TOP STORIES:

ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ


ಕೆಲ ದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ಬರೆಯಬೇಕೆನಿಸಿತು.ದಿನಾಂಕ 26.09.2021 ನೇ ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಮತ್ತು ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ನಡೆದ ಅಮರ್ ಬೊಳ್ಳಿಲು ವಿಚಾರ ಮಂಡನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ವಿಚಾರಗಳನ್ನು ತಿಳಿಯಬೇಕು ಎಂಬ ಆಸಕ್ತಿಯಿಂದ ಭಾಗವಹಿಸಿದೆ.ಸಂಘಟಕರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಪ್ರಾರಂಭಿಸಿದರು.ಚುಟುಕಾದ ಉದ್ಘಾಟನಾ ಕಾರ್ಯಕ್ರಮ ಮತ್ತು ನಮ್ಮ ಸಮುದಾಯದ ಕಳಕಳಿ ಮತ್ತು ಮನ ಮುಟ್ಟುವ ಮಾತುಗಳು ಮಾಜಿ ಶಾಸಕರಾದ ಕೆ ವಸಂತ ಬಂಗೇರ ರವರ ಉದ್ಘಾಟನಾ ಭಾಷಣದಲ್ಲಿ ಇತ್ತು ನಂತರ ನೇರವಾಗಿ ವಿಚಾರ ಮಂಡನೆ ಮತ್ತು ಸಂವಾದ ಕಡೇ ನಮ್ಮ ಗಮನ, ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ , ಬೈದ್ಯ ಶ್ರೀ ಉಡುಪಿಯ ಅಧ್ಯಕ್ಷರಾದ ಶ್ರೀ ದಾಮೋದರ ಕಲ್ಮಾಡಿ, ಸಾಹಿತಿಗಳಾದ ಚೆಲುವರಾಜ್ ಪೆರಂಪಳ್ಳಿ, ರಂಗಕರ್ಮಿ, ಸಾಹಿತಿ, ಪತ್ರಕರ್ತರಾದ ಪರಮಾನಂದ ಸಾಲ್ಯಾನ್ , ಕಾರ್ಯಕ್ರಮದ ಸಮನ್ವಯಕಾರು ರಾಣಿ ಅಬ್ಬಕ್ಕ ಜಾನಪದ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ಡಾ.ತುಕರಾಮ ಪೂಜಾರಿ.

ಕಾರ್ಯಕ್ರಮದಲ್ಲಿ ಮಂಡನೆ ಮತ್ತು ಸಂವಾದ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಈ ರೀತಿಯ ಸಂವಾದ ಕಾರ್ಯಕ್ರಮದಲ್ಲಿ ನಾನೂ ಒಬ್ಬ ಪ್ರೇಕ್ಷಕನಾಗಿ ಭಾಗವಹಿಸಿದ್ದೆ. ಆದರೆ ಅದು ಗೊಂದಲದ ಗೂಡಾಯಿತು ನನ್ನ ಮನಸ್ಸಿಗೆ ಅತೀವ ನೋವು ಕೂಡ ಆಯಿತು.ಈ ಕಾರ್ಯಕ್ರಮದಲ್ಲಿ ನನ್ನ ಮನಸ್ಸಿನ ಮೂಲೆಯಲ್ಲೊಂದು ಆಶಾಭಾವನೆ ಚಿಗುರೊಡೆಯಿತು.ಕೋಟಿ ಚೆನ್ನಯ್ಯ ರ ಕೆಲವೊಂದು ವಿಚಾರದಲ್ಲಿ ವ್ಯತ್ಯಾಸಗಳು ಇದ್ದ ಎರಡು ತಂಡಗಳ ಮುಖ್ಯಸ್ಥರು ಉಪಸ್ಥಿತರಿದ್ದದ್ದು ನನಗೆ ಖುಷಿ ನೀಡಿತು. ಅಂತಿಮವಾಗಿ ತಿಳಿದ ವಿಚಾರ ಇಷ್ಟೇ ವೀರ ಪುರುಷರ ವಿಚಾರದಲ್ಲಿ ಜನಸಾಮಾನ್ಯರಿಗೆ (ಭಕ್ತರಿಗೆ ) ಯಾವುದೇ ಗೊಂದಲ ಇಲ್ಲ, ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ ,ನಮ್ಮ ಸಮಾಜ ಈ ವಿಚಾರದ ದ್ವಂದ್ವದಿಂದ ಸಮಾಜದ ಒಗ್ಗಟ್ಟಿಗೆ ತುಂಬಾ ನಷ್ಟವಾಗಿದೆ.ಇನ್ನೂ ಮುಂದೆ ಈ ವಿಚಾರದಲ್ಲಿ ಗೊಂದಲವನ್ನು ಸೃಷ್ಟಿ ಮಾಡದೇ ನಮ್ಮ ಸಮಾಜ ಒಗ್ಗಟ್ಟಾಗಿ ಇರೋಣ, ಎಂಬ ಸಂದೇಶವು ಎರಡು ತಂಡಗಳಿಂದ ವ್ಯಕ್ತವಾಯಿತು.

ಎಸ್ ಆರ್ ಪ್ರವೀಣ್ 


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »