TOP STORIES:

ಕನಸಿನ ಮನೆ ನನಸಾಗಿಸಲು ಆಸರೆಯಾದ ಗುರು ಬೆಳದಿಂಗಳು


ಬಂಟ್ವಾಳ: ಮಂಗಳೂರಿನ ಗುರುಬೆಳದಿಂಗಳು ಸಂಸ್ಥೆಯ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಪರಾರಿ ಎಂಬಲ್ಲಿ ನಿರ್ಮಾಣಗೊಂಡ ಚಿತ್ರಾಕ್ಷಿ ಅವರ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು.

ಪಣಂಬೂರು ಎಸಿಪಿ ಮಹೇಶ್ ಕುಮಾರ್ ಅವರು ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಲವಾರು ಗೃಹಪ್ರವೇಶಕ್ಕೆ ಹೋಗಿದ್ದೇನೆ. ಆದರೆ ಇದೊಂದು ಹೃದಯಸ್ಪರ್ಷಿ ಗೃಹಪ್ರವೇಶದ ಕಾರ್ಯಕ್ರಮ ಎಂದರು. ಯುವಕರ ತಂಡವನ್ನು ಕಟ್ಟಿಕೊಂಡು ಸಮಾಜಕ್ಕೆ ಆಸರೆಯಾಗುವಂತಹ ಕಾರ್ಯಕ್ರಮವನ್ನು ಗುರುಬೆಳದಿಂಗಳು ತಂಡ ಮಾಡುತ್ತಿದೆ. ಇಂತಹ ಸಂಘ ಸಂಸ್ಥೆಗಳ ಅಗತ್ಯತೆ ಸಮಾಜಕ್ಕೆ ಇದೆ.‌ ಇದು ಯುವ ಸಮುದಾಯಕ್ಕೆ ಮಾದರಿ ಎಂದು ತಿಳಿಸಿದರು.

ಗುರು ಬೆಳದಿಂಗಳು ಸಂಘಟನೆಯ ಅಧ್ಯಕ್ಷ ಪದ್ಮರಾಜ್ ಆರ್. ಅಧ್ಯಕ್ಷತೆ ವಹಿಸಿ ಮಾತನಾಡಿ ಗುರುಬೆಳದಿಂಗಳು ಸಂಘಟನೆಗೆ ಇಂತಹ ಸೇವಾ ಕಾರ್ಯಗಳನ್ನು ಮಾಡಲುವ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶ, ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಯವರು ಗೋಕರ್ಣ ಕ್ಷೇತ್ರದಲ್ಲಿ ಮಾಡಿದ ಜನಪರ ಕಾರ್ಯ ಪ್ರೇರಣೆ ನೀಡಿದೆ. ಬಡವರ ಕಣ್ಣೊರೆಸುವ ಕಾರ್ಯ ಆಗಬೇಕು ಎನ್ನುವ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ, ಆಸರೆ ಎನ್ನುವ ಧ್ಯೆಯೋದ್ದೇಶಗಳನ್ನಿಟ್ಟುಕೊಂಡು ಇಂತಹ ಸೇವಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಯುವಕರ ಪರಿಶ್ರಮದಿಂದ ಹಾಗೂ ಹಲವು ಮಂದಿ ದಾನಿ ಸಹಕಾರದಿಂದ ಮನೆ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.

ಗೋಕರ್ಣ ಕ್ಷೇತ್ರದ ಅಭಿವೃದ್ದಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ,  ಪನಮ ಗ್ರೂಪ್ ವಿವೇಕ್ ರಾಜ್ ಪೂಜಾರಿ, ಉದ್ಯಮಿ ಕಿಶೋರ್ ದಂಡಕೇರಿ, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ, ಮನಪಾ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಅನಿಲ್ ಕುಮಾರ್ ಪೂಜಾರಿ, ಪ್ರಮುಖರಾದ ವಿಷ್ಣುದಾಸ್ ಉಪಸ್ಥಿತರಿದ್ದರು.

ಸಂಚಾಲಕ ಸುನೀಲ್ ಕುಮಾರ್ ಬಜಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ‌ಕಾರ್ಯದರ್ಶಿ ರಾಜೇಶ್ ಸುವರ್ಣ ವಂದಿಸಿದರು.‌ ಮನೆ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »