಪನಿರೀಕ್ಷಕರನ್ನು ಖುದ್ದು ಭೇಟಿಯಾದಾಗ, ಈಗಾಗಲೇ ಚೇತನ್ ಶೆಟ್ಟಿಯ ವಿರುದ್ಧ FIR ದಾಖಲಿಸಲಾಗಿದ್ದು, ಪ್ರಕರಣವನ್ನು ಕೂಲಂಕುಷ ವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಅನಿಶಾ ಮನೆಯವರ ಅಸಹಾಯಕತೆಯನ್ನು ಅರಿತಿರುವ ಚೇತನ್ ಶೆಟ್ಟಿ ತನ್ನ ಮುಂದಿನ ವೈಯಕ್ತಿಕ ಮತ್ತು ವೈವಾಹಿಕ ಜೀವನಕ್ಕೆ ಕುಂದು ಬರಬಾರದೆಂದು ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಇನ್ನಿಲ್ಲದ ರಾಜಕೀಯ ಪ್ರಭಾವವನ್ನು ಬಳಸಿ ಕೊಂಡಿರುವುದು ಗಮನಕ್ಕೆ ಬಂದಿದೆ. ಈ ವಿಚಾರದಲ್ಲಿ ನಮ್ಮ ಬಿಲ್ಲವ ಸಮಾಜ ಅನಿಶಾ ಪೂಜಾರಿಯವರ ಪರ ನಿಲ್ಲಬೇಕಾಗಿದೆ.

ಚೇತನ್ ಶೆಟ್ಟಿಯಂತಹ ದುಷ್ಟರಿಂದ ಇನ್ನಷ್ಟು ಅಮಾಯಕ ಹೆಣ್ಣು ಮಕ್ಕಳು ಶೋಷಣೆಗೊಳಗಾಗು ವುದನ್ನು ತಪ್ಪಿಸಲು ಅತ್ಯವಶ್ಯ ಜಾಗೃತರಾಗಬೇಕಿದೆ. ಹಾಗೂ ಅಸಹಾಯಕರಾದ ಅನಿಶಾ ಪೂಜಾರಿಯ ಮನೆಯವರಿಗೆ ನ್ಯಾಯ ದೊರಕಿಸಲು ಸಮಸ್ತ ಸಮಾಜ ಸಂಘಟಿತ ಧ್ವನಿಯಾಗುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಬಯಸುತ್ತದೆ. ಹಾಗೂ ಈ ಪ್ರಕರಣದಲ್ಲಿ ತಪ್ಪಿತಸ್ಥನಿಗೆ ಶಿಕ್ಷೆಯಾಗಲೇಬೇಕೆಂಬ ನಿಟ್ಟಿನಲ್ಲಿ ಅಗತ್ಯ ಕಾನೂನಿನ ನೆರವಿನೊಡನೆ ಅಮಾಯಕರ ಪರವಾದ ಯಾವುದೇ ಹೋರಾಟಕ್ಕೂ ಪ್ರವೀಣ್ ಪೂಜಾರಿ ಮುಂದಾಳತ್ವದ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಹಗಲಿರುಳು ಸಿದ್ಧವಿದೆ ಎಂದು ಹೇಳಿಕೆ ನೀಡಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »