TOP STORIES:

ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿವರ ಬದುಕಿನ ಇನ್ನೊಂದು ಮುಖ


ಹೊರಗೆ‌  ಮಾತು ಜಾಸ್ತಿ.. ಹೆಂಡತಿ ಮಕ್ಕಳ ಜತೆ…?

ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ತುಂಬಾ ಮಾತನಾಡುತ್ತಾರೆ.’

ಕಾಂಗ್ರೆಸ್ ಪರ ಮತ್ತು ವಿರೋಧಿಗಳ ಬಾಯಲ್ಲಿ ಇದೇ ಮಾತು. ಆದರೆ ಮನೆಯಲ್ಲಿ ಇದಕ್ಕೆ ವ್ಯತಿರಿಕ್ತ. ಮಕ್ಕಳ ಬಳಿ ತಿಂಗಳುಗಟ್ಟಲೆಮಾತನಾಡದೆ ಇದ್ದದ್ದೂ ಉಂಟು!

ಅವರು ಮಗಳ ಜತೆ ಸರಿಯಾಗಿ ಮಾತನಾಡಿದ್ದು ಒಂದೇ ಬಾರಿಯಂತೆ. ಅದು ಮದುವೆಯ ಹಿಂದಿನ ದಿನ, ಭರ್ತಿ ಒಂದು ಗಂಟೆಮಾತನಾಡಿದ್ದಾರೆ. ಸೊಸೆಯಂದಿರ ಜತೆ ವರ್ಷಕ್ಕೆ ಒಮ್ಮೆ ಮಾತನಾಡಿದರೆ ಹೆಚ್ಚು. ಮಕ್ಕಳು ಬಿಡಿ ಮೊಮ್ಮಕ್ಕಳ ಜತೆಯೂಮಾತನಾಡುವುದಿಲ್ಲ.

ಖುದ್ದು ಅವರ ಕಿರಿ ಮಗ ದೀಪಕ್ ಪೂಜಾರಿಕನ್ನಡಪ್ರಭಜತೆ ತಂದೆಯ ಅಂತರಂಗ ತೆರೆದಿಟ್ಟ ಬಗೆ.

ತಂದೆ ಮನೆಯಲ್ಲಿ ಮಾತನಾಡುವುದೇ ಅಪರೂಪ. ಸೊಸೆಯಂದಿರ ಬಳಿ ಸರಾಸರಿ ವರ್ಷಕ್ಕೆ ಒಮ್ಮೆ ಮಾತನಾಡುತ್ತಾರೆ. ತಾಯಿ ಬಳಿಮನೆ, ಸಂಬಂಧಿಕರ ವಿಚಾರ ಮಾತನಾಡುತ್ತಾರೆ, ಆದರೆ ರಾಜಕೀಯ ಮಾತನಾಡುವುದೇ ಇಲ್ಲ‘.

ಪ್ರೀತಿ ಇಲ್ಲವೆಂದಲ್ಲ. ಬಾಯಿ ಬಿಟ್ಟು ಹೇಳುವುದಿಲ್ಲ. ಪ್ರೀತಿ, ವಿಶ್ವಾಸ ತಂದೆ ಮಾತಲ್ಲಿಲ್ಲ. ಆದರೆ, ಉದಾಹರಣೆ ಮೂಲಕತೋರ್ಪಡಿಸಿದ್ದಾರೆಎನ್ನುತ್ತಾರೆ  ದೀಪಕ್.       

ಎಲ್ಲ ಕುಟುಂಬದವರು ಒಟ್ಟಾಗಿ ಕಾರ್ ನಲ್ಲಿ ವಾರದ ಕೊನೆಯಲ್ಲಿ ಸಮಾರಂಭಗಳಿಗೆ ಹೋಗುವುದು ಮಾಮೂಲು.ಆದರೆ

ಪೂಜಾರಿ ಅವರು ತಮ್ಮ ಪತ್ನಿ, ಮಕ್ಕಳ ಜತೆ ಕಾರ್ ನಲ್ಲಿ ಮದುವೆಗೆ ಹೋಗಿದ್ದಾಗಲಿ,ಹೋಟೆಲ್ಗೆ ಹೋಗಿದ್ದಾಗಲಿ ನಾವುಜೀವಮಾನದಲ್ಲಿ ನೋಡಿಲ್ಲಎನ್ನುತ್ತಾರೆ ಪೂಜಾರಿಯವರ ನೆರೆ ಮನೆಯ ರಿಯಾಜ್.

ನನ್ನ ಎರಡನೇ ಅಣ್ಣ ತೀರಿ ಹೋದಾಗ ತಂದೆ ತುಂಬಾ ಖಿನ್ನರಾಗಿದ್ದರು. ಐದು ವರ್ಷಗಳ ಕಾಲ ದುಃಖದಿಂದ ಹೊರ ಬಂದಿರಲಿಲ್ಲ. ಮಕ್ಕಳ ಮೇಲೆ ಎಷ್ಟು ಪ್ರೀತಿ ಇದೆ ಎನ್ನುವುದು ನಮಗೆ ಆಗ ಸಂಪೂರ್ಣ ಗೊತ್ತಾಗಿತ್ತು ಎನ್ನುತ್ತಾರೆ ದೀಪಕ್.

ರಾಜಕೀಯ ಮನೆ ಒಳಗೆ ಬಿಡುವುದಿಲ್ಲ. ಕಾರ್ಯಕರ್ತರಿಗೂ ಸರ್ಕ್ಯುಟ್ ಹೌಸ್ಗೆ ಬರ ಹೇಳುತ್ತಾರೆ. ನಮ್ಮ ಹುದ್ದೆ, ಬಡ್ತಿ ಬಗ್ಗೆಕೇಳುವುದೇ ಇಲ್ಲ. ಇನ್ನು ಶಿಫಾರಸು ಕನಸಲ್ಲಿಯೂ ಅಸಾಧ್ಯ. ಬಹಳ ಹಿಂದೆ ನಮ್ಮ ಕಚೇರಿಯ ಸಹಾಯಕರ ಸಂಬಂಧಿಗೆ ಉದ್ಯೋಗಬೇಕಾಗಿತ್ತು. ತಂದೆ ಬಳಿ ಹೋದೆ, ಕೆಲಸ ಮಾಡಿಸಿದರು.

ಮತ್ತೊಮ್ಮೆ ಬೇರೊಬ್ಬರಿಗೆ ಉದ್ಯೋಗ ನೀಡುವಂತೆ ಕೇಳಿದಾಗ ಚೆನ್ನಾಗಿ ಬೈಯ್ದರು. ‘ನೀನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆಬಂದಿರಬಹುದು. ಆದರೆ ನಿನ್ನ ಬಳಿ ಕೆಲಸ ಮಾಡಿಸಿಕೊಳ್ಳುವವರು ದುರುಪಯೋಗ ಮಾಡಿಕೊಳ್ಳುತ್ತಾರೆ. ಇದೇ ಕೊನೆ, ಇನ್ನೊಂದುಬಾರಿ ಇಂಥ ವಿಚಾರದಲ್ಲಿ ಬರಬೇಡಎಂದು ಗದರಿದ್ದರು. ಇದು ಜೀವನದ ಪಾಠ ನನಗೆಎನ್ನುತ್ತಾರೆ ದೀಪಕ್

ಸೋನಿಯಾ ಚಪ್ಪಲಿ ಕಾದದ್ದು!

ಕುದ್ರೋಳಿ ದೇವಸ್ಥಾನದಲ್ಲಿ ಶತಮಾನೋತ್ಸವ ಸಂಭ್ರಮಕ್ಕೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯೇ ಬಂದಿದ್ದರು. ಸೋನಿಯಾ ಗಾಂಧಿ ಚಪ್ಪಲಿ ಮೇಲೆ ನಿಗಾ ಇರಿಸಲು ಅತ್ಯಂತ ವಿಶ್ವಾಸಿ ಒಬ್ಬನಿಗೆ ಸೂಚಿಸಿ ಎಂದು ಭದ್ರತಾ ಸಿಬ್ಬಂದಿ ಪೂಜಾರಿ ಬಳಿಹೇಳಿದರು.  ಪೂಜಾರಿ ಆಚೆ ಈಚೆ ನೋಡಿದರು, ಕಾರ್ಯಕರ್ತರ, ನಾಯಕರ ಬಳಿ ಹೇಳಲು ಆಗದು, ಅವರು ಒಪ್ಪಿದರೂ ಭದ್ರತೆಸಿಬ್ಬಂದಿಗೂ ನಂಬಿಕೆ ಬಾರದು. ಯಾರಾದರೂ ಚಪ್ಪಲಿ ಅಡಿ ಬಾಂಬ್ ಇಟ್ಟರೆ. ಹೀಗಾಗಿ ತಮ್ಮ ಮಗನನ್ನೇ ಕರೆದು ಚಪ್ಪಲಿಕಾಯುವಂತೆ ಹೇಳಿದರು.

ನಾನು ಚಪ್ಪಲಿಯನ್ನು ಅನೇಕ ಗಂಟೆಗಳ ಕಾಲ ಕಣ್ಣಿಟ್ಟು ಕಾದೆ. ಮರುದಿನ ನನ್ನನ್ನು ಕರೆದ ತಂದೆ, ಬೇಸರ ಆಯಿತೇಎಂದುಪ್ರಶ್ನಿಸಿದರು. ನಾನು ಸುಮ್ಮನಿದ್ದೆ. ಆದರೆ ನನಗೆ ಬೇಸರವಾಗಿರುವುದು ತಂದೆಗೆ ಅರ್ಥ ಆಗಿತ್ತು.

ನೋಡು ಕಾರ್ಯಕರ್ತರು, ಮುಖಂಡರಿಗೆ ಹೇಳಿದರೆ ಅವರಿಗೂ ಬೇಸರ ಆಗಬಹುದು. ತನ್ನ ಮಗ ಇರುವಾಗ ಕಾರ್ಯಕರ್ತರಿಗೆಹೇಳಿದರು ಎಂಬ ಅಪವಾದವೂ ಬರಬಹುದು. ನೀನಾದರೆ ನನ್ನ ಮಗ, ನಿನಗೆ ಪರಿಸ್ಥಿತಿ ವಿವರಿಸಬಲ್ಲೆಎಂದರು. ಇದು ನಮ್ಮ ತಂದೆವಿಶಾಲ ಮನಸ್ಸು ಎನ್ನುತ್ತಾರೆ ದೀಪಕ್.

ಮಕ್ಕಳ ಕರೆಯೋದು ಬೆಲ್ ಮೂಲಕ!

ಎಲ್ಲರೂ ಮಕ್ಕಳನ್ನು ಮುದ್ದಿನ ಹೆಸರು ಹೇಳಿ ಕರೆಯುತ್ತಾರೆ. ಆದರೆ ಪೂಜಾರಿ ತಮ್ಮ ಮಕ್ಕಳನ್ನು ಕರೆಯಲು ಕೈ ಬೆಲ್ಮಾಡಿಸಿಕೊಂಡಿದ್ದಾರೆ. ಒಂದು ಬೆಲ್ ಮಾಡಿದರೆ ಸಾಕು ಮಕ್ಕಳು ದಡದಡನೆ ಕೆಳಗೆ ಇಳಿದು ಬಂದು ಕೈಕಟ್ಟಿ ನಿಲ್ಲುತ್ತಾರೆ. ‘ತಂದೆನಮ್ಮನ್ನು ಹೆಸರೆತ್ತಿ ಕರೆಯೋದಿಲ್ಲ. ಬೆಲ್ ಮಾಡುತ್ತಾರೆ, ತಕ್ಷಣ ನಾವು ಹೋಗುತ್ತೇವೆಎನ್ನುತ್ತಾರೆ ದೀಪಕ್.

:ಜಿತೇಂದ್ರ ಕುಂದೇಶ್ವರ


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »