TOP STORIES:

ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದ ವಾಸಿಯಾಗಿದ್ದಾರೆ..ಹರಿಣಿ ನಿಲೇಶ್ ಪೂಜಾರಿ


ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದವಾಸಿಯಾಗಿದ್ದಾರೆ.

ಹರಿಣಿ ನಿಲೇಶ್ ಪೂಜಾರಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ    ಶ್ರೀ ರಘುನಾಥ್ ಸುವರ್ಣ ಮತ್ತುಶ್ರೀಮತಿ ಶೋಭಾ ದಂಪತಿಯ ಪುತ್ರಿ. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬಂತೆ ಶಾಲಾ ದಿನಗಳಲ್ಲಿಯೇ ಹರಿಣಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆಯುತ್ತಿದ್ದರು.. ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಮುಗಿಸಿದಹರಿಣಿ.. 12 ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಹರಿಣಿ ನಿಲೇಶ್ ಪೂಜಾರಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ    ಶ್ರೀ ರಘುನಾಥ್ ಸುವರ್ಣ ಮತ್ತುಶ್ರೀಮತಿ ಶೋಭಾ ದಂಪತಿಯ ಪುತ್ರಿ. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬಂತೆ ಶಾಲಾ ದಿನಗಳಲ್ಲಿಯೇ ಹರಿಣಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆಯುತ್ತಿದ್ದರು.. ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಮುಗಿಸಿದಹರಿಣಿ.. 12 ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಮುಂದೆ ಆಳ್ವಾಸ್ ಕಾಲೇಜು ಮೂಡಬಿದ್ರೆಯಲ್ಲಿ M. Com ಪದವಿದರೆಯಾದ ಹರಿಣಿ  ಅಲ್ಲಿಂದ ನೇರಾ ಹೊರಟಿದ್ದು ಕಲಾಜಗತ್ತಿಗೆ.. ಆವತ್ತಿನ ನಂಬರ್ ಒನ್ ಕನ್ನಡ ಕಾಮಿಡಿ ಸೀರಿಯಲ್ ಪಂಚರಂಗಿ ಪೊಂ ಪೊಂ ಸಾವಿರ ಸಂಚಿಕೆಗಳಲ್ಲಿ ಅಭಿನಯಿಸಿದ ಕೀರ್ತಿಹರಿಣಿಗಿದೆ.. ಅಲ್ಲಿಂದ ಮುಂದೆ ಹರ ಹರ ಮಹಾದೇವ ಧಾರಾವಾಹಿಯಲ್ಲಿ ಇವರು ಮಾಡಿದ ಸರಸ್ವತಿ ದೇವಿಯ ಪಾತ್ರದಿಂದಜನಮಾನಸದಲ್ಲಿ ಹರಿಣಿ ಅಚ್ಚಳಿಯದೆ ಉಳಿದರು..ಮದುಬಾಲ, ಲಕ್ಷ್ಮಿ ಬಾರಮ್ಮ,ಮದುಮಗಳು ಹೀಗೆ ಸಾಲು ಸಾಲುಧಾರಾವಾಹಿಗಳಲ್ಲಿ ಹರಿಣಿ ಮಿಂಚಿದರು

ಕಂಚಿಲ್ದಾ ಬಾಲೆ ತುಳು ಸಿನಿಮಾದಲ್ಲಿ ಬಾಲಮಾಣಿಯಾಗಿ ಅಭಿನಯಿಸಿ ತುಳುಚಿತ್ರ ರಸಿಕರಿಗೆ ಮಾತ್ರವಲ್ಲದೆ ಆದ್ಯಾತ್ಮಿಕವಾದಿಗಳಿಗೂಹತ್ತಿರ

ವಾದರೂ.. ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ ಬಾಜನವಾದ ಅರ್ಜುನ್ ವೆಡ್ಸ್ ಅಮೃತ ತುಳು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿಕಾಣಿಸಿಕೊಂಡರು.. ಸುವರ್ಣ ಸೂಪರ್ ಜೋಡಿ, ಡ್ರೀಮ್ ಗರ್ಲ್ಸ್ ಹೀಗೆ ಹಲವಾರು ರಿಯಾಲಿಟಿ ಶೋಗಳಲ್ಲಿ ಬಾಗವಹಿಸಿದರು..

ಬೆಸ್ಟ್ ಕಾಮಿಡಿ ಆಕ್ಟ್ರೆಸ್ಸ್, ಬೆಸ್ಟ್ ಪರ್ಫಾರ್ಮೆನ್ಸ್, ಹೀಗೆ ಹಲವಾರು ಪ್ರಶಸ್ತಿ, ಸನ್ಮಾನಗಳು ಹರಿಣಿಯನ್ನ ಹುಡುಕಿ ಬಂದವು.

ಮುಂದೆ ಬಿಲ್ಲವ ಅಸೋಸಿಯೇಷನ್ ಮುಂಬೈ ಯುವ ವಿಭಾಗದ ಕಾರ್ಯಧ್ಯಕ್ಷರಾದ ನಿಲೇಶ್ ಪೂಜಾರಿ ಪಲಿಮಾರು ಅವರಬಾಳಸಂಗಾತಿಯಾದ ಹರಿಣಿ ಸದ್ಯಕ್ಕೆ ಕಲಾಜಗತ್ತಿನಿಂದ ದೂರವಿದ್ದರೂ ಕೂಡ ಸಾಮಾಜಿಕ ಸೇವೆಯಲ್ಲಿ ತಮ್ಮನ್ನ ತಾವುನಿರಂತರವಾಗಿ ತೊಡಗಿಸಿಕೊಂಡಿದ್ದಾರೆ..ಜೊತೆಗೆ ಬರವಣಿಗೆಯಲ್ಲಿಯೂ ಹರಿಣಿ ತಮ್ಮ ಛಾಪನ್ನ ಮೂಡಿಸುವತ್ತ ಹೆಜ್ಜೆ ಇಡುತ್ತಿದ್ದಾರೆ.. ಜೆಸಿಐ ಸಂಸ್ಥೆಯ ವಾರ್ಷಿಕ ಪುಸ್ತಕ ಚೈತನ್ಯ ಸಂಪಾದಕಿಯಾಗಿಯೂ ಹರಿಣಿ ಕಾರ್ಯನಿರ್ವಾಹಿಸಿದ್ದಾರೆ. ನಿರೂಪಕಿಯಾಗಿಯೂಹರಿಣಿಯ ಹೆಸರು ಪ್ರಸಿದ್ದಿಯಾಗಿದೆ.

2018ರಲ್ಲಿ ಮಡಿಕೇರಿಯಲ್ಲಿ ಸಂಭವಿಸಿದ ನೆರೆ ಸಂದರ್ಭದಲ್ಲಿ ಮಡಿಕೇರಿಯಲ್ಲಿಸ್ವಯಂಸೇವಕಿಯಾಗಿ ಕೆಲಸ ಮಾಡಿದ ಹರಿಣಿ, ತಮ್ಮ ಮಗಳು ಸಹನಿ ಮೊದಲ ವರ್ಷದ ಹುಟ್ಟುಹಬ್ಬವನ್ನ ಮಾನಸಿಕ ಭಿನ್ನಸಾಮರ್ಥ್ಯದ ಮಕ್ಕಳ ವಿಜೇತ ವಿಶೇಷ ಶಾಲೆಯಲ್ಲಿ ಆಚರಿಸಿ ಮೆಚ್ಚುಗೆ ಪಡೆದಿದ್ದರು..

  ಸದ್ಯ ಸಹನಿ ಸ್ಟಾರ್ ಎಂಬ ಹೆಸರಿನ ಸಂಸ್ಥೆಯ ಮುಖ್ಯಸ್ತೆ ಯಾಗಿರುವ ಹರಿಣಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲಿಬಾಗಿಯಾಗುವ ಇಂಗಿತಾ ಹೊಂದಿದ್ದಾರೆ..ಹಲವಾರು ಬಾರಿ ರಕ್ತದಾನ ಶಿಬಿರ ಆಯೋಜನೆ ಮಾಡಿರುವ ಹರಿಣಿ ಸ್ವತಃ 24 ಬಾರಿರಕ್ತದಾನ ಮಾಡಿ ಸಾಮಾಜಿಕ ಕಳಕಳಿ ತೋರಿದ್ದಾರೆ..

   ಹರಿಣಿ ಅವರ ಯಶಸ್ಸಿಗೆ ಸ್ಫೂರ್ತಿಯಾದ ಅಪ್ಪ, ಅಮ್ಮ ಅಣ್ಣ ಹರಿಪ್ರಸಾದ್, ತಮ್ಮ ನಿತೇಶ್ ಜೊತೆಗೆ ಗಂಡ ನಿಲೇಶ್ ಪೂಜಾರಿಫಲಿಮಾರ್ ಅವರ ಸಹಕಾರಕ್ಕೆ ಅಭಾರಿಯಾಗಿರುವ ಹರಿಣಿ ಸದ್ಯ ಕಲಾ ಜಗತ್ತಿನಿಂದ ದೂರವಿದ್ದರೂ ಅವರೂ ನವರಾತ್ರಿಸಂದರ್ಭದಲ್ಲಿ ಮಾಡಿಸಿದ ಶಾರದೆಯಾ ಫೋಟೋಶೂಟ್ ಎಲ್ಲೆಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ..

  ಶಾರದೆಯ ಫೋಟೋಶೂಟ್ ಗಾಗಿ 21 ದಿನ ಕಟ್ಟುನಿಟ್ಟಿನ ವೃತ ಆಚರಿಸಿದ ಹರಿಣಿಗೆ ಶಾರದೆಯ ಆಶೀರ್ವಾದ ಮಡಿಲು ಸೇರಲಿಎನ್ನುವುದು ನಮ್ಮ ಆಶಯ..

ನವೀನ್ ಪಡ್ಡು ಇನ್ನಾ

ಕಮಲ  ಕಲಾ ವೇದಿಕೆ ಮುಂಬೈ


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »