TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭೆಯಲ್ಲಿ ಉಡುಪಿ, .., ಕಾಸರಗೋಡು, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬಿಲ್ಲವಸಂಘ/ಸಂಸ್ಥೆ/ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಸದಸ್ಯರು  ಪಾಲ್ಗೊಂಡು, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳನ್ನುಮೆಟ್ಟಿನಿಂತು ಮುನ್ನಡೆಯಲು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖ ಅಂಶಗಳು :

1. ಬಿಲ್ಲವ ಸಮಾಜದ ಪ್ರಸ್ತುತ ಆರ್ಥಿಕ/ಸಾಮಾಜಿಕ/ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿಯಲು ಆಯಾ ಸಂಘದ ವ್ಯಾಪ್ತಿಯ ಗ್ರಾಮಮಟ್ಟದಲ್ಲಿ ಪ್ರತಿ ಕುಟುಂಬಗಳ ಸಮೀಕ್ಷೆ

2. ನಾರಾಯಣ ಗುರುಗಳ ತತ್ವದನುಸಾರ ಪ್ರತಿ ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಒತ್ತು ನೀಡಿ, ವಿಧ್ಯಾಭ್ಯಾಸಕ್ಕೆ ಸಹಕಾರ ಮತ್ತುಉದ್ಯೋಗಕ್ಕೆ ಪೂರಕವಾದ ತರಬೇತಿ ಒದಗಿಸುವುದು

3. ಬಿಲ್ಲವ ಸಮಾಜದ ಕ್ಷೇತ್ರ/ಮಂದಿರಗಳಲ್ಲಿ ಸಂಸ್ಕಾರಯುತ ಶ್ರೀ ನಾರಾಯಣ ಗುರು ತತ್ವಾದರ್ಶಗಳ ಧಾರ್ಮಿಕ ಶಿಕ್ಷಣ ಕೇಂದ್ರಆರಂಭಿಸುವುದು

4. ಸಂಘ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೂಕ್ತ ನೆರವು ದೊರಕುವಂತೆ ಸಹಕರಿಸುವುದು

5. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ನಿಗಮ ಮಂಡಳಿಗಳ ಸ್ಥಾಪನೆಗೆ ಮನವಿ/ಒತ್ತಾಯ

6. ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಆಸ್ಪತ್ರೆ ಮುಂತಾದ ಪ್ರಮುಖ ಸಾರ್ವಜನಿಕ ಕೇಂದ್ರಗಳಿಗೆ ಬ್ರಹ್ಮಶ್ರೀ ನಾರಾಯಣಗುರುಹಾಗೂ ಕೋಟಿ ಚೆನ್ನಯರ ಹೆಸರು ಇಡುವಂತೆ ಒತ್ತಾಯ

7. ಸಮಾಜ ಬಾಂಧವರಿಗೆ ಉಪಯುಕ್ತವಾದ ಹಿಂದುಳಿದ ವರ್ಗಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ನೆರವು ನೀಡಲುಒಂದು ತಂಡದ ರಚನೆ

8. ಬಿಲ್ಲವ ಸಮಾಜದ ಸಂಘ ಸಂಸ್ಥೆಗಳಲ್ಲಿ ಯಾವುದೇ ಪಕ್ಷಗಳು ರಾಜಕೀಯ ಪ್ರೇರಿತ ವಿಚಾರಗಳ ಮೂಲಕ ಸಮಾಜವನ್ನುಒಡೆಯುವ ಪ್ರಯತ್ನ ನಡೆಸದಂತೆ ಎಚ್ಚರ ವಹಿಸುವುದು

ಕೊನೆಯದಾಗಿ ಮಾತನಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರು, ಸಭೆಯಲ್ಲಿ ಸೇರಿದ ಜನಸ್ತೋಮ ಕಂಡು ಸಂತಸವ್ಯಕ್ತಪಡಿಸುತ್ತಾ ಇಂತಹ ಸಮಾಜದ ಅಭಿವೃದ್ಧಿಯ ಚಟುವಟಿಕೆ ಗಳಿಗೆ ಶ್ರೀ ಗೋಕರ್ಣನಾಥ ದೇವರ ಮತ್ತು ಬ್ರಹ್ಮ ಶ್ರೀ ನಾರಾಯಣಗುರುಗಳ ಕೃಪಾಶೀರ್ವಾದ ಮಾಡಿದ್ದಾರೆ  ಇದರಿಂದಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಪ್ರಮುಖರು ಶ್ರೀ ಕ್ಷೇತ್ರದಲ್ಲಿ ಸೇರಿದ್ದಾರೆಎಂದರು. ಸಮಾಜದ ಅಭ್ಯುದಯಕ್ಕೆ ಸಂಕಲ್ಪ ತೊಟ್ಟಿರುವ ಎಲ್ಲರಿಗೂ ಕುದ್ರೋಳಿ ಗೋಕರ್ಣನಾಥ ಸಹಿತ ಪರಿವಾರ ದೇವತೆಗಳಹಾಗೂ ಬ್ರಹಶ್ರೀ ನಾರಾಯಣ ಗುರುಗಳ ಅನುಗ್ರಹವಿರಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಫೋಟೋ ಹಾಗೂ ಬಿಲ್ಲವ ಸಮಾಜದ ಅಗ್ರಮಾನ್ಯ ನಾಯಕರಾದ ಜನಾರ್ದನಪೂಜಾರಿಯವರು ಮಾತ್ರ ಇದ್ದು ಉಳಿದ ಸಮಾಜದ ಪ್ರಮುಖರೆಲ್ಲ ವೇದಿಕೆಯ ಮುಂಭಾಗದಲ್ಲಿ ಕುಳಿತು ಸಮಾಜ ಒಗ್ಗಟ್ಟಿನಿಂದಮಾಡ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಒಬ್ಬೊಬ್ಬರಾಗಿ ಮುಂದೆ ಬಂದು ತಮ್ಮ ಸಲಹೆಗಳನ್ನು ನೀಡಿದರು. ಸಲಹೆಗಳ ಆಧಾರದಮೇಲೆ, ಕಾರ್ಯಚಟುವಟಿಕೆಯ ಚೌಕಟ್ಟನ್ನು ರಚಿಸಿ, ಮುಂದಿನ ದಿನಗಳಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ಸಭೆಗಳನ್ನುನಡೆಸುವುದೆಂದು ತೀರ್ಮಾನಿಸಲಾಯಿತು.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »