TOP STORIES:

ಅಮ್ಮ ಹಚ್ಚಿದ ದೀಪಾವಳಿಯ ಹಣತೆ..!! ಬರಹ: ವಿಜೇತ್ ಪೂಜಾರಿ ಶಿಬಾಜೆ


ಬೆಳಗ್ಗೆ ಮಾಡಿದ್ದ ಒಣಗಿದ ರೊಟ್ಟಿಯ ತುಂಡನ್ನು ಸೂರ್ಯ ಇನ್ನೇನೋ ಮುಳುಗುವ ಹಂತಕ್ಕೆ ಬಂದಿದ್ದಾನೆ ಎನ್ನುವ ಅವಸರದಲ್ಲಿ ಕೈಯಲ್ಲಿ ಹಿಡಿದ ಮಗ,ಅದರ ಜೊತೆಗೆ ಬಿಟ್ಟು ಬಿಡದ ಹಾಳಾದ ತಲೆ ನೋವಿಗೆ ಇಳಿ ಸಂಜೆ ಮೂರರ ಹೊತ್ತಿಗೆ ಮಾಡಿದ ತಾಯಿಯ ಕರಿ “ಟೀ”ಯ ಉಳಿದ ಒಂದಿಷ್ಟನ್ನೂ ಕುಡಿಯುತ್ತಾ, ಸೊಟ್ಟಗಿನ ಪಾತ್ರೆಯ ತಳದಲ್ಲಿ ಇದ್ದ ಟೀ ಪುಡಿಯನ್ನು ಬಾಯಿಯಿಂದ ಉಫ್ ಉಫ್ ಎಂದು ಬದಿಗೆ ಸರಿಸಿ ತುಂಡು ರೊಟ್ಟಿಯ ಒಂದು ಭಾಗವನ್ನು ಇನ್ನೇನು ಅದರಲ್ಲಿ ಅದ್ದಿ ಬಾಯಿಗಿಡಬೇಕು ಎನ್ನುವಷ್ಟರಲ್ಲಿ ಅದೇ ಮರುಗಿದ ಧ್ವನಿಯ ಲಯದಲ್ಲಿ ಒಳಗಿಂದ ಕೇಳಿದ ಆ ಮಾತಿಗೆ ಇದ್ದ ರೊಟ್ಟಿಯನ್ನು ಮೂಲೆಯಲ್ಲಿ ಅರ್ಧ ಕಬ್ಬಿನ ಸರಪಳಿ ಮತ್ತು ಗೋಣಿ ಚೀಲದಲ್ಲಿ ಮಾಡಿದ ಹಗ್ಗದಲ್ಲಿ ಬಂಧಿಯಾದ ಟಾಮಿಗೆ ಕೂತಲ್ಲಿಂದ ಎಸೆದು ಬಿಟ್ಟ,ಆ ರೊಟ್ಟಿಯ ತುಂಡು ಪಕ್ಕದಲ್ಲಿ ಬೀಳದೆ ತನ್ನ ಕಾಲು ಮತ್ತು ಕೈಯಿಂದ ಹೇಗೋ ಮಾಡಿ ಮಣ್ಣಿನ ಮುದ್ದೆಯ ಜೊತೆಗೆ ಆ ರೊಟ್ಟಿಯ ತುಂಡನ್ನು ತಿಂದು ಬಿಟ್ಟ..!

ಮತ್ತೇ ಆ ಧ್ವನಿ ಬಿರುಸಾಗಿತ್ತು..

“ನಮ ನರಮನಿ ಲೆಕಾ ಏಪಾ ಆಪನ”(ನಾವು ಯಾವಾಗ ಮನುಷ್ಯರಂತೆ ಆಗುತ್ತಿವೋ).

ಇತ್ತ ಮಗ ಚಂದು ಅದೇನೋ ಟಾಮಿಯನ್ನು ನೋಡುತ್ತಿರುವಾಗ ಮುಂದಿನ ವಾರ ದೀಪಾವಳಿ ಅಲ್ಲವ ಎಂದು ಒಂದು ಸಲ ಆಲೋಚಿಸಿ,ಅಮ್ಮನಲ್ಲಿ “ಅಮ್ಮ ಬರ್ಪುನ ವಾರ ಪರ್ಬ ಅತ”(ಮುಂದಿನ ವಾರ ದೀಪಾವಳಿ ಅಲ್ಲವೇ) ಎಂದು ಬಳಲಿದ ಧ್ವನಿಯಲ್ಲಿ ಇತ್ತ ಹೇಳದಂತೆಯು ಇತ್ತ ಕಡೆ ಕೇಳದಂತೆಯು ಹೇಳಿ ಬಚ್ಚಲು ಮನೆಗೆ ಬಿಸಿ ನೀರು ಕಾಯಿಸಲು ನಿನ್ನೆ ಇಟ್ಟ ಚಿಮಿಣಿ ದೀಪದ ಕಡೆ ಕೈಯಾಡಿಸಿ ಮಸಿ ಬಳಿದ ಆ ದೀಪವನ್ನು ಎತ್ತಿಕೊಂಡು ಹೊರ ನಡೆದನು ಚಂದು..!

ಇತ್ತ ಕಡೆ ಚಂದುನ ಅಮ್ಮ ಒಲೆಯ ಮೇಲೆ ಮೂಲೆಯಲ್ಲಿ ಇದ್ದ ಮಣ್ಣಿನ ಪಾತ್ರೆ ಮಸಿಯಿಂದ ಕಪ್ಪಾಗಿದ್ದನ್ನು ತೊಳೆಯಲು ಎಟುಗದ ಕೈಯಿಂದ ಹೇಗೋ ಕೆಳಗೆ ಇಳಿಸಿ ಹೊರ ನಡೆದಳು.

ಬಚ್ಚಲು ಮನೆ ದಾಟಿ ಸಾಗುವಾಗ “ಒಂದು ಸಿಹಿ ಮಾಡಲು ಒಂದು ಬೆಲ್ಲ ಕೂಡ ಇಲ್ಲಿ ಇಲ್ಲ” ಎಂದು ಗೊಣಗುತ್ತಾ ಹಳೆಯ ಕಲ್ಲಿನ ಮೆಟ್ಟಿಲನ್ನು ದಾಟಿ ತೋಟದ ತೊರೆಯತ್ತ ಸಾಗಿದಳು.ಇತ್ತ ಕಡೆ ಚಂದು ಆ ಮಣ್ಣಿನ ಮಡಿಕೆಯನ್ನು ನೋಡುತ್ತಾ,ಕಳೆದ ಬಾರಿ ಅಕ್ಕ ಗಂಡನ ಮನೆಯಿಂದ ಬಂದಾಗ ರಫೀಕಜ್ಜನ ಅಂಗಡಿಯಿಂದ ತಂದ ಆ ಮಡಿಕೆಯ ಪಾತ್ರೆಗಳು,ಅದರ ಜೊತೆಗೆ ಒಂದಿಷ್ಟೂ ತಂದ ದಿನಸಿಯ ಹಣವನ್ನು ಮೊನ್ನೆ ಮೊನ್ನೆ ಇದ್ದ ಕರಿ ಮೆಣಸನ್ನು ಮಾರಿ ಕೊಟ್ಟು ಬಂದಾಗ,ಕೋಪದಿಂದ ಅಜ್ಜ ಬಾಯಿಗೆ ಬಂದ ಹಾಗೆ ಬೈದು ನೀನು ಇನ್ನು ಇಲ್ಲಿಗೆ ಬರಬೇಡ ಅಂದದ್ದು ಕೂಡ ನೆನಪಾಗಿ ಹೋಯಿತು..!

ಇಂತಹ ಕಷ್ಟದಿಂದ ಇನ್ಯಾವಾಗ ನಾವು ಬರುತ್ತೇವೆ ಎನ್ನುತ್ತಾ,ಈ ದೀಪಾವಳಿಗೂ ಅಕ್ಕಾ ಬರುವಳು ಎನ್ನುವ ಮಾಹಿತಿಯನ್ನೂ ಮೊನ್ನೆ ಮೊನ್ನೆ ಪಕ್ಕದ ಮನೆಯ ಗೌಡರು ಹೇಳಿದ್ದು ನೆನಪಾಯಿತು.!( ಅಲ್ಲಿ ಮಾತ್ರ ದೂರವಾಣಿಯ ಸಂಪರ್ಕ ಇತ್ತು.)

ಇತ್ತ ಕಡೆ ತಾಯಿ ಆ ಪಾತ್ರೆಯನ್ನು ಮೊದಲಿನಂತೆ ಸ್ವಚ್ಚ ಮಾಡಿ ಸುಸ್ತಾದ ದೇಹದಿಂದ ಮೆಟ್ಟಿಲು ಹತ್ತುತ್ತಾ ಮನೆಯ ಒಳಗಡೆ ನಡೆದಳು.

ಯಾವುದೋ ವಸ್ತುವನ್ನು ಹುಡುಕುತ್ತಾ ಸಾಗಿದ ಚಂದುನ ಅಮ್ಮನಿಗೆ ಎಂದೋ ಇಟ್ಟಿದ್ದ “ಹಣತೆ”ಯ ಕಟ್ಟು ಧೋಪ್ಪನೆ ಕೆಳಗೆ ಬಿದ್ದು ಬಿಡ್ತು..!
ಅದರಲ್ಲಿ ಒಡೆಯದೆ ಇದ್ದ ಎರಡೂ ಮೂರು ಹಣತೆಯನ್ನು ತೆಗೆದು ದೇವರ ಪಟದ ಹತ್ತಿರ ಇದ್ದ ನಿನ್ನೆ ಉಳಿದ ಬತ್ತಿಯ ತುಂಡನ್ನು ತೆಗೆದು ಎಣ್ಣೆ ಹಾಕಿ ಹಣತೆಯನ್ನು ಹಚ್ಚಿ ಬಿಟ್ಟಳು..!

ಇತ್ತ ಚಂದು ಆ ಹಣತೆಯ ಬೆಳಕನ್ನು ನೋಡಿ ಏನೋ ಖುಷಿಯಾಗಿ “ಅಮ್ಮ ಹಚ್ಚಿದ ದೀಪಾವಳಿಯ ಹಣತೆ “ಎಂದುಕೊಂಡು,ತೋಟದ ಬದಿಯಲ್ಲಿ ನೆಟ್ಟಿದ್ದ ಮರ ಗೆಣಸು ಎರಡು ಮೂರು ದಿನದಿಂದ ಹಂದಿ ಮತ್ತು ಹೆಗ್ಗಣದ ಬಾಯಿಗೆ ತುತ್ತಾಗಿದ್ದನು ಬೆಳಗ್ಗೆ ಕಂಡಿದ್ದನು.

ಸಿಕ್ಕಿದಷ್ಟು ಸಿಗಲಿ ಎಂಬ ಭಾವದಿಂದ ಹಳೆಯ ಹಾರೆಯನ್ನು ಕೊಟ್ಟಿಗೆಯ ಮೇಲಿಂದ ತೆಗೆದು ಹೆಗಲಿಗೆ ಇರಿಸಿ ಇನ್ನೇನೋ ಕತ್ತಲೆ ಆಗಬೇಕು ಎನ್ನುವ ಸಮಯದಲ್ಲೇ ಹೊರ ನಡೆದನು..

ಬರಹ: ವಿಜೇತ್ ಪೂಜಾರಿ ಶಿಬಾಜೆ


Related Posts

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »