TOP STORIES:

ಕರಾವಳಿಯ ಸ್ಥಳೀಯ ಕುಚ್ಚಲಕ್ಕಿ ಪ್ರಭೇದ ಪಡಿತರ ವ್ಯವಸ್ಥೆಯಡಿ ವಿತರಣೆ ಅನುಮೋದನೆ


ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರು ಪಡಿತರದ ಮೂಲಕ ಕುಚ್ಚಲ್ಲಕ್ಕಿಯನ್ನು ವಿತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಉಡುಪಿ- ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಸಮಾಜ ಕಲ್ಯಾಣ ಇಲಾಖಾ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಪ್ರಯತ್ನದಿಂದ ಕರ್ನಾಟಕ ಸರ್ಕಾರ ಸದರಿ ಬೇಡಿಕೆಯನ್ನು ಅನುಮೋದಿಸುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು, ಕೇಂದ್ರದ ಸದರಿ ಇಲಾಖಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು ಸದರಿ ಪ್ರಸ್ತಾವನೆಯನ್ನು ಅನುಮೋದಿಸುವಂತೆ ಕೋರಿದ್ದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಮನವಿಯನ್ನು ಪರಿಗಣಿಸಿದ ಸನ್ಮಾನ್ಯ ಶ್ರೀ ಪಿಯೂಷ್ ಗೋಯಲ್ ಅವರು ದಿನಾಂಕ. 06.01.22ರಂದು ಕೇಂದ್ರ ಸಚಿವೆ, ಶೋಭಾ ಕರಂದ್ಲಾಜೆಯವರಿಗೆ ಪತ್ರ ಬರೆದು, ಮೇಲ್ಕಾಣಿಸಿದ ಕುಚ್ಚಲಕ್ಕಿ ಪ್ರಭೇಧಗಳನ್ನು MSP ಮೂಲಕ ಖರೀದಿ ಮಾಡಿ ಪಡಿತರದ ಮೂಲಕ ವಿತರಿಸಲು ರಾಜ್ಯ ಸರಕಾರಕ್ಕೆ ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ.

ಕೇಂದ್ರದ ಈ ಅನುಮತಿಯೊಂದಿಗೆ ಉಡುಪಿ-ದಕ್ಷಿಣ ಕನ್ನಡದ ರೈತರ ಕೃಷಿ ಉತ್ಪಾದನೆಗೆ ಇನ್ನು ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಂತಾಗಿದೆ. ಅದಲ್ಲದೇ, ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯಾದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸುವ ಬೇಡಿಕೆಗೆ ಪುಷ್ಟಿ ಸಿಕ್ಕಿದೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »