TOP STORIES:

FOLLOW US

ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ


ಕೆಲ ದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ಬರೆಯಬೇಕೆನಿಸಿತು.ದಿನಾಂಕ 26.09.2021 ನೇ ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಮತ್ತು ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ನಡೆದ ಅಮರ್ ಬೊಳ್ಳಿಲು ವಿಚಾರ ಮಂಡನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ವಿಚಾರಗಳನ್ನು ತಿಳಿಯಬೇಕು ಎಂಬ ಆಸಕ್ತಿಯಿಂದ ಭಾಗವಹಿಸಿದೆ.ಸಂಘಟಕರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಪ್ರಾರಂಭಿಸಿದರು.ಚುಟುಕಾದ ಉದ್ಘಾಟನಾ ಕಾರ್ಯಕ್ರಮ ಮತ್ತು ನಮ್ಮ ಸಮುದಾಯದ ಕಳಕಳಿ ಮತ್ತು ಮನ ಮುಟ್ಟುವ ಮಾತುಗಳು ಮಾಜಿ ಶಾಸಕರಾದ ಕೆ ವಸಂತ ಬಂಗೇರ ರವರ ಉದ್ಘಾಟನಾ ಭಾಷಣದಲ್ಲಿ ಇತ್ತು ನಂತರ ನೇರವಾಗಿ ವಿಚಾರ ಮಂಡನೆ ಮತ್ತು ಸಂವಾದ ಕಡೇ ನಮ್ಮ ಗಮನ, ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ , ಬೈದ್ಯ ಶ್ರೀ ಉಡುಪಿಯ ಅಧ್ಯಕ್ಷರಾದ ಶ್ರೀ ದಾಮೋದರ ಕಲ್ಮಾಡಿ, ಸಾಹಿತಿಗಳಾದ ಚೆಲುವರಾಜ್ ಪೆರಂಪಳ್ಳಿ, ರಂಗಕರ್ಮಿ, ಸಾಹಿತಿ, ಪತ್ರಕರ್ತರಾದ ಪರಮಾನಂದ ಸಾಲ್ಯಾನ್ , ಕಾರ್ಯಕ್ರಮದ ಸಮನ್ವಯಕಾರು ರಾಣಿ ಅಬ್ಬಕ್ಕ ಜಾನಪದ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ಡಾ.ತುಕರಾಮ ಪೂಜಾರಿ.

ಕಾರ್ಯಕ್ರಮದಲ್ಲಿ ಮಂಡನೆ ಮತ್ತು ಸಂವಾದ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಈ ರೀತಿಯ ಸಂವಾದ ಕಾರ್ಯಕ್ರಮದಲ್ಲಿ ನಾನೂ ಒಬ್ಬ ಪ್ರೇಕ್ಷಕನಾಗಿ ಭಾಗವಹಿಸಿದ್ದೆ. ಆದರೆ ಅದು ಗೊಂದಲದ ಗೂಡಾಯಿತು ನನ್ನ ಮನಸ್ಸಿಗೆ ಅತೀವ ನೋವು ಕೂಡ ಆಯಿತು.ಈ ಕಾರ್ಯಕ್ರಮದಲ್ಲಿ ನನ್ನ ಮನಸ್ಸಿನ ಮೂಲೆಯಲ್ಲೊಂದು ಆಶಾಭಾವನೆ ಚಿಗುರೊಡೆಯಿತು.ಕೋಟಿ ಚೆನ್ನಯ್ಯ ರ ಕೆಲವೊಂದು ವಿಚಾರದಲ್ಲಿ ವ್ಯತ್ಯಾಸಗಳು ಇದ್ದ ಎರಡು ತಂಡಗಳ ಮುಖ್ಯಸ್ಥರು ಉಪಸ್ಥಿತರಿದ್ದದ್ದು ನನಗೆ ಖುಷಿ ನೀಡಿತು. ಅಂತಿಮವಾಗಿ ತಿಳಿದ ವಿಚಾರ ಇಷ್ಟೇ ವೀರ ಪುರುಷರ ವಿಚಾರದಲ್ಲಿ ಜನಸಾಮಾನ್ಯರಿಗೆ (ಭಕ್ತರಿಗೆ ) ಯಾವುದೇ ಗೊಂದಲ ಇಲ್ಲ, ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ ,ನಮ್ಮ ಸಮಾಜ ಈ ವಿಚಾರದ ದ್ವಂದ್ವದಿಂದ ಸಮಾಜದ ಒಗ್ಗಟ್ಟಿಗೆ ತುಂಬಾ ನಷ್ಟವಾಗಿದೆ.ಇನ್ನೂ ಮುಂದೆ ಈ ವಿಚಾರದಲ್ಲಿ ಗೊಂದಲವನ್ನು ಸೃಷ್ಟಿ ಮಾಡದೇ ನಮ್ಮ ಸಮಾಜ ಒಗ್ಗಟ್ಟಾಗಿ ಇರೋಣ, ಎಂಬ ಸಂದೇಶವು ಎರಡು ತಂಡಗಳಿಂದ ವ್ಯಕ್ತವಾಯಿತು.

ಎಸ್ ಆರ್ ಪ್ರವೀಣ್ 


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »