TOP STORIES:

FOLLOW US

ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿವರ ಬದುಕಿನ ಇನ್ನೊಂದು ಮುಖ


ಹೊರಗೆ‌  ಮಾತು ಜಾಸ್ತಿ.. ಹೆಂಡತಿ ಮಕ್ಕಳ ಜತೆ…?

ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ತುಂಬಾ ಮಾತನಾಡುತ್ತಾರೆ.’

ಕಾಂಗ್ರೆಸ್ ಪರ ಮತ್ತು ವಿರೋಧಿಗಳ ಬಾಯಲ್ಲಿ ಇದೇ ಮಾತು. ಆದರೆ ಮನೆಯಲ್ಲಿ ಇದಕ್ಕೆ ವ್ಯತಿರಿಕ್ತ. ಮಕ್ಕಳ ಬಳಿ ತಿಂಗಳುಗಟ್ಟಲೆಮಾತನಾಡದೆ ಇದ್ದದ್ದೂ ಉಂಟು!

ಅವರು ಮಗಳ ಜತೆ ಸರಿಯಾಗಿ ಮಾತನಾಡಿದ್ದು ಒಂದೇ ಬಾರಿಯಂತೆ. ಅದು ಮದುವೆಯ ಹಿಂದಿನ ದಿನ, ಭರ್ತಿ ಒಂದು ಗಂಟೆಮಾತನಾಡಿದ್ದಾರೆ. ಸೊಸೆಯಂದಿರ ಜತೆ ವರ್ಷಕ್ಕೆ ಒಮ್ಮೆ ಮಾತನಾಡಿದರೆ ಹೆಚ್ಚು. ಮಕ್ಕಳು ಬಿಡಿ ಮೊಮ್ಮಕ್ಕಳ ಜತೆಯೂಮಾತನಾಡುವುದಿಲ್ಲ.

ಖುದ್ದು ಅವರ ಕಿರಿ ಮಗ ದೀಪಕ್ ಪೂಜಾರಿಕನ್ನಡಪ್ರಭಜತೆ ತಂದೆಯ ಅಂತರಂಗ ತೆರೆದಿಟ್ಟ ಬಗೆ.

ತಂದೆ ಮನೆಯಲ್ಲಿ ಮಾತನಾಡುವುದೇ ಅಪರೂಪ. ಸೊಸೆಯಂದಿರ ಬಳಿ ಸರಾಸರಿ ವರ್ಷಕ್ಕೆ ಒಮ್ಮೆ ಮಾತನಾಡುತ್ತಾರೆ. ತಾಯಿ ಬಳಿಮನೆ, ಸಂಬಂಧಿಕರ ವಿಚಾರ ಮಾತನಾಡುತ್ತಾರೆ, ಆದರೆ ರಾಜಕೀಯ ಮಾತನಾಡುವುದೇ ಇಲ್ಲ‘.

ಪ್ರೀತಿ ಇಲ್ಲವೆಂದಲ್ಲ. ಬಾಯಿ ಬಿಟ್ಟು ಹೇಳುವುದಿಲ್ಲ. ಪ್ರೀತಿ, ವಿಶ್ವಾಸ ತಂದೆ ಮಾತಲ್ಲಿಲ್ಲ. ಆದರೆ, ಉದಾಹರಣೆ ಮೂಲಕತೋರ್ಪಡಿಸಿದ್ದಾರೆಎನ್ನುತ್ತಾರೆ  ದೀಪಕ್.       

ಎಲ್ಲ ಕುಟುಂಬದವರು ಒಟ್ಟಾಗಿ ಕಾರ್ ನಲ್ಲಿ ವಾರದ ಕೊನೆಯಲ್ಲಿ ಸಮಾರಂಭಗಳಿಗೆ ಹೋಗುವುದು ಮಾಮೂಲು.ಆದರೆ

ಪೂಜಾರಿ ಅವರು ತಮ್ಮ ಪತ್ನಿ, ಮಕ್ಕಳ ಜತೆ ಕಾರ್ ನಲ್ಲಿ ಮದುವೆಗೆ ಹೋಗಿದ್ದಾಗಲಿ,ಹೋಟೆಲ್ಗೆ ಹೋಗಿದ್ದಾಗಲಿ ನಾವುಜೀವಮಾನದಲ್ಲಿ ನೋಡಿಲ್ಲಎನ್ನುತ್ತಾರೆ ಪೂಜಾರಿಯವರ ನೆರೆ ಮನೆಯ ರಿಯಾಜ್.

ನನ್ನ ಎರಡನೇ ಅಣ್ಣ ತೀರಿ ಹೋದಾಗ ತಂದೆ ತುಂಬಾ ಖಿನ್ನರಾಗಿದ್ದರು. ಐದು ವರ್ಷಗಳ ಕಾಲ ದುಃಖದಿಂದ ಹೊರ ಬಂದಿರಲಿಲ್ಲ. ಮಕ್ಕಳ ಮೇಲೆ ಎಷ್ಟು ಪ್ರೀತಿ ಇದೆ ಎನ್ನುವುದು ನಮಗೆ ಆಗ ಸಂಪೂರ್ಣ ಗೊತ್ತಾಗಿತ್ತು ಎನ್ನುತ್ತಾರೆ ದೀಪಕ್.

ರಾಜಕೀಯ ಮನೆ ಒಳಗೆ ಬಿಡುವುದಿಲ್ಲ. ಕಾರ್ಯಕರ್ತರಿಗೂ ಸರ್ಕ್ಯುಟ್ ಹೌಸ್ಗೆ ಬರ ಹೇಳುತ್ತಾರೆ. ನಮ್ಮ ಹುದ್ದೆ, ಬಡ್ತಿ ಬಗ್ಗೆಕೇಳುವುದೇ ಇಲ್ಲ. ಇನ್ನು ಶಿಫಾರಸು ಕನಸಲ್ಲಿಯೂ ಅಸಾಧ್ಯ. ಬಹಳ ಹಿಂದೆ ನಮ್ಮ ಕಚೇರಿಯ ಸಹಾಯಕರ ಸಂಬಂಧಿಗೆ ಉದ್ಯೋಗಬೇಕಾಗಿತ್ತು. ತಂದೆ ಬಳಿ ಹೋದೆ, ಕೆಲಸ ಮಾಡಿಸಿದರು.

ಮತ್ತೊಮ್ಮೆ ಬೇರೊಬ್ಬರಿಗೆ ಉದ್ಯೋಗ ನೀಡುವಂತೆ ಕೇಳಿದಾಗ ಚೆನ್ನಾಗಿ ಬೈಯ್ದರು. ‘ನೀನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆಬಂದಿರಬಹುದು. ಆದರೆ ನಿನ್ನ ಬಳಿ ಕೆಲಸ ಮಾಡಿಸಿಕೊಳ್ಳುವವರು ದುರುಪಯೋಗ ಮಾಡಿಕೊಳ್ಳುತ್ತಾರೆ. ಇದೇ ಕೊನೆ, ಇನ್ನೊಂದುಬಾರಿ ಇಂಥ ವಿಚಾರದಲ್ಲಿ ಬರಬೇಡಎಂದು ಗದರಿದ್ದರು. ಇದು ಜೀವನದ ಪಾಠ ನನಗೆಎನ್ನುತ್ತಾರೆ ದೀಪಕ್

ಸೋನಿಯಾ ಚಪ್ಪಲಿ ಕಾದದ್ದು!

ಕುದ್ರೋಳಿ ದೇವಸ್ಥಾನದಲ್ಲಿ ಶತಮಾನೋತ್ಸವ ಸಂಭ್ರಮಕ್ಕೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯೇ ಬಂದಿದ್ದರು. ಸೋನಿಯಾ ಗಾಂಧಿ ಚಪ್ಪಲಿ ಮೇಲೆ ನಿಗಾ ಇರಿಸಲು ಅತ್ಯಂತ ವಿಶ್ವಾಸಿ ಒಬ್ಬನಿಗೆ ಸೂಚಿಸಿ ಎಂದು ಭದ್ರತಾ ಸಿಬ್ಬಂದಿ ಪೂಜಾರಿ ಬಳಿಹೇಳಿದರು.  ಪೂಜಾರಿ ಆಚೆ ಈಚೆ ನೋಡಿದರು, ಕಾರ್ಯಕರ್ತರ, ನಾಯಕರ ಬಳಿ ಹೇಳಲು ಆಗದು, ಅವರು ಒಪ್ಪಿದರೂ ಭದ್ರತೆಸಿಬ್ಬಂದಿಗೂ ನಂಬಿಕೆ ಬಾರದು. ಯಾರಾದರೂ ಚಪ್ಪಲಿ ಅಡಿ ಬಾಂಬ್ ಇಟ್ಟರೆ. ಹೀಗಾಗಿ ತಮ್ಮ ಮಗನನ್ನೇ ಕರೆದು ಚಪ್ಪಲಿಕಾಯುವಂತೆ ಹೇಳಿದರು.

ನಾನು ಚಪ್ಪಲಿಯನ್ನು ಅನೇಕ ಗಂಟೆಗಳ ಕಾಲ ಕಣ್ಣಿಟ್ಟು ಕಾದೆ. ಮರುದಿನ ನನ್ನನ್ನು ಕರೆದ ತಂದೆ, ಬೇಸರ ಆಯಿತೇಎಂದುಪ್ರಶ್ನಿಸಿದರು. ನಾನು ಸುಮ್ಮನಿದ್ದೆ. ಆದರೆ ನನಗೆ ಬೇಸರವಾಗಿರುವುದು ತಂದೆಗೆ ಅರ್ಥ ಆಗಿತ್ತು.

ನೋಡು ಕಾರ್ಯಕರ್ತರು, ಮುಖಂಡರಿಗೆ ಹೇಳಿದರೆ ಅವರಿಗೂ ಬೇಸರ ಆಗಬಹುದು. ತನ್ನ ಮಗ ಇರುವಾಗ ಕಾರ್ಯಕರ್ತರಿಗೆಹೇಳಿದರು ಎಂಬ ಅಪವಾದವೂ ಬರಬಹುದು. ನೀನಾದರೆ ನನ್ನ ಮಗ, ನಿನಗೆ ಪರಿಸ್ಥಿತಿ ವಿವರಿಸಬಲ್ಲೆಎಂದರು. ಇದು ನಮ್ಮ ತಂದೆವಿಶಾಲ ಮನಸ್ಸು ಎನ್ನುತ್ತಾರೆ ದೀಪಕ್.

ಮಕ್ಕಳ ಕರೆಯೋದು ಬೆಲ್ ಮೂಲಕ!

ಎಲ್ಲರೂ ಮಕ್ಕಳನ್ನು ಮುದ್ದಿನ ಹೆಸರು ಹೇಳಿ ಕರೆಯುತ್ತಾರೆ. ಆದರೆ ಪೂಜಾರಿ ತಮ್ಮ ಮಕ್ಕಳನ್ನು ಕರೆಯಲು ಕೈ ಬೆಲ್ಮಾಡಿಸಿಕೊಂಡಿದ್ದಾರೆ. ಒಂದು ಬೆಲ್ ಮಾಡಿದರೆ ಸಾಕು ಮಕ್ಕಳು ದಡದಡನೆ ಕೆಳಗೆ ಇಳಿದು ಬಂದು ಕೈಕಟ್ಟಿ ನಿಲ್ಲುತ್ತಾರೆ. ‘ತಂದೆನಮ್ಮನ್ನು ಹೆಸರೆತ್ತಿ ಕರೆಯೋದಿಲ್ಲ. ಬೆಲ್ ಮಾಡುತ್ತಾರೆ, ತಕ್ಷಣ ನಾವು ಹೋಗುತ್ತೇವೆಎನ್ನುತ್ತಾರೆ ದೀಪಕ್.

:ಜಿತೇಂದ್ರ ಕುಂದೇಶ್ವರ


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »