TOP STORIES:

ಇಂಡಿಯನ್ ಟಾಯ್ಲೆಟ್ V/s ವೆಸ್ಟರ್ನ್ ಟಾಯ್ಲೆಟ್ ಸೀಟ್, ಆರೋಗ್ಯಕ್ಕೆ ಯಾವುದು ಬೆಸ್ಟ್?


ಬದಲಾದ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿ ವೆಸ್ಟರ್ನ್‌ ಟಾಯ್ಲೆಟ್‌ಗಳ ಬಳಕೆ ಹೆಚ್ಚುತ್ತಿದೆ. ಹಳೆಯ ಕಾಲದ ಕೆಲವೇ ಕೆಲವು ಮನೆಗಳಲ್ಲಿ ಮಾತ್ರ ಇಂಡಿಯನ್‌ ಟಾಯ್ಲೆಟ್ ಬಳಕೆಯಲ್ಲಿದೆ. ಆದ್ರೆ ಇವೆರಡರಲ್ಲೂ ಆರೋಗ್ಯಕ್ಕೆ ಯಾವ ರೀತಿಯ ಟಾಯ್ಲೆಟ್ ಬಳಸೋದು ಉತ್ತಮ ತಿಳಿಯೋಣ.

ಭಾರತೀಯ ಶೌಚಾಲಯ ಬಳಕೆಯ ಪ್ರಯೋಜನಗಳು
ಭಾರತೀಯ ಶೌಚಾಲಯ ದೇಹ (Body)ವನ್ನು ಸದೃಢವಾಗಿರಿಸುತ್ತದೆ: ಭಾರತೀಯ ಶೌಚಾಲಯಗಳಲ್ಲಿ ಕುಳಿತುಕೊಳ್ಳುವ, ಏಳುವ ಅಭ್ಯಾಸ ಪ್ರತಿದಿನದ ವ್ಯಾಯಾಮ (Exercise)ದಂತೆ ಆಗುತ್ತದೆ. ಇದು ಒಟ್ಟಾರೆ ಆರೋಗ್ಯಕ್ಕೆ (Health) ಒಳ್ಳೆಯದು. ನಮ್ಮಲ್ಲಿ ಹೆಚ್ಚಿನವರು ವ್ಯಾಯಾಮದ ಪ್ರಾಮುಖ್ಯತೆಯನ್ನು ತಿಳಿದಿದ್ದರೂ, ಅದನ್ನು ನಿರ್ಲಕ್ಷಿಸುತ್ತಾರೆ. ಭಾರತೀಯ ಟಾಯ್ಲೆಟ್‌ಗಳಲ್ಲಿ ಕುಳಿತುಕೊಳ್ಳುವುದು ಸಣ್ಣ ಮಟ್ಟಿನ ವ್ಯಾಯಾಮ ಚಟುವಟಿಕೆಯಂತೆ ಆಗುತ್ತದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಕೈ ಮತ್ತು ಕಾಲುಗಳಿಗೆ ಉತ್ತಮ ವ್ಯಾಯಾಮವಾಗಿದೆ ಎಂದು ಹೇಳಲಾಗುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಸ್ಕ್ವಾಟಿಂಗ್ ನಿಮ್ಮ ಹೊಟ್ಟೆಯನ್ನು ಹಿಂಡುತ್ತದೆ, ಇದು ಹೊಟ್ಟೆಯಲ್ಲಿರುವ ಆಹಾರವನ್ನು ಒತ್ತುವ, ಒತ್ತಡದ ಮೂಲಕ ಜೀರ್ಣಕ್ರಿಯೆಗೆ (Digestion) ಸಹಾಯ ಮಾಡುತ್ತದೆ. ಪಾಶ್ಚಿಮಾತ್ಯ ಶೈಲಿಯ ಶೌಚಾಲಯದಲ್ಲಿ ಕುಳಿತುಕೊಳ್ಳುವುದು ಹೊಟ್ಟೆಯ ಮೇಲೆ ಯಾವುದೇ ಒತ್ತಡವನ್ನು ಬೀರುವುದಿಲ್ಲ.

ಭಾರತೀಯ ಶೌಚಾಲಯಗಳು ಪರಿಸರ ಸ್ನೇಹಿ: ಪಾಶ್ಚಿಮಾತ್ಯ ಶೌಚಾಲಯಗಳಲ್ಲಿ ಟಾಯ್ಲೆಟ್ ಪೇಪರ್‌ನ್ನು ಬಳಸಬೇಕಾಗುತ್ತದೆ. ಇದು ಕಾಗದದ ವ್ಯರ್ಥಕ್ಕೆ ಕಾರಣವಾಗುತ್ತದೆ. ಭಾರತೀಯ ಶೌಚಾಲಯಗಳಲ್ಲಿ ಪೇಪರ್ ವೇಸ್ಟ್ ಆಗುವುದಿಲ್ಲ. ಭಾರತೀಯ ಶೌಚಾಲಯಗಳಿಗೆ ಹೋಲಿಸಿದರೆ ಪಾಶ್ಚಿಮಾತ್ಯ ಶೌಚಾಲಯಗಳಿಗೆ ಇನ್ನೂ ಹೆಚ್ಚಿನ ನೀರಿನ ಅಗತ್ಯವಿರುತ್ತದೆ.

ಹೊತ್ತು ಗೊತ್ತಿಲ್ಲದ ಹೊತ್ತಲ್ಲಿ ಟಾಯ್ಲೆಟ್‌ಗೆ ಹೋಗೋದು ಅನಾರೋಗ್ಯದ ಲಕ್ಷಣ!

ಭಾರತೀಯ ಶೌಚಾಲಯಗಳು ಗರ್ಭಿಣಿಯರಿಗೆ ಒಳ್ಳೆಯದು: ಭಾರತೀಯ ಶೌಚಾಲಯಗಳನ್ನು ಬಳಸುವುದು ಗರ್ಭಿಣಿಯರಿಗೆ (Pregnant) ಪ್ರಯೋಜನಕಾರಿಯಾಗಿದೆ ಏಕೆಂದರೆ ಅವುಗಳನ್ನು ಬಳಸುವಾಗ ಅವರು ಕುಳಿತುಕೊಳ್ಳಬೇಕಾಗುತ್ತದೆ. ಗರ್ಭಿಣಿ ಮಹಿಳೆ ಭಾರತೀಯ ಶೌಚಾಲಯದಲ್ಲಿ ಕುಳಿತುಕೊಳ್ಳುವಾಗ ಗರ್ಭಾಶಯದ ಮೇಲೆ ಯಾವುದೇ ಒತ್ತಡವಿಲ್ಲ. ಭಾರತೀಯ ಶೌಚಾಲಯವನ್ನು ನಿಯಮಿತವಾಗಿ ಬಳಸುವುದರಿಂದ ಗರ್ಭಿಣಿಯರು ಸುಗಮ ಮತ್ತು ನೈಸರ್ಗಿಕ ಹೆರಿಗೆಗೆ ಸಿದ್ಧರಾಗುತ್ತಾರೆ ಎಂದು ಹೇಳಲಾಗುತ್ತದೆ.

ಕರುಳಿನ ಕ್ಯಾನ್ಸರ್ ಮತ್ತು ಇತರ ಕಾಯಿಲೆಗಳನ್ನು ತಡೆಯುತ್ತದೆ: ಸ್ಕ್ವಾಟಿಂಗ್ ನಮ್ಮ ದೇಹದಲ್ಲಿನ ಕೊಲೊನ್‌ನಿಂದ ಮಲವನ್ನು ಸಂಪೂರ್ಣವಾಗಿ ಹೊರಹಾಕಲು ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಅಪೆಂಡಿಸೈಟಿಸ್ ಮತ್ತು ಕರುಳಿನ ಕ್ಯಾನ್ಸರ್‌ಗೆ ಕಾರಣವಾಗುವ ಇತರ ಅಂಶಗಳ ಸಾಧ್ಯತೆಗಳನ್ನು ತಡೆಯುತ್ತದೆ.

ವೆಸ್ಟರ್ನ್ ಶೌಚಾಲಯ ಬಳಕೆಯಿಂದಾಗುವ ತೊಂದರೆಗಳು
ವೆಸ್ಟರ್ನ್ ಟಾಯ್ಲೆಟ್ ಶೀಟ್ ಕೂಡ ಅನೇಕ ಪ್ರಯೋಜನಗಳನ್ನ ಹೊಂದಿದೆ. ವೆಸ್ಟರ್ನ್ ಟಾಯ್ಲೆಟ್ ವಿಶೇಷವಾಗಿ ಕಾಲುನೋವಿನ ಸಮಸ್ಯೆಯಿಂದ ಕುಳಿತುಕೊಳ್ಳಲು ಸಾಧ್ಯವಾಗದವರಿಗೆ, ಕೀಲು ನೋವಿನಿಂದ ಬಳಲುತ್ತಿರುವ ಜನರಿಗೆ ತುಂಬಾ ಆರಾಮದಾಯಕವಾಗಿದೆ. ಆದರೆ ಇದರಿಂದಾಗುವ ಅನಾನುಕೂಲಗಳು ಹೆಚ್ಚು. ವಿಪರ್ಯಾಸವೆಂದರೆ ಆರೋಗ್ಯವಂತರೂ ಇದನ್ನು ಬಳಸುತ್ತಿದ್ದಾರೆ. ಆದ್ರೆ, ವಸ್ಟರ್ನ್ ಶೌಚಾಲಯವು ಅನುಕೂಲಗಳನ್ನ ಹೊಂದಿದೆ. ಈ ಕಾರಣದಿಂದಾಗಿ, ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾಗುತ್ತಾನೆ. ಪಾಶ್ಚಿಮಾತ್ಯ ಶೌಚಾಲಯಕ್ಕೆ ಹೋಗುವ ಅಭ್ಯಾಸ ದೇಹದ ಸೋಂಕಿನ ಅಪಾಯವನ್ನ ಹೆಚ್ಚಿಸುತ್ತದೆ. ಇದು ಅತಿಸಾರ ಮತ್ತು ಅನೇಕ ಹೊಟ್ಟೆ ಸಮಸ್ಯೆಗಳನ್ನ ಉಂಟು ಮಾಡಬಹುದು. ಯಾಕಂದ್ರೆ, ವೆಸ್ಟರ್ನ್ ಟಾಯ್ಲೆಟ್ ಸೀಟ್ ಬಳಸುವಾಗ ಚರ್ಮ ಸಂಪರ್ಕಕ್ಕೆ ಬರುತ್ತದೆ. ಇದರಿಂದ ರೋಗಾಣುಗಳು ಸುಲಭವಾಗಿ ಹರಡಬಹುದು.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »