TOP STORIES:

FOLLOW US

ಏಷ್ಯಾದ ನಂಬರ್ 1 ಮ್ಯಾರಥನ್ ನಲ್ಲಿ ಮಿಂಚಿದ ಓಟಗಾರ ಹರೀಶ ಕರ್ಕೇರ


ಏಷ್ಯಾದ ನಂಬರ್ 1 ಮ್ಯಾರಥನ್ ನಲ್ಲಿ ಮಿಂಚಿದ ಓಟಗಾರ ಹರೀಶ ಕರ್ಕೇರಡ

ಸಾಧನೆ ಎಂಬ ಶಿಖರವನ್ನು ಒಂದು ಎರಡು ದಿನಗಳಲ್ಲಿ ಏರಲು ಸಾಧ್ಯವಿಲ್ಲ.ಒಂದು ವೇಳೆ ಅಲ್ಪ ಸಮಯದಲ್ಲಿ ಸಾಧನೆ ನಡೆದರೆ ಆ ಸಾಧನೆ ಶಾಶ್ವತವಾಗಿ ಉಳಿಯಲು ಸಾಧ್ಯವಿಲ್ಲ.ಸಾಧನೆಯ ಹಾದಿ ಯಾವಾಗಲೂ ಕಠಿಣವಾಗಿರಬೇಕು, ಅತೀವವಾದ ಶ್ರಮವಿರಬೇಕು,ಹಲವಾರು ದಿನಗಳ ಪರಿಶ್ರಮ ಎದ್ದು ಕಾಣಬೇಕು.ಆಗ ನಿಜವಾದ ಸಾಧನೆಗೆ ಬೆಲೆ ಸಿಗೊದು ಆದಕ್ಕಾಗಿಯೇ ಹಿರಿಯರು ಹೇಳಿರೋದು ಸಾಧನೆ ಎಂಬುದು ಸಾಧಕನ ಸೊತ್ತೆ ಹೊರತು ಸೋಮಾರಿಯ ಸ್ವತ್ತಲ್ಲ.ಇದೇ ರೀತಿಯ ಸಾಧನೆಯ ಹಾದಿಯಲ್ಲಿ ನಡೆಯುತ್ತಿರುವವರು ಮ್ಯಾರಥನ್ ಓಟಗಾರ ಹರೀಶ ಕರ್ಕೇರ.

ಇವರ ಜೀವನದ ಪುಟಗಳನ್ನು ಒಮ್ಮೆ ತಿರುವಿ ನೋಡಿದಾಗ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕೊಣಾಜೆ ಗ್ರಾಮದ ಮಚ್ಚಿರೋಡಿ ನಿವಾಸಿ ದೇವಪ್ಪ ಪೂಜಾರಿ ಮತ್ತು ಮೋಹಿನಿ ದಂಪತಿಯ ಮುದ್ದಿನ ಮಗನಾಗಿ ಜನಿಸಿ ತಂದೆ ತಾಯಿಯ ಪ್ರೋತ್ಸಾಹದ ಜೊತೆ ಸಾಧನೆಯ ಹಾದಿ ಹಿಡಿದು ನಡೆದವರು.ಪ್ರಸ್ತುತ ಬೆಂಗಳೂರಿನ ಟೈಟಾನ್ ಕಂಪೆನಿಯಲ್ಲಿ ಉದ್ಯೋಗಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಾಧನೆಯಲ್ಲಿ ಯಶಸ್ಸು ಕಾಣಲು ಇಂತಹದೇ ನಿರ್ದಿಷ್ಟ ಕ್ಷೇತ್ರ ಬೇಕೆಂಬ ಅಗತ್ಯವಿಲ್ಲ.ತಾನು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಅಪಾರವಾದ ಆಸಕ್ತಿ ಮತ್ತು ಪ್ರೀತಿ ಇರಬೇಕು.ಆಗ ಸಾಧನೆಯ ಹಾದಿ ಸುಲಭವಾಗಿ ಕಾಣುತ್ತದೆ ಅದೇ ರೀತಿ ಅವಕಾಶಗಳು ಹುಡುಕಿಕೊಂಡು ಬರುತ್ತವೆ.ಇದೇ ರೀತಿಯ ಸಾಧನೆಯ ಹಾದಿ ಹಿಡಿದ ಹರೀಶ್ ಕರ್ಕೇರ ಅವರು ಆರಿಸಿದ್ದು ಕ್ರೀಡಾ ಕ್ಷೇತ್ರ.ಇವರ ಸಾಧನೆಯನ್ನು ಗಮನಿಸುತ್ತ ಹೋದಂತೆ ಇವರು ಟಾಟಾ ಮುಂಬೈ ನಡೆಸಿಕೊಡುವ ಏಷ್ಯಾದ_ನಂ.1 ಮ್ಯಾರಥನ್ ನಲ್ಲಿ ಭಾಗವಹಿಸಿ 42 ಕಿಲೋಮೀಟರ್ ದೂರವನ್ನು 4 ಗಂಟೆ 16 ನಿಮಿಷಗಳಲ್ಲಿ ಕ್ರಮಿಸಿ ದಾಖಲೆ ನಿರ್ಮಿಸಿದವರು,ಕಳೆದ ಬಾರಿ 42 ಕಿಲೋಮೀಟರ್ ದೂರವನ್ನು 4 ಗಂಟೆ 27 ನಿಮಿಷಗಳಲ್ಲಿ ಕ್ರಮಿಸಿ ದಾಖಲೆ ಮಾಡಿದ್ದರು,ಹಾಗೆಯೇ ಬೆಂಗಳೂರು ಮ್ಯಾರಥಾನ್ ನಲ್ಲಿ 21 ಕಿಲೋಮಿಟರ್ ಗಳನ್ನು 2 ಗಂಟೆ 01 ನಿಮಿಷಗಳಲ್ಲಿ,ಟಿ.ಸಿ.ಎಸ್ ಬೆಂಗಳೂರು ನಡೆಸಿಕೊಡುವ 10 ಕಿಲೋಮಿಟರ್ ಅನ್ನು 58 ನಿಮಿಷಗಳಲ್ಲಿ,ಎಸ್.ಬಿ.ಐ ಗ್ರೀನ್ ಮ್ಯಾರಥಾನ್ ಬೆಂಗಳೂರು ಇಲ್ಲಿ 2 ಗಂಟೆಯಲ್ಲಿ ಕ್ರಮಿಸಿದವರು ಹೀಗೆ ಮ್ಯಾರಥಾನ್ ನಲ್ಲಿ ಹತ್ತು ಹಲವಾರು ದಾಖಲೆ ನಿರ್ಮಿಸಿದ ಕೀರ್ತಿ ಇವರದ್ದು ಇವರ ಈ ಸಾಧನೆಯ ಹಿಂದೆ ಕಂಪೆನಿಯ M.D ಗಳಾದ ಭಾಸ್ಕರ್ ಭಟ್ ಹಾಗೂ ವೆಂಕಟರಮಣ್ ಅವರ ಸಹಕಾರ ತುಂಬಾ ಇದೆ ಎಂದು ನೆನಪಿಸಿಕೊಳ್ಳುತ್ತಾರೆ.ಇನ್ನು ಈ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿ ದೇಶಕ್ಕೆ ಹೆಸರು ತಂದುಕೊಡಬೇಕು ಎಂಬ ಇವರ ಕನಸು ನನಸಾಗಲಿ ಇವರ ಈ ಸಾಧನೆಗೆ

ನಮ್ಮ
ಬಿಲ್ಲವ ವಾರಿಯಾರ್ಸ್ ಪೇಜ್
ವತಿಯಿಂದ ಶುಭ ಹಾರೈಕೆಗಳು…

 

✍️ ಸುಶಾಂತ್ ಪೂಜಾರಿ ಕನ್ನಡಿಕಟ್ಟೆ


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »