TOP STORIES:

“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” : ಬರಹ – ರಶ್ಮಿ ಸನಿಲ್ ಮಂಗಳೂರು


“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ಇಂದು ವಿಶ್ವದಲ್ಲೇ ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ದೇಶ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಭೀಕರ ಅತ್ಯಾಚಾರಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು.

ಭಾರತದಲ್ಲಿ ಪ್ರತಿ ಒಂದು ಗಂಟೆಗೆ ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆಯಂತೆ. ದಾಖಲಾಗದೆ ಉಳಿದ ಅತ್ಯಾಚಾರಗಳನ್ನು ಪರಿಗಣಿಸಿದರೆ ಗಂಟೆಗೆ ೧೦ಕ್ಕೂ ಹೆಚ್ಚು ಅತ್ಯಾಚಾರಗಳಾಗುತ್ತಿವೆ ಎಂಬುದು ಆತ್ಮವನ್ನೇ ಹಿಸುಕಿ ಹಾಕುವ ಕಠೋರ ಸತ್ಯ.

 

ಭಾರತದಲ್ಲಿ ಪ್ರಮುಖವಾಗಿ ಮಹಿಳೆಯರ ಮೇಲೆ ಮೂರು ವಿಧದ ದೌರ್ಜನ್ಯಗಳು ನಡೆಯುತ್ತಿವೆ. ಮೊದಲನೆಯದು ಲೈಂಗಿಕ ಅತ್ಯಾಚಾರ, ಎರಡನೆಯದು ಧಾರ್ಮಿಕ ಮತ್ತು ಸಂಪ್ರದಾಯಗಳ ಹೆಸರಿನಲ್ಲಿ ಆಗುತ್ತಿರುವ ದೌರ್ಜನ್ಯ, ಮೂರನೆಯದ್ದು ಲೈಂಗಿಕ ಗುಲಾಮರನ್ನಾಗಿ ಮಾಡಿಕೊಳ್ಳಲು ಮಾನವ ಕಳ್ಳ ಸಾಗಣೆ ಮಾಡುವುದು ಕೂಡ ಭಾರತದಲ್ಲಿಯೇ ಹೆಚ್ಚಂತೆ.

 

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಂದಿರುವ ಹಾಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಭಾರತ ಮಹಿಳಾ ಸುರಕ್ಷತೆ ವಿಷಯದಲ್ಲಿ ಮಾತ್ರ ಇಡೀ ವಿಶ್ವದ ಮುಂದೆ ತಲೆ ತಗ್ಗಿಸುವಂತಾಗಿದೆ.

 

ಮಹಿಳೆಯನ್ನು ಪೂಜ್ಯನೀಯ ಭಾವನೆಯಲ್ಲಿ ಕಂಡು ಪೂಜಿಸುವ ದೇಶ ನಮ್ಮದು ಎನ್ನುವ ಹೆಮ್ಮೆಯ ಮಾತಿಗೆ ಕಳಂಕ ತರುವ ಕಾರ್ಯವನ್ನು ಇಂದು ಕೆಲವೊಂದು ಕಾಮ ಪಿಶಾಚಿಗಳು ಹಾಗೂ ದುಷ್ಟ, ದುಷ್ಕರ್ಮಿಗಳು ಎಸಗಿ ಹೂವಿನಂತಹ ಹೆಣ್ಣಿಗೆ ಮಾತ್ರ ಲೋಕದ ಕಟ್ಟು ಪಾಡು ಎನ್ನುವಂತೆ ಮಾಡಿದ್ದಾರೆ. ಮನೆಯ ಮಗನಿಗೆ ಬುದ್ಧಿ ಹೇಳಿದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಯಾಕೆಂದರೆ ಇಂದು ಹೆಣ್ಣನ್ನು ಅವಳು ತೊಡುವ ಬಟ್ಟೆಯಿಂದ ಅಳೆಯಲಾಗುತ್ತಿದೆ. ಆದರೆ ಅತ್ಯಾಚಾರ ಆದ ಪ್ರಕರಣಗಳಲ್ಲಿ ಅಪ್ರಾಪ್ತ ಬಾಲಕಿಯರ ಸಂಖ್ಯೆಯೂ ಹೆಚ್ಚಾಗಿದೆ. ಹೊರದೇಶಗಳಲ್ಲಿ ಅರೆಬರೆ ಬಟ್ಟೆ ತೊಟ್ಟರೂ ಅತ್ಯಾಚಾರದ ಸಂಖ್ಯೆ ಕಡಿಮೆ. ಹಾಗಾದರೆ ಇಲ್ಲಿ ಯಾರ ತಪ್ಪಿದೆ ಹೇಳಿ? ನೋಡುವವರ ದೃಷ್ಟಿ ಸರಿ ಇದ್ದರೆ ಎಲ್ಲವೂ ಪೂಜ್ಯನೀಯ ಅಲ್ಲವೇ? ಅದಕ್ಕಾಗಿ ಮನೆಯಿಂದಲೇ ಇದರ ಅರಿವು ಮೂಡಿಸಬೇಕು. ಮನೆಯಲ್ಲಿ ಹಿರಿಯರು ತಮ್ಮ ಮಕ್ಕಳಿಗೆ ಬುದ್ಧಿ ಹೇಳಿದರೆ ಬೇರೊಬ್ಬರಿಗೆ ಉಪದೇಶ ನೀಡುವ ಅಗತ್ಯ ಬರುವುದಿಲ್ಲ. ಅತ್ಯಾಚಾರ, ಲೈಂಗಿಕ ಶೋಷಣೆಯಂತಹ ಅಮಾನವೀಯ, ದುಷ್ಕೃತ್ಯಗಳು ಸ್ವಲ್ಪ ಮಟ್ಟಿಗೆಯಾದರೂ ಕಡಿಮೆಯಾಗಬಹುದು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »