TOP STORIES:

ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ


ಕೆಲ ದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ಬರೆಯಬೇಕೆನಿಸಿತು.ದಿನಾಂಕ 26.09.2021 ನೇ ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಮತ್ತು ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ನಡೆದ ಅಮರ್ ಬೊಳ್ಳಿಲು ವಿಚಾರ ಮಂಡನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ವಿಚಾರಗಳನ್ನು ತಿಳಿಯಬೇಕು ಎಂಬ ಆಸಕ್ತಿಯಿಂದ ಭಾಗವಹಿಸಿದೆ.ಸಂಘಟಕರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಪ್ರಾರಂಭಿಸಿದರು.ಚುಟುಕಾದ ಉದ್ಘಾಟನಾ ಕಾರ್ಯಕ್ರಮ ಮತ್ತು ನಮ್ಮ ಸಮುದಾಯದ ಕಳಕಳಿ ಮತ್ತು ಮನ ಮುಟ್ಟುವ ಮಾತುಗಳು ಮಾಜಿ ಶಾಸಕರಾದ ಕೆ ವಸಂತ ಬಂಗೇರ ರವರ ಉದ್ಘಾಟನಾ ಭಾಷಣದಲ್ಲಿ ಇತ್ತು ನಂತರ ನೇರವಾಗಿ ವಿಚಾರ ಮಂಡನೆ ಮತ್ತು ಸಂವಾದ ಕಡೇ ನಮ್ಮ ಗಮನ, ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ , ಬೈದ್ಯ ಶ್ರೀ ಉಡುಪಿಯ ಅಧ್ಯಕ್ಷರಾದ ಶ್ರೀ ದಾಮೋದರ ಕಲ್ಮಾಡಿ, ಸಾಹಿತಿಗಳಾದ ಚೆಲುವರಾಜ್ ಪೆರಂಪಳ್ಳಿ, ರಂಗಕರ್ಮಿ, ಸಾಹಿತಿ, ಪತ್ರಕರ್ತರಾದ ಪರಮಾನಂದ ಸಾಲ್ಯಾನ್ , ಕಾರ್ಯಕ್ರಮದ ಸಮನ್ವಯಕಾರು ರಾಣಿ ಅಬ್ಬಕ್ಕ ಜಾನಪದ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ಡಾ.ತುಕರಾಮ ಪೂಜಾರಿ.

ಕಾರ್ಯಕ್ರಮದಲ್ಲಿ ಮಂಡನೆ ಮತ್ತು ಸಂವಾದ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಈ ರೀತಿಯ ಸಂವಾದ ಕಾರ್ಯಕ್ರಮದಲ್ಲಿ ನಾನೂ ಒಬ್ಬ ಪ್ರೇಕ್ಷಕನಾಗಿ ಭಾಗವಹಿಸಿದ್ದೆ. ಆದರೆ ಅದು ಗೊಂದಲದ ಗೂಡಾಯಿತು ನನ್ನ ಮನಸ್ಸಿಗೆ ಅತೀವ ನೋವು ಕೂಡ ಆಯಿತು.ಈ ಕಾರ್ಯಕ್ರಮದಲ್ಲಿ ನನ್ನ ಮನಸ್ಸಿನ ಮೂಲೆಯಲ್ಲೊಂದು ಆಶಾಭಾವನೆ ಚಿಗುರೊಡೆಯಿತು.ಕೋಟಿ ಚೆನ್ನಯ್ಯ ರ ಕೆಲವೊಂದು ವಿಚಾರದಲ್ಲಿ ವ್ಯತ್ಯಾಸಗಳು ಇದ್ದ ಎರಡು ತಂಡಗಳ ಮುಖ್ಯಸ್ಥರು ಉಪಸ್ಥಿತರಿದ್ದದ್ದು ನನಗೆ ಖುಷಿ ನೀಡಿತು. ಅಂತಿಮವಾಗಿ ತಿಳಿದ ವಿಚಾರ ಇಷ್ಟೇ ವೀರ ಪುರುಷರ ವಿಚಾರದಲ್ಲಿ ಜನಸಾಮಾನ್ಯರಿಗೆ (ಭಕ್ತರಿಗೆ ) ಯಾವುದೇ ಗೊಂದಲ ಇಲ್ಲ, ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ ,ನಮ್ಮ ಸಮಾಜ ಈ ವಿಚಾರದ ದ್ವಂದ್ವದಿಂದ ಸಮಾಜದ ಒಗ್ಗಟ್ಟಿಗೆ ತುಂಬಾ ನಷ್ಟವಾಗಿದೆ.ಇನ್ನೂ ಮುಂದೆ ಈ ವಿಚಾರದಲ್ಲಿ ಗೊಂದಲವನ್ನು ಸೃಷ್ಟಿ ಮಾಡದೇ ನಮ್ಮ ಸಮಾಜ ಒಗ್ಗಟ್ಟಾಗಿ ಇರೋಣ, ಎಂಬ ಸಂದೇಶವು ಎರಡು ತಂಡಗಳಿಂದ ವ್ಯಕ್ತವಾಯಿತು.

ಎಸ್ ಆರ್ ಪ್ರವೀಣ್ 


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »