TOP STORIES:

ಎಂಟರ್ಟೈನ್ಮೆಂಟ್.. ಎಂಟರ್ಟೈನ್ಮೆಂಟ್… ಎಂಟರ್ಟೈನ್ಮೆಂಟ್… ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ : Movie Review


Movie Review by Padmaraj Ramaiah.

‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ಚಿತ್ರದ ಟೈಟಲೇ ವಿಭಿನ್ನ. ಮತ್ತೆ ಸಿನಿಮಾ ಅಷ್ಟೇ ವಿಭಿನ್ನವಾಗಿ ಇರದೆ ಇರುತ್ತದಾ…? ಹೌದು ಆನಂದ್ ಎನ್‌.ಕುಂಪಲ ನಿರ್ಮಾಣದಲ್ಲಿ ಹೊಸ ಹುಡುಗರೇ ಸೇರಿಕೊಂಡು ನಿರ್ಮಿಸಿದ ಚೊಚ್ಚಲ ಸಿನಿಮಾದಲ್ಲೇ ಪ್ರೇಕ್ಷಕರ ಹೃದಯ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ. ಇಡೀ ಸಿನಿಮಾದಲ್ಲಿ ಯಾವುದೇ ಅಶ್ಲೀಲ ಕಾಮಿಡಿ ತುರುಕಿಸದೇ ಎರಡುವರೆ ಗಂಟೆ ಹಾಸ್ಯದ ಹೊನಲಿನ ಜತೆ ಸ್ವಲ್ಪ ಸೆಂಟಿಮೆಂಟಿನೊಂದಿಗೆ ಸುಂದರ ಮನೋರಂಜನಾತ್ಮಕ ಚಿತ್ರವನ್ನು ನೀಡಿದ್ದಾರೆ ನಿರ್ದೇಶಕ ರಾಹುಲ್ ಅಮೀನ್‌.

ಯುವ ಪೀಳಿಗೆ ಗುನುಗುನಿಸುವಂತ ಸಾಹಿತ್ಯ, ಸಂಗೀತ. ಸದಾ ನಗಿಸುವ ಪಾತ್ರಗಳಿಗೆ ಜೀವ ತುಂಬುತ್ತಿದ್ದ ಕುಸಲ್ದರಸೆ ನವೀನ್ ಡಿ. ಪಡೀಲ್ ‘ಸೌಂಡ್ಸ್ ಆಂಡ್ ಲೈಟ್ಸ್’ ಮಾಲೀಕ ರಾಜಣ್ಣನ ಪಾತ್ರದಲ್ಲಿ ಹಾಸ್ಯದಿಂದ ಹೊರಬಂದು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರ ಕಣ್ಣಂಚು ತೇವಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಹಾಸ್ಯ ದಿಗ್ಗಜರಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ಸತೀಶ್ ಬಂದಲೆ, ಸಂದೀಪ್ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ರವಿ ರಾಮಕುಂಜ, ಚೈತ್ರಾ ‌ಶೆಟ್ಟಿ ಡೈಲಾಗ್ ಶೈಲಿ ಪ್ರೇಕ್ಷಕರನ್ನು ನಗೆಗಡಲಿಗೆ ಕೊಂಡೊಯ್ಯುತ್ತದೆ. ಕರೀಷ್ಮ ಅಮೀನ್‌, ಯಶ ಶಿವಕುಮಾರ್ ನಟನೆಗೆ ಫುಲ್ ಮಾರ್ಕ್ಸ್.. ನಿರ್ದೇಶಕ ರಾಹುಲ್ ಅಮೀನ್ ಸಿನಿಮಾವನ್ನು ಅಚ್ಚುಕಟ್ಟಾಗಿ ಹೆಣೆದಿದ್ದಾರೆ. ನಾಯಕ ನಟ ಆರ್.ಜೆ.ವಿನೀತ್ ತಮ್ಮ ಪಾತ್ರವನ್ನು ಉತ್ತಮವಾಗಿ ನಿಭಾಯಿಸುವ ಮೂಲಕ ಎಲ್ಲ ವರ್ಗದ ಪ್ರೇಕ್ಷಕನಿಗೂ ಇಷ್ಟವಾಗುತ್ತಾರೆ. ಪ್ರಸನ್ನ ಶೆಟ್ಟಿ ಬೈಲೂರ್ ಅವರ ಸಂಭಾಷಣೆ ಚಿತ್ರಕ್ಕೆ ಪ್ಲಸ್ ಪಾಯಿಂಟ್… ಏನೇ ಆಗಲಿ ಹೊಸಬರ ಚಿತ್ರವಾದರೂ ಪರಭಾಷೆಯ ಚಿತ್ರಗಳಿಗೆ ಕಡಿಮೆ ಇಲ್ಲ ಅನ್ನೋ ಮಟ್ಟದಲ್ಲಿ ಬಹಳ ಅಚ್ಚುಕಟ್ಟಾಗಿ ತುಳುವಿಗೊಂದು ಅದ್ಭುತ ಕೊಡುಗೆ ನೀಡಿದ್ದಾರೆ. ತುಳುನಾಡಿಗೆ ಇಂತಹ ಸುಂದರ ಚಿತ್ರ ನೀಡಿದ್ದಕ್ಕೆ ಸಿನಿಮಾದ ಇಡೀ ತಂಡಕ್ಕೆ ಅಭಿನಂದನೆಗಳು. ಎಲ್ಲರೂ ಸಿನಿಮಾ ನೋಡಿ ಯುವ ತಂಡದ ಪ್ರಯತ್ನಕ್ಕೆ ಪ್ರೋತ್ಸಾಹಿಸೋಣ….


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »