TOP STORIES:

ಎಂಟರ್ಟೈನ್ಮೆಂಟ್.. ಎಂಟರ್ಟೈನ್ಮೆಂಟ್… ಎಂಟರ್ಟೈನ್ಮೆಂಟ್… ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ : Movie Review


Movie Review by Padmaraj Ramaiah.

‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ಚಿತ್ರದ ಟೈಟಲೇ ವಿಭಿನ್ನ. ಮತ್ತೆ ಸಿನಿಮಾ ಅಷ್ಟೇ ವಿಭಿನ್ನವಾಗಿ ಇರದೆ ಇರುತ್ತದಾ…? ಹೌದು ಆನಂದ್ ಎನ್‌.ಕುಂಪಲ ನಿರ್ಮಾಣದಲ್ಲಿ ಹೊಸ ಹುಡುಗರೇ ಸೇರಿಕೊಂಡು ನಿರ್ಮಿಸಿದ ಚೊಚ್ಚಲ ಸಿನಿಮಾದಲ್ಲೇ ಪ್ರೇಕ್ಷಕರ ಹೃದಯ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ. ಇಡೀ ಸಿನಿಮಾದಲ್ಲಿ ಯಾವುದೇ ಅಶ್ಲೀಲ ಕಾಮಿಡಿ ತುರುಕಿಸದೇ ಎರಡುವರೆ ಗಂಟೆ ಹಾಸ್ಯದ ಹೊನಲಿನ ಜತೆ ಸ್ವಲ್ಪ ಸೆಂಟಿಮೆಂಟಿನೊಂದಿಗೆ ಸುಂದರ ಮನೋರಂಜನಾತ್ಮಕ ಚಿತ್ರವನ್ನು ನೀಡಿದ್ದಾರೆ ನಿರ್ದೇಶಕ ರಾಹುಲ್ ಅಮೀನ್‌.

ಯುವ ಪೀಳಿಗೆ ಗುನುಗುನಿಸುವಂತ ಸಾಹಿತ್ಯ, ಸಂಗೀತ. ಸದಾ ನಗಿಸುವ ಪಾತ್ರಗಳಿಗೆ ಜೀವ ತುಂಬುತ್ತಿದ್ದ ಕುಸಲ್ದರಸೆ ನವೀನ್ ಡಿ. ಪಡೀಲ್ ‘ಸೌಂಡ್ಸ್ ಆಂಡ್ ಲೈಟ್ಸ್’ ಮಾಲೀಕ ರಾಜಣ್ಣನ ಪಾತ್ರದಲ್ಲಿ ಹಾಸ್ಯದಿಂದ ಹೊರಬಂದು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರ ಕಣ್ಣಂಚು ತೇವಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಹಾಸ್ಯ ದಿಗ್ಗಜರಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ಸತೀಶ್ ಬಂದಲೆ, ಸಂದೀಪ್ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ರವಿ ರಾಮಕುಂಜ, ಚೈತ್ರಾ ‌ಶೆಟ್ಟಿ ಡೈಲಾಗ್ ಶೈಲಿ ಪ್ರೇಕ್ಷಕರನ್ನು ನಗೆಗಡಲಿಗೆ ಕೊಂಡೊಯ್ಯುತ್ತದೆ. ಕರೀಷ್ಮ ಅಮೀನ್‌, ಯಶ ಶಿವಕುಮಾರ್ ನಟನೆಗೆ ಫುಲ್ ಮಾರ್ಕ್ಸ್.. ನಿರ್ದೇಶಕ ರಾಹುಲ್ ಅಮೀನ್ ಸಿನಿಮಾವನ್ನು ಅಚ್ಚುಕಟ್ಟಾಗಿ ಹೆಣೆದಿದ್ದಾರೆ. ನಾಯಕ ನಟ ಆರ್.ಜೆ.ವಿನೀತ್ ತಮ್ಮ ಪಾತ್ರವನ್ನು ಉತ್ತಮವಾಗಿ ನಿಭಾಯಿಸುವ ಮೂಲಕ ಎಲ್ಲ ವರ್ಗದ ಪ್ರೇಕ್ಷಕನಿಗೂ ಇಷ್ಟವಾಗುತ್ತಾರೆ. ಪ್ರಸನ್ನ ಶೆಟ್ಟಿ ಬೈಲೂರ್ ಅವರ ಸಂಭಾಷಣೆ ಚಿತ್ರಕ್ಕೆ ಪ್ಲಸ್ ಪಾಯಿಂಟ್… ಏನೇ ಆಗಲಿ ಹೊಸಬರ ಚಿತ್ರವಾದರೂ ಪರಭಾಷೆಯ ಚಿತ್ರಗಳಿಗೆ ಕಡಿಮೆ ಇಲ್ಲ ಅನ್ನೋ ಮಟ್ಟದಲ್ಲಿ ಬಹಳ ಅಚ್ಚುಕಟ್ಟಾಗಿ ತುಳುವಿಗೊಂದು ಅದ್ಭುತ ಕೊಡುಗೆ ನೀಡಿದ್ದಾರೆ. ತುಳುನಾಡಿಗೆ ಇಂತಹ ಸುಂದರ ಚಿತ್ರ ನೀಡಿದ್ದಕ್ಕೆ ಸಿನಿಮಾದ ಇಡೀ ತಂಡಕ್ಕೆ ಅಭಿನಂದನೆಗಳು. ಎಲ್ಲರೂ ಸಿನಿಮಾ ನೋಡಿ ಯುವ ತಂಡದ ಪ್ರಯತ್ನಕ್ಕೆ ಪ್ರೋತ್ಸಾಹಿಸೋಣ….


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »