TOP STORIES:

“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” : ಬರಹ – ರಶ್ಮಿ ಸನಿಲ್ ಮಂಗಳೂರು


“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ಇಂದು ವಿಶ್ವದಲ್ಲೇ ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ದೇಶ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಭೀಕರ ಅತ್ಯಾಚಾರಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು.

ಭಾರತದಲ್ಲಿ ಪ್ರತಿ ಒಂದು ಗಂಟೆಗೆ ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆಯಂತೆ. ದಾಖಲಾಗದೆ ಉಳಿದ ಅತ್ಯಾಚಾರಗಳನ್ನು ಪರಿಗಣಿಸಿದರೆ ಗಂಟೆಗೆ ೧೦ಕ್ಕೂ ಹೆಚ್ಚು ಅತ್ಯಾಚಾರಗಳಾಗುತ್ತಿವೆ ಎಂಬುದು ಆತ್ಮವನ್ನೇ ಹಿಸುಕಿ ಹಾಕುವ ಕಠೋರ ಸತ್ಯ.

 

ಭಾರತದಲ್ಲಿ ಪ್ರಮುಖವಾಗಿ ಮಹಿಳೆಯರ ಮೇಲೆ ಮೂರು ವಿಧದ ದೌರ್ಜನ್ಯಗಳು ನಡೆಯುತ್ತಿವೆ. ಮೊದಲನೆಯದು ಲೈಂಗಿಕ ಅತ್ಯಾಚಾರ, ಎರಡನೆಯದು ಧಾರ್ಮಿಕ ಮತ್ತು ಸಂಪ್ರದಾಯಗಳ ಹೆಸರಿನಲ್ಲಿ ಆಗುತ್ತಿರುವ ದೌರ್ಜನ್ಯ, ಮೂರನೆಯದ್ದು ಲೈಂಗಿಕ ಗುಲಾಮರನ್ನಾಗಿ ಮಾಡಿಕೊಳ್ಳಲು ಮಾನವ ಕಳ್ಳ ಸಾಗಣೆ ಮಾಡುವುದು ಕೂಡ ಭಾರತದಲ್ಲಿಯೇ ಹೆಚ್ಚಂತೆ.

 

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಂದಿರುವ ಹಾಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಭಾರತ ಮಹಿಳಾ ಸುರಕ್ಷತೆ ವಿಷಯದಲ್ಲಿ ಮಾತ್ರ ಇಡೀ ವಿಶ್ವದ ಮುಂದೆ ತಲೆ ತಗ್ಗಿಸುವಂತಾಗಿದೆ.

 

ಮಹಿಳೆಯನ್ನು ಪೂಜ್ಯನೀಯ ಭಾವನೆಯಲ್ಲಿ ಕಂಡು ಪೂಜಿಸುವ ದೇಶ ನಮ್ಮದು ಎನ್ನುವ ಹೆಮ್ಮೆಯ ಮಾತಿಗೆ ಕಳಂಕ ತರುವ ಕಾರ್ಯವನ್ನು ಇಂದು ಕೆಲವೊಂದು ಕಾಮ ಪಿಶಾಚಿಗಳು ಹಾಗೂ ದುಷ್ಟ, ದುಷ್ಕರ್ಮಿಗಳು ಎಸಗಿ ಹೂವಿನಂತಹ ಹೆಣ್ಣಿಗೆ ಮಾತ್ರ ಲೋಕದ ಕಟ್ಟು ಪಾಡು ಎನ್ನುವಂತೆ ಮಾಡಿದ್ದಾರೆ. ಮನೆಯ ಮಗನಿಗೆ ಬುದ್ಧಿ ಹೇಳಿದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಯಾಕೆಂದರೆ ಇಂದು ಹೆಣ್ಣನ್ನು ಅವಳು ತೊಡುವ ಬಟ್ಟೆಯಿಂದ ಅಳೆಯಲಾಗುತ್ತಿದೆ. ಆದರೆ ಅತ್ಯಾಚಾರ ಆದ ಪ್ರಕರಣಗಳಲ್ಲಿ ಅಪ್ರಾಪ್ತ ಬಾಲಕಿಯರ ಸಂಖ್ಯೆಯೂ ಹೆಚ್ಚಾಗಿದೆ. ಹೊರದೇಶಗಳಲ್ಲಿ ಅರೆಬರೆ ಬಟ್ಟೆ ತೊಟ್ಟರೂ ಅತ್ಯಾಚಾರದ ಸಂಖ್ಯೆ ಕಡಿಮೆ. ಹಾಗಾದರೆ ಇಲ್ಲಿ ಯಾರ ತಪ್ಪಿದೆ ಹೇಳಿ? ನೋಡುವವರ ದೃಷ್ಟಿ ಸರಿ ಇದ್ದರೆ ಎಲ್ಲವೂ ಪೂಜ್ಯನೀಯ ಅಲ್ಲವೇ? ಅದಕ್ಕಾಗಿ ಮನೆಯಿಂದಲೇ ಇದರ ಅರಿವು ಮೂಡಿಸಬೇಕು. ಮನೆಯಲ್ಲಿ ಹಿರಿಯರು ತಮ್ಮ ಮಕ್ಕಳಿಗೆ ಬುದ್ಧಿ ಹೇಳಿದರೆ ಬೇರೊಬ್ಬರಿಗೆ ಉಪದೇಶ ನೀಡುವ ಅಗತ್ಯ ಬರುವುದಿಲ್ಲ. ಅತ್ಯಾಚಾರ, ಲೈಂಗಿಕ ಶೋಷಣೆಯಂತಹ ಅಮಾನವೀಯ, ದುಷ್ಕೃತ್ಯಗಳು ಸ್ವಲ್ಪ ಮಟ್ಟಿಗೆಯಾದರೂ ಕಡಿಮೆಯಾಗಬಹುದು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »