TOP STORIES:

“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” : ಬರಹ – ರಶ್ಮಿ ಸನಿಲ್ ಮಂಗಳೂರು


“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ಇಂದು ವಿಶ್ವದಲ್ಲೇ ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ದೇಶ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಭೀಕರ ಅತ್ಯಾಚಾರಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು.

ಭಾರತದಲ್ಲಿ ಪ್ರತಿ ಒಂದು ಗಂಟೆಗೆ ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆಯಂತೆ. ದಾಖಲಾಗದೆ ಉಳಿದ ಅತ್ಯಾಚಾರಗಳನ್ನು ಪರಿಗಣಿಸಿದರೆ ಗಂಟೆಗೆ ೧೦ಕ್ಕೂ ಹೆಚ್ಚು ಅತ್ಯಾಚಾರಗಳಾಗುತ್ತಿವೆ ಎಂಬುದು ಆತ್ಮವನ್ನೇ ಹಿಸುಕಿ ಹಾಕುವ ಕಠೋರ ಸತ್ಯ.

 

ಭಾರತದಲ್ಲಿ ಪ್ರಮುಖವಾಗಿ ಮಹಿಳೆಯರ ಮೇಲೆ ಮೂರು ವಿಧದ ದೌರ್ಜನ್ಯಗಳು ನಡೆಯುತ್ತಿವೆ. ಮೊದಲನೆಯದು ಲೈಂಗಿಕ ಅತ್ಯಾಚಾರ, ಎರಡನೆಯದು ಧಾರ್ಮಿಕ ಮತ್ತು ಸಂಪ್ರದಾಯಗಳ ಹೆಸರಿನಲ್ಲಿ ಆಗುತ್ತಿರುವ ದೌರ್ಜನ್ಯ, ಮೂರನೆಯದ್ದು ಲೈಂಗಿಕ ಗುಲಾಮರನ್ನಾಗಿ ಮಾಡಿಕೊಳ್ಳಲು ಮಾನವ ಕಳ್ಳ ಸಾಗಣೆ ಮಾಡುವುದು ಕೂಡ ಭಾರತದಲ್ಲಿಯೇ ಹೆಚ್ಚಂತೆ.

 

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಂದಿರುವ ಹಾಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಭಾರತ ಮಹಿಳಾ ಸುರಕ್ಷತೆ ವಿಷಯದಲ್ಲಿ ಮಾತ್ರ ಇಡೀ ವಿಶ್ವದ ಮುಂದೆ ತಲೆ ತಗ್ಗಿಸುವಂತಾಗಿದೆ.

 

ಮಹಿಳೆಯನ್ನು ಪೂಜ್ಯನೀಯ ಭಾವನೆಯಲ್ಲಿ ಕಂಡು ಪೂಜಿಸುವ ದೇಶ ನಮ್ಮದು ಎನ್ನುವ ಹೆಮ್ಮೆಯ ಮಾತಿಗೆ ಕಳಂಕ ತರುವ ಕಾರ್ಯವನ್ನು ಇಂದು ಕೆಲವೊಂದು ಕಾಮ ಪಿಶಾಚಿಗಳು ಹಾಗೂ ದುಷ್ಟ, ದುಷ್ಕರ್ಮಿಗಳು ಎಸಗಿ ಹೂವಿನಂತಹ ಹೆಣ್ಣಿಗೆ ಮಾತ್ರ ಲೋಕದ ಕಟ್ಟು ಪಾಡು ಎನ್ನುವಂತೆ ಮಾಡಿದ್ದಾರೆ. ಮನೆಯ ಮಗನಿಗೆ ಬುದ್ಧಿ ಹೇಳಿದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಯಾಕೆಂದರೆ ಇಂದು ಹೆಣ್ಣನ್ನು ಅವಳು ತೊಡುವ ಬಟ್ಟೆಯಿಂದ ಅಳೆಯಲಾಗುತ್ತಿದೆ. ಆದರೆ ಅತ್ಯಾಚಾರ ಆದ ಪ್ರಕರಣಗಳಲ್ಲಿ ಅಪ್ರಾಪ್ತ ಬಾಲಕಿಯರ ಸಂಖ್ಯೆಯೂ ಹೆಚ್ಚಾಗಿದೆ. ಹೊರದೇಶಗಳಲ್ಲಿ ಅರೆಬರೆ ಬಟ್ಟೆ ತೊಟ್ಟರೂ ಅತ್ಯಾಚಾರದ ಸಂಖ್ಯೆ ಕಡಿಮೆ. ಹಾಗಾದರೆ ಇಲ್ಲಿ ಯಾರ ತಪ್ಪಿದೆ ಹೇಳಿ? ನೋಡುವವರ ದೃಷ್ಟಿ ಸರಿ ಇದ್ದರೆ ಎಲ್ಲವೂ ಪೂಜ್ಯನೀಯ ಅಲ್ಲವೇ? ಅದಕ್ಕಾಗಿ ಮನೆಯಿಂದಲೇ ಇದರ ಅರಿವು ಮೂಡಿಸಬೇಕು. ಮನೆಯಲ್ಲಿ ಹಿರಿಯರು ತಮ್ಮ ಮಕ್ಕಳಿಗೆ ಬುದ್ಧಿ ಹೇಳಿದರೆ ಬೇರೊಬ್ಬರಿಗೆ ಉಪದೇಶ ನೀಡುವ ಅಗತ್ಯ ಬರುವುದಿಲ್ಲ. ಅತ್ಯಾಚಾರ, ಲೈಂಗಿಕ ಶೋಷಣೆಯಂತಹ ಅಮಾನವೀಯ, ದುಷ್ಕೃತ್ಯಗಳು ಸ್ವಲ್ಪ ಮಟ್ಟಿಗೆಯಾದರೂ ಕಡಿಮೆಯಾಗಬಹುದು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »