TOP STORIES:

FOLLOW US

ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!


ಪಾಂಡಿಚೇರಿ: ಪೊಲೀಸರು ಇತ್ತೀಚಿನ ದಿನಗಳನ್ನು ವಾಹನ ತಡೆದು ತಪಾಸಣೆ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಕೆಲವೊಂದು ಅಹಿತಕರ ಘಟನೆಗಳೇ ಇದಕ್ಕೆ ಸಾಕ್ಷಿಯಾಗುತ್ತಿದೆ. ಆದರೆ ಇಲ್ಲೊಂದು ವಿಶೇಷ ಘಟನೆ ಎಂಬಂತೆ ಪಾಂಡಿಚೇರಿಗೆ ತೆರಳುವ ಹೆದ್ದಾರಿಯಲ್ಲಿ ತಮಿಳುನಾಡು ಪೊಲೀಸ್ ಒಬ್ಬರು ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮನವಿ ಮಾಡಿದ ವಿಡಿಯೋ ಭಾರಿ ವೈರಲ್ ಆಗಿದೆ.

ಪಾಂಡೇಚೇರಿಗೆ ಕರ್ನಾಟಕದ ಬೈಕ್ ಸವಾರ ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಸವಾರನಿಗೆ ದೂರದಿಂದಲೇ ಪೊಲೀಸರು ನಿಲ್ಲಿಸಲು ಮನವಿ ಮಾಡಿದ್ದಾರೆ. ಬೈಕ್ ಸವಾರ ಬೈಕ್ ನಿಲ್ಲಿಸಿದ ವೇಳೆ ತಮಿಳುನಾಡು ಪೊಲೀಸ್, ಕರ್ನಾಟಕವಾ? ಎಂದು ಕೇಳಿ, ಬಳಿಕ ಪೊಲೀಸ್ ಒಬ್ಬರು ತನ್ನ ಕೈಯಲ್ಲಿರುವ ಔಷಧವನ್ನು ತೋರಿಸಿ, ಇದು ಈಗಷ್ಟೆ ಹೋಗಿರುವ ಸರ್ಕಾರಿ ಬಸ್‌ನಲ್ಲಿರುವ ಒಬ್ಬರು ತಾಯಿಯ ಕೈಯಿಂದ ಬಿದ್ದಿದ್ದು, ಅವರಿಗೆ ಈ ಔಷಧ ತಲುಪಿಸಿ ಎಂದಿದ್ದಾರೆ.

ಇನ್ನು ಹೆದ್ದಾರಿಯಲ್ಲಿ ಪೊಲೀಸರು ತಪಾಸಣೆ ಮಾಡುತ್ತಿದ್ದ ವೇಳೆ ಬಸ್‌ನ ಬದಿಯಲ್ಲಿ ಕುಳಿತಿದ್ದ ತಾಯಿಯ ಔಷಧಿ ಹೊರಬಿದ್ದಿದ್ದು, ಬಸ್ ವೇಗವಾಗಿ ಮುಂದೆ ಸಾಗಿದ ಕಾರಣ ಕೂಗಿದರೂ ಬಸ್ ಮುಂದೆ ಸಾಗಿದೆ.

ಹಾಗಾಗಿ ಪೊಲೀಸ್ ಔಷಧಿಯನ್ನು ಬೈಕ್ ಸವಾರನ ಬಳಿ ತಲುಪಿಸಲು ಹೇಳಿದ್ದು, ಔಷಧ ಸ್ವೀಕರಿಸಿದ ಕರ್ನಾಟಕದ ಬೈಕ್ ಸವಾರ ವೇಗವಾಗಿ ಬೈಕ್ ಚಲಾಯಿಸಿ ಬಸ್ ಚೇಸ್ ಮಾಡಿದ್ದಾನೆ. ಬಳಿಕ ಡ್ರೈವರ್ ಬಳಿ ಬಸ್ ನಿಲ್ಲಿಸುವಂತೆ ಸೂಚನೆ ನೀಡಿದ್ದು, ತಾಯಿಗೆ ಔಷಧವನ್ನು ನೀಡಿದ್ದಾರೆ.

ಇನ್ನು ಈ ಎಲ್ಲಾ ಘಟನೆ ಬೈಕ್ ಸವಾರ ಹೆಲ್ಮೆಟ್ ಕ್ಯಾಮಾರದಲ್ಲಿ ರೆಕಾರ್ಡ್ ಆಗಿದ್ದು, ಭಾರಿ ವೈರಲ್ ಆಗಿದೆ.

Video viral: ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »