TOP STORIES:

FOLLOW US

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭೆಯಲ್ಲಿ ಉಡುಪಿ, .., ಕಾಸರಗೋಡು, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬಿಲ್ಲವಸಂಘ/ಸಂಸ್ಥೆ/ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಸದಸ್ಯರು  ಪಾಲ್ಗೊಂಡು, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳನ್ನುಮೆಟ್ಟಿನಿಂತು ಮುನ್ನಡೆಯಲು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖ ಅಂಶಗಳು :

1. ಬಿಲ್ಲವ ಸಮಾಜದ ಪ್ರಸ್ತುತ ಆರ್ಥಿಕ/ಸಾಮಾಜಿಕ/ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿಯಲು ಆಯಾ ಸಂಘದ ವ್ಯಾಪ್ತಿಯ ಗ್ರಾಮಮಟ್ಟದಲ್ಲಿ ಪ್ರತಿ ಕುಟುಂಬಗಳ ಸಮೀಕ್ಷೆ

2. ನಾರಾಯಣ ಗುರುಗಳ ತತ್ವದನುಸಾರ ಪ್ರತಿ ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಒತ್ತು ನೀಡಿ, ವಿಧ್ಯಾಭ್ಯಾಸಕ್ಕೆ ಸಹಕಾರ ಮತ್ತುಉದ್ಯೋಗಕ್ಕೆ ಪೂರಕವಾದ ತರಬೇತಿ ಒದಗಿಸುವುದು

3. ಬಿಲ್ಲವ ಸಮಾಜದ ಕ್ಷೇತ್ರ/ಮಂದಿರಗಳಲ್ಲಿ ಸಂಸ್ಕಾರಯುತ ಶ್ರೀ ನಾರಾಯಣ ಗುರು ತತ್ವಾದರ್ಶಗಳ ಧಾರ್ಮಿಕ ಶಿಕ್ಷಣ ಕೇಂದ್ರಆರಂಭಿಸುವುದು

4. ಸಂಘ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೂಕ್ತ ನೆರವು ದೊರಕುವಂತೆ ಸಹಕರಿಸುವುದು

5. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ನಿಗಮ ಮಂಡಳಿಗಳ ಸ್ಥಾಪನೆಗೆ ಮನವಿ/ಒತ್ತಾಯ

6. ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಆಸ್ಪತ್ರೆ ಮುಂತಾದ ಪ್ರಮುಖ ಸಾರ್ವಜನಿಕ ಕೇಂದ್ರಗಳಿಗೆ ಬ್ರಹ್ಮಶ್ರೀ ನಾರಾಯಣಗುರುಹಾಗೂ ಕೋಟಿ ಚೆನ್ನಯರ ಹೆಸರು ಇಡುವಂತೆ ಒತ್ತಾಯ

7. ಸಮಾಜ ಬಾಂಧವರಿಗೆ ಉಪಯುಕ್ತವಾದ ಹಿಂದುಳಿದ ವರ್ಗಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ನೆರವು ನೀಡಲುಒಂದು ತಂಡದ ರಚನೆ

8. ಬಿಲ್ಲವ ಸಮಾಜದ ಸಂಘ ಸಂಸ್ಥೆಗಳಲ್ಲಿ ಯಾವುದೇ ಪಕ್ಷಗಳು ರಾಜಕೀಯ ಪ್ರೇರಿತ ವಿಚಾರಗಳ ಮೂಲಕ ಸಮಾಜವನ್ನುಒಡೆಯುವ ಪ್ರಯತ್ನ ನಡೆಸದಂತೆ ಎಚ್ಚರ ವಹಿಸುವುದು

ಕೊನೆಯದಾಗಿ ಮಾತನಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರು, ಸಭೆಯಲ್ಲಿ ಸೇರಿದ ಜನಸ್ತೋಮ ಕಂಡು ಸಂತಸವ್ಯಕ್ತಪಡಿಸುತ್ತಾ ಇಂತಹ ಸಮಾಜದ ಅಭಿವೃದ್ಧಿಯ ಚಟುವಟಿಕೆ ಗಳಿಗೆ ಶ್ರೀ ಗೋಕರ್ಣನಾಥ ದೇವರ ಮತ್ತು ಬ್ರಹ್ಮ ಶ್ರೀ ನಾರಾಯಣಗುರುಗಳ ಕೃಪಾಶೀರ್ವಾದ ಮಾಡಿದ್ದಾರೆ  ಇದರಿಂದಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಪ್ರಮುಖರು ಶ್ರೀ ಕ್ಷೇತ್ರದಲ್ಲಿ ಸೇರಿದ್ದಾರೆಎಂದರು. ಸಮಾಜದ ಅಭ್ಯುದಯಕ್ಕೆ ಸಂಕಲ್ಪ ತೊಟ್ಟಿರುವ ಎಲ್ಲರಿಗೂ ಕುದ್ರೋಳಿ ಗೋಕರ್ಣನಾಥ ಸಹಿತ ಪರಿವಾರ ದೇವತೆಗಳಹಾಗೂ ಬ್ರಹಶ್ರೀ ನಾರಾಯಣ ಗುರುಗಳ ಅನುಗ್ರಹವಿರಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಫೋಟೋ ಹಾಗೂ ಬಿಲ್ಲವ ಸಮಾಜದ ಅಗ್ರಮಾನ್ಯ ನಾಯಕರಾದ ಜನಾರ್ದನಪೂಜಾರಿಯವರು ಮಾತ್ರ ಇದ್ದು ಉಳಿದ ಸಮಾಜದ ಪ್ರಮುಖರೆಲ್ಲ ವೇದಿಕೆಯ ಮುಂಭಾಗದಲ್ಲಿ ಕುಳಿತು ಸಮಾಜ ಒಗ್ಗಟ್ಟಿನಿಂದಮಾಡ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಒಬ್ಬೊಬ್ಬರಾಗಿ ಮುಂದೆ ಬಂದು ತಮ್ಮ ಸಲಹೆಗಳನ್ನು ನೀಡಿದರು. ಸಲಹೆಗಳ ಆಧಾರದಮೇಲೆ, ಕಾರ್ಯಚಟುವಟಿಕೆಯ ಚೌಕಟ್ಟನ್ನು ರಚಿಸಿ, ಮುಂದಿನ ದಿನಗಳಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ಸಭೆಗಳನ್ನುನಡೆಸುವುದೆಂದು ತೀರ್ಮಾನಿಸಲಾಯಿತು.


Share:

More Posts

Category

Send Us A Message

Related Posts

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ


Share       ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ ಮುಂಬೈ ವಿಶ್ವವಿದ್ಯಾಲಯದಲ್ಲಿ ಪಿ ಎಚ್. ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸುವರ್ಣರ ಕುರಿತು ಶೋಧ ಪ್ರಬಂಧವನ್ನು


Read More »

ಬೆಳ್ತಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರಿಡಲು ಮನವಿ


Share       ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು ಹಾಗೂ


Read More »

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ


Share       ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು


Read More »

ಬಿಲ್ಲವ ಸಮಾಜದ ಭರವಸೆಯ ಸೂರ್ಯ ಜನ್ಮದಿನದ ಸಲುವಾಗಿ ನುಡಿ ಬರಹ


Share       ಎರಡು ವರ್ಷಗಳ ಹಿಂದೆ ಜಯ ಸುವರ್ಣರ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಸಲುವಾಗಿ ಅವರ ಮಗ ಸೂರ್ಯಕಾಂತ್ ಸುವರ್ಣರನ್ನು ಸಂದರ್ಶನ ಮಾಡಲು ಗೊರೆಗಾವ್‍ನಲ್ಲಿರುವ ಜಯ ಸುವರ್ಣರ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿದ್ದೆ. ಜಯ ಸುವರ್ಣರನ್ನೇ


Read More »

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ


Share       ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ


Read More »

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು’: ಬಲು ವಿಶಿಷ್ಠ ಮಂಡೆಕೋಲಿನ ಈ ಅಡ್ಡಣಪೆಟ್ಟು ಆಚರಣೆ..!


Share       ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ.


Read More »