TOP STORIES:

FOLLOW US

“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” : ಬರಹ – ರಶ್ಮಿ ಸನಿಲ್ ಮಂಗಳೂರು


“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ಇಂದು ವಿಶ್ವದಲ್ಲೇ ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ದೇಶ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಭೀಕರ ಅತ್ಯಾಚಾರಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು.

ಭಾರತದಲ್ಲಿ ಪ್ರತಿ ಒಂದು ಗಂಟೆಗೆ ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆಯಂತೆ. ದಾಖಲಾಗದೆ ಉಳಿದ ಅತ್ಯಾಚಾರಗಳನ್ನು ಪರಿಗಣಿಸಿದರೆ ಗಂಟೆಗೆ ೧೦ಕ್ಕೂ ಹೆಚ್ಚು ಅತ್ಯಾಚಾರಗಳಾಗುತ್ತಿವೆ ಎಂಬುದು ಆತ್ಮವನ್ನೇ ಹಿಸುಕಿ ಹಾಕುವ ಕಠೋರ ಸತ್ಯ.

 

ಭಾರತದಲ್ಲಿ ಪ್ರಮುಖವಾಗಿ ಮಹಿಳೆಯರ ಮೇಲೆ ಮೂರು ವಿಧದ ದೌರ್ಜನ್ಯಗಳು ನಡೆಯುತ್ತಿವೆ. ಮೊದಲನೆಯದು ಲೈಂಗಿಕ ಅತ್ಯಾಚಾರ, ಎರಡನೆಯದು ಧಾರ್ಮಿಕ ಮತ್ತು ಸಂಪ್ರದಾಯಗಳ ಹೆಸರಿನಲ್ಲಿ ಆಗುತ್ತಿರುವ ದೌರ್ಜನ್ಯ, ಮೂರನೆಯದ್ದು ಲೈಂಗಿಕ ಗುಲಾಮರನ್ನಾಗಿ ಮಾಡಿಕೊಳ್ಳಲು ಮಾನವ ಕಳ್ಳ ಸಾಗಣೆ ಮಾಡುವುದು ಕೂಡ ಭಾರತದಲ್ಲಿಯೇ ಹೆಚ್ಚಂತೆ.

 

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಂದಿರುವ ಹಾಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಭಾರತ ಮಹಿಳಾ ಸುರಕ್ಷತೆ ವಿಷಯದಲ್ಲಿ ಮಾತ್ರ ಇಡೀ ವಿಶ್ವದ ಮುಂದೆ ತಲೆ ತಗ್ಗಿಸುವಂತಾಗಿದೆ.

 

ಮಹಿಳೆಯನ್ನು ಪೂಜ್ಯನೀಯ ಭಾವನೆಯಲ್ಲಿ ಕಂಡು ಪೂಜಿಸುವ ದೇಶ ನಮ್ಮದು ಎನ್ನುವ ಹೆಮ್ಮೆಯ ಮಾತಿಗೆ ಕಳಂಕ ತರುವ ಕಾರ್ಯವನ್ನು ಇಂದು ಕೆಲವೊಂದು ಕಾಮ ಪಿಶಾಚಿಗಳು ಹಾಗೂ ದುಷ್ಟ, ದುಷ್ಕರ್ಮಿಗಳು ಎಸಗಿ ಹೂವಿನಂತಹ ಹೆಣ್ಣಿಗೆ ಮಾತ್ರ ಲೋಕದ ಕಟ್ಟು ಪಾಡು ಎನ್ನುವಂತೆ ಮಾಡಿದ್ದಾರೆ. ಮನೆಯ ಮಗನಿಗೆ ಬುದ್ಧಿ ಹೇಳಿದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಯಾಕೆಂದರೆ ಇಂದು ಹೆಣ್ಣನ್ನು ಅವಳು ತೊಡುವ ಬಟ್ಟೆಯಿಂದ ಅಳೆಯಲಾಗುತ್ತಿದೆ. ಆದರೆ ಅತ್ಯಾಚಾರ ಆದ ಪ್ರಕರಣಗಳಲ್ಲಿ ಅಪ್ರಾಪ್ತ ಬಾಲಕಿಯರ ಸಂಖ್ಯೆಯೂ ಹೆಚ್ಚಾಗಿದೆ. ಹೊರದೇಶಗಳಲ್ಲಿ ಅರೆಬರೆ ಬಟ್ಟೆ ತೊಟ್ಟರೂ ಅತ್ಯಾಚಾರದ ಸಂಖ್ಯೆ ಕಡಿಮೆ. ಹಾಗಾದರೆ ಇಲ್ಲಿ ಯಾರ ತಪ್ಪಿದೆ ಹೇಳಿ? ನೋಡುವವರ ದೃಷ್ಟಿ ಸರಿ ಇದ್ದರೆ ಎಲ್ಲವೂ ಪೂಜ್ಯನೀಯ ಅಲ್ಲವೇ? ಅದಕ್ಕಾಗಿ ಮನೆಯಿಂದಲೇ ಇದರ ಅರಿವು ಮೂಡಿಸಬೇಕು. ಮನೆಯಲ್ಲಿ ಹಿರಿಯರು ತಮ್ಮ ಮಕ್ಕಳಿಗೆ ಬುದ್ಧಿ ಹೇಳಿದರೆ ಬೇರೊಬ್ಬರಿಗೆ ಉಪದೇಶ ನೀಡುವ ಅಗತ್ಯ ಬರುವುದಿಲ್ಲ. ಅತ್ಯಾಚಾರ, ಲೈಂಗಿಕ ಶೋಷಣೆಯಂತಹ ಅಮಾನವೀಯ, ದುಷ್ಕೃತ್ಯಗಳು ಸ್ವಲ್ಪ ಮಟ್ಟಿಗೆಯಾದರೂ ಕಡಿಮೆಯಾಗಬಹುದು.


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »