TOP STORIES:

ಐದು ಸಾವಿರ ಜನರಿಗೆ ಕೆಲಸ ಕೊಡಿಸಿದ ಅನ್ನದಾತ ಗೋವಿಂದ ಬಾಬು ಪೂಜಾರಿ


” ಅಂದು ಬಸ್ಸಲ್ಲಿ ಎಣ್ಣೆ ಡಬ್ಬದ ಮೇಲೆ ಗೋಣಿಚೀಲ ಹಾಕಿಕೊಂಡು ಅದರ ಮೇಲೆ ಕುಳಿತು ಜೀವನವನ್ನು ಹುಡುಕಿಕೊಂಡು ಮುಂಬಯಿ ತಲುಪಿದ ಹುಡುಗ ಇಂದು ಸುಮಾರು ಐದು ಸಾವಿರ ಜನರಿಗೆ ಕೆಲಸ ಕೊಡಿಸಿದ ಅನ್ನದಾತ ”

ಸಾಮಾನ್ಯವಾಗಿ ಕೆಲವು ವರ್ಷಗಳ ಹಿಂದೆ ಕರಾವಳಿಯವರು ಜೀವನವನ್ನು ಹುಡುಕಿಕೊಂಡು ಹೋಗುತ್ತಿದ್ದುದು ಮಹಾನಗರಿ ಮುಂಬಯಿಗೆ. ಮುಖ್ಯವಾಗಿ ಹೋಟೇಲುಗಳಲ್ಲಿ ಕೆಲಸ ಮಾಡಲು. ಅಂದು ಏಳನೆಯ ತರಗತಿಯವರೆಗೆ ಓದಿದ್ದ ಆ ಹುಡುಗ ಕೂಡ ಜೀವನವನ್ನು ಹುಡುಕಿಕೊಂಡು ಮುಂಬಯಿ ಬಸ್ ಹತ್ತಿದ್ದ. ಕೈಯಲ್ಲಿ ದುಡ್ಡಿರಲಿಲ್ಲ. ಆದರೆ ಕಣ್ಣ ತುಂಬಾ ಕನಸುಗಳಿದ್ದವು. ಆ ಹುಡುಗನ ಹೆಸರು

” ಗೋವಿಂದ ಬಾಬು ಪೂಜಾರಿ “

ಊರು ಕಡಲತಡಿಯ ಬೈಂದೂರಿನ ಬಿಜೂರು. ಕಡು ಬಡತನ. ಓದು ಮುಂದುವರಿಸಲು ಸಾಧ್ಯವಾಗದ ಪರಿಸ್ಥಿತಿ. ಸಾಮಾನ್ಯವಾಗಿ ಸ್ವಲ್ಪ ಮಟ್ಟಿಗೆ ಈ ಕಷ್ಟಗಳಿಂದ ಹೊರಬರಲು ಕಣ್ಮುಂದೆ ಕಾಣಿಸುವುದೇ ಹೊಟೇಲ್ ಕೆಲಸ.
ಅಂದು ಕನಸು ತುಂಬಿದ್ದ ಕಣ್ಣುಗಳಿಂದ ಬಸ್ಸಿನಲ್ಲಿ ಎಣ್ಣೆ ಡಬ್ಬದ ಮೇಲೆ ಗೋಣಿಚೀಲ ಹಾಕಿಕೊಂಡು ಕುಳಿತು ಸುಮಾರು ಇಪ್ಪತ್ತು ಗಂಟೆ ಪ್ರಯಾಣ ಮಾಡಿ ಮುಂಬಯಿ ತಲುಪಿದ್ದ ಗೋವಿಂದ ಪೂಜಾರಿ ಆರಂಭದಲ್ಲಿ ಒಂದು ಕ್ಯಾಂಟೀನ್ ನಲ್ಲಿ ಟೀ ಮಾಡುವ ಹುಡುಗನಾಗಿ ಸೇರಿಕೊಳ್ಳುತ್ತಾರೆ. ಆಮೇಲೆ ಇನ್ನೊಂದು ಹೋಟೇಲ್ ನಲ್ಲಿ ಅಡಿಗೆಯವರಾಗಿ ಕೆಲಸಮಾಡುತ್ತಾರೆ. ಆದರೆ ತನ್ನದೇ ಆದ ಸ್ವಂತ ಉದ್ಯಮ ಮಾಡಬೇಕೆಂಬ ತುಡಿತ ಆ ಮನುಷ್ಯನಲ್ಲಿತ್ತು. ದುಡಿದು ಉಳಿಸಿದ ಹಣದಿಂದ ಒಂದು ಕಿರಾಣಿ ಅಂಗಡಿ ಆರಂಭಿಸುತ್ತಾರೆ. ಆದರೆ ವಿಪರೀತ ನಷ್ಟ ಅನುಭವಿಸುತ್ತಾರೆ.
ನಂತರ ಒಬ್ಬರ ಸಹಾಯದಿಂದ ಫೈವ್ ಸ್ಟಾರ್ ಹೋಟೆಲ್ ಒಂದರಲ್ಲಿ ಕ್ಲಿನಿಂಗ್ ಕೆಲಸಕ್ಕೆ ಸೇರುತ್ತಾರೆ. ನಂತರ ಅದೇ ಹೋಟೇಲ್ ನಲ್ಲಿ ಕಿಚನ್ ವಿಭಾಗ ಸೇರಿಕೊಳ್ಳುತ್ತಾರೆ. ಮುಂದೆ ಅನುಭವದಿಂದ ಹಾಗೂ ಪರಿಶ್ರಮದ ಫಲವಾಗಿ ನಾಲ್ಕೈದು ಫೈವ್ ಸ್ಟಾರ್ ಹೋಟೆಲ್ ಗಳಲ್ಲಿ ಶೇಫ್ ಆಗಿ ಕೆಲಸಮಾಡುತ್ತಾರೆ. ಆದರೆ ತನ್ನ ಸ್ವಂತ ಉದ್ಯಮ ಮಾಡಬೇಕೆಂಬ ತುಡಿತ ನಿದ್ದೆ ಮಾಡಲಿಕ್ಕೆ ಬಿಡಬೇಕಲ್ವ.
ಒನ್ ಫೈನ್ ಡೇ ಈ ಕೆಲಸಗಳಿಗೆಲ್ಲ ಇತೀಶ್ರೀ ಹಾಡಿ ಒಂದು ಕಂಪನಿಯಲ್ಲಿ ತಮ್ಮದೇ ಕ್ಯಾಂಟೀನ್ ಆರಂಭಿಸುತ್ತಾರೆ. ಆಗ ಕಾಲ ಸ್ತಂಭಿಸಿತು. ಮುಂದೆಂದೂ ಅವರು ಹಿಂತಿರುಗಿ ನೋಡಲಿಲ್ಲ. ನಾಲ್ಕು ಜನ ಉದ್ಯೋಗಿಗಳಿಂದ ಆರಂಭವಾಯಿತು ಆ ಕ್ಯಾಂಟೀನ್ . ಮುಂದೆ ಆಹಾರದ ಗುಣಮಟ್ಟ, ಉತ್ತಮ ಸೇವೆಗಳಿಂದ ಮುಂಬಯಿಯ ಸುಮಾರು ಮೂವತ್ತು ಕಂಪನಿಗಳಲ್ಲಿ ಇವರ ಕ್ಯಾಂಟೀನ್ ಆರಂಭವಾಗುತ್ತದೆ. ಆಮೇಲೆ ಹೈದರಾಬಾದ್, ಪುಣೆ, ಜಾರ್ಖಂಡ್, ಗುಜರಾತ್ ಮುಂತಾದ ಕಡೆಗಳಲ್ಲಿನ ಕಂಪನಿಗಳಲ್ಲಿ ತಮ್ಮ ಕ್ಯಾಂಟೀನ್ ಆರಂಭಿಸುತ್ತಾರೆ. 2007 ರಲ್ಲಿ ಇವರ ಕಂಪನಿಗೆ “ಶೆಫ್ ಟಾಕ್ ಫುಡ್ ಆ್ಯಂಡ್ ಹಾಸ್ವಿಟ್ಯಾಲಿಟಿ ಪ್ರೈವೇಟ್ ಲಿಮಿಟೆಡ್ ” ಎಂದು ನಾಮಕರಣಗೊಂಡು ಇಂದು ಸುಮಾರು ಐದಾರು ರಾಜ್ಯಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸರಿ ಸುಮಾರು ಐದು ಸಾವಿರ ಜನರಿಗೆ ಉದ್ಯೋಗವನ್ನು ಕಲ್ಪಿಸಿದ್ದಾರೆ.
ಕೆಲವೊಂದು ವಿಷಯಗಳನ್ನು ಓದಿ ತಿಳಿದು ಕೊಳ್ಳಬಹುದು . ಆದರೆ ಹಸಿವನ್ನು ಓದಿ ತಿಳಿದುಕೊಳ್ಳಲು ಸಾಧ್ಯವಿಲ್ಲ. ಅದನ್ನು ಅನುಭವಿಸಿದವನು ಮಾತ್ರ ತಿಳಿದುಕೊಳ್ಳುತ್ತಾನೆ. ಗೋವಿಂದ ಪೂಜಾರಿ ಹಸಿವನ್ನು ಅನುಭವಿಸಿ ತಿಳಿದುಕೊಂಡವರು. ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ಊರಿನಲ್ಲಿ ” ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ” ಸ್ಥಾಪಿಸಿದ್ದಾರೆ. ಇದರ ಮುಖ್ಯ ಧ್ಯೇಯ ವಿದ್ಯೆ ಮತ್ತು ಆರೋಗ್ಯ. ಕೋವಿಡ್ 19 ಸಂದರ್ಭದಲ್ಲಿ ಈ ಒಂದು ಟ್ರಸ್ಟಿನಿಂದ ಬೈಂದೂರು ಮತ್ತು ಕುಂದಾಪುರಗಳಲ್ಲಿನ ಹಲವಾರು ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಲಾಯಿತು. ನೀರಿನ ಅಭಾವವಿದ್ದ ಬೀಜೂರು ಗ್ರಾಮಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಲಾಯಿತು. ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನೂಕೂಲ ಮಾಡಿ ಕೊಡಲಾಗುತ್ತಿದೆ.
ಬೆಂಗಳೂರಿನಲ್ಲಿ ಪ್ರಜ್ಞಾಸಾಗರ್ ಹೋಟೆಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಡಿಯಲ್ಲಿ ಈಗಾಗಲೆ ನಾಲ್ಕು ಹೋಟೆಲುಗಳು ಆರಂಭಗೊಂಡಿವೆ. ಇನ್ನು ಹತ್ತು ಹೋಟೇಲುಗಳು ಆರಂಭಗೊಳ್ಳಲಿವೆ.
ಇನ್ನೂ ಹೊಸ ಪ್ರಾಡಕ್ಟ್ ” ಫಿಶ್ ಚಿಪ್ಸ್ ” ಕೂಡ ಇವರ ಕಂಪನಿಯ ವತಿಯಿಂದ ಲಾಂಚ್ ಆಗಿದೆ.
ಸುಮಾರು ಹತ್ತು ಸಾವಿರ ಉದ್ಯೋಗ ಸೃಷ್ಟಿಸಬೇಕೆಂಬ ಕನಸು ಗೋವಿಂದ ಬಾಬು ಪೂಜಾರಿಯವರದ್ದು. ಅವರ ಕನಸು ನನಸಾಗಲಿ.
ಯೂಟ್ಯೂಬ್ ನಲ್ಲಿ ಅವರ ಕೆಲವು ಸಂದರ್ಶನಗಳನ್ನು ನೋಡಿ ಶಬ್ಧ ರೂಪಕ್ಕೆ ಅಕ್ಷರ ರೂಪ ಕೊಟ್ಟಿದ್ದೇನೆ. ಇಂತವರು ಇಂದಿನ ಬಡ ವಿದ್ಯಾರ್ಥಿಗಳಿಗೆ ಆದರ್ಶವಾಗಲಿ. ಅವರ ಉದ್ಯಮದಲ್ಲಿ ಅವರು ಇನ್ನೂ ಎತ್ತರಕ್ಕೆ ಬೆಳೆಯಲಿ. ಹಸಿವನ್ನು ಅನುಭವಿಸಿ ತಿಳಿದುಕೊಂಡಿರುವ ಅವರಿಂದ ಬಹಳಷ್ಟು ಕುಟುಂಬಗಳ ಹಸಿವಿನ ಚೀಲ ತುಂಬಲಿ.

✍️ಅರುಣ್ ವಿ ಬಾರ್ಕೂರ್


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »