TOP STORIES:

FOLLOW US

ಕೋವಿಡ್ ಗುಣವಾಯ್ತಾ? ಹಾರ್ಟ್ ಚೆಕಪ್ ಮಾಡಿಸದಿದ್ರೆ ಅಪಾಯ ಇನ್ನೂ ಇದೆ!


  • ಬೆಂಗಳೂರು : ಕೋವಿಡ್ ಗುಣಮುಖರಾದ ನಂತರ ಅಬ್ಬಾ ಅಂತೂ ಬದುಕಿಕೊಂಡೆ ಅಂತ ನಿಟ್ಟುಸಿರು ಬಿಡುತ್ತಿರುವ ಅನೇಕರು ನಂತರವೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಲೇಬೇಕು. ಅದರಲ್ಲೂ ಹೃದಯದ ಪರೀಕ್ಷೆಯನ್ನಂತೂ ಖಂಡಿತಾ
    ತಪ್ಪಿಸಬಾರದು ಎನ್ನುತ್ತಾರೆ ವೈದ್ಯರು.
  • ಕೋವಿಡ್ ನಿಂದ ಬಳಲಿ ನಂತರ ಸಂಪೂರ್ಣವಾಗಿ ಗುಣಮುಖರಾದ ಅನೇಕರಲ್ಲಿ ಹೃದಯ ಮತ್ತು ರಕ್ತನಾಳ ಸಂಬಂಧಿ ಸಮಸ್ಯೆಗಳು ಕಂಡುಬಂದಿವೆ. ಅನೇಕ ಪ್ರಕರಣಗಳಲ್ಲಂತೂ ಬಹಳ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಉದಾಹರಣೆಗಳೂ ಸಾಕಷ್ಟಿವೆ. ಹಾಗಾಗಿ ತಪ್ಪದೇ ಕನಿಷ್ಟ 3 ತಿಂಗಳಿಗೆ ಒಂದು ಸಲವಾದರೂ ಹೃದಯದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎನ್ನುತ್ತಾರೆ ವೈದ್ಯರು. ಇದರಿಂದ ದಿಢೀರನೆ ಹೃದಯಾಘಾತವಾಗುವುದನ್ನು ತಪ್ಪಿಸಬಹುದು.
  • ಕೋವಿಡ್ ನಂತರದ ಹೃದ್ರೋಗಗಳು ಸಣ್ಣ ವಯಸ್ಸಿನವರನ್ನು ಕಾಡುತ್ತಿರುವುದು ಆತಂಕಕಾರಿ ವಿಚಾರ. ಅದರಲ್ಲೂ 50 ವರ್ಷದೊಳಗಿನವರಾದರೆ ಹೃದ್ರೋಗ ಇರಲಿ, ಇಲ್ಲದಿರಲಿ ಒಮ್ಮೆ ತಪಾಸಣೆ ಮಾಡಿಸಿಕೊಳ್ಳುವ ಅಭ್ಯಾಸ ರೂಢಿಸಿಕೊಳ್ಳಬೇಕು ಎನ್ನುತ್ತಾರೆ
ಫೋರ್ಟಿಸ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ ಆರ್ ಕೇಶವ.
ಕೋವಿಡ್ ಗೂ ಹೃದಯಾಘಾತಕ್ಕೂ ಏನು ಸಂಬಂಧ?

ಇತ್ತೀಚೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಕೋವಿಡ್ನಿಂದ ಗುಣಮುಖರಾದ 3-4 ವಾರಗಳ ಬಳಿಕ ಹೃದಯಾಘಾತ ಹೆಚ್ಚಳವಾಗುತ್ತಿರುವ ಬಗ್ಗೆ ತಿಳಿದುಬಂದಿದೆ. ಅದರಲ್ಲೂ ಎರಡನೇ ಅಲೆಯಲ್ಲಿ ಸಣ್ಣ ವಯಸ್ಸಿನವರನ್ನೇ ಹೆಚ್ಚಾಗಿ ಕೋವಿಡ್ ಬಾಧಿಸಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರು ನಂತರವೂ ದೀರ್ಘಕಾಲದವರಗೆ ಸಂಪೂರ್ಣ ನಿಶ್ಶಕ್ತಿ ಹೊಂದಿರುತ್ತಾರೆ. ಇಂಥ ಸಂದರ್ಭದಲ್ಲಿ ಹೃದಯಾಘಾತ ಸಂಭವ ಹೆಚ್ಚಿರುತ್ತದೆ ಎನ್ನುತ್ತಾರೆ ವೈದ್ಯರು.
ಎಚ್ಚರಿಕೆ ವಹಿಸುವುದು ಹೇಗೆ?
ಒಂದು ಸಲ ಕೋವಿಡ್ ಬಂದರೆ ದೇಹ ಸಹಜವಾಗಿಯೇ ಸುಸ್ತಾಗಿರುತ್ತದೆ. ಅದು ರೋಗಲಕ್ಷಣ ಇಲ್ಲದಿರುವ ಏಸಿಂಪ್ಟಮ್ಯಾಟಿಕ್ ಸ್ಥಿತಿ ಇರಲಿ ಅಥವಾ ತೀವ್ರವಾದ ಸೋಂಕು ತಗುಲಿ ಆಸ್ಪತ್ರೆಯಲ್ಲಿ ವಾರಗಟ್ಟಲೆ ಇರಬೇಕಾಗಿ ಬಂದ ಗಂಭೀರ ಪ್ರಕರಣವಿರಲಿ ದೇಹವನ್ನು ಕೋವಿಡ್ ಹೈರಾಣು ಮಾಡಿ ಹಾಕಿರುವುದಂತೂ ಸತ್ಯ. ಇದೇ ಗೊಂದಲದಲ್ಲಿ ಇರುವ ಜನ ಹೆಚ್ಚಾಗಿ ಹೃದಯದ ಆರೋಗ್ಯದ ಬಗ್ಗೆ ಗಮನ ಹರಿಸುವುದಿಲ್ಲ. ಆದರೆ ಕೋವಿಡ್ನಿಂದ ಗುಣವಾದ ಬಳಿಕ ದೇಹದಲ್ಲಿ ರೋಗನಿರೋಧಕ ಶಕ್ತಿ ಕುಗ್ಗಿರುತ್ತದೆ. ಹೀಗಾಗಿ, ದೇಹಕ್ಕೆ ಅಗತ್ಯ ಪ್ರೋಟಿನ್ಯುಕ್ತ ಆಹಾರ ನೀಡುವುದು, ವ್ಯಾಯಾಮ, ಯೋಗ, ಧ್ಯಾನ ಮಾಡುವುದು, ಧೂಮಪಾನ, ಮದ್ಯಪಾನ ತ್ಯಜಿಸುವುದು, ಜಂಕ್ ಫುಡ್ ಸೇವನೆ ನಿಯಂತ್ರಣ ಸೇರಿದಂತೆ ಇತರೆ ಅನಾರೋಗ್ಯಕರ ಹವ್ಯಾಸವನ್ನು ತ್ಯಜಿಸಿ, ಹೃದಯದ ಆರೈಕೆಗೆ ಒತ್ತು ನೀಡಬೇಕು. ಅಲ್ಲದೆ, ಕೆಲಸದ ಒತ್ತಡ ಕೂಡ ಹೃದಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಹೀಗಾಗಿ ಕನಿಷ್ಠ 3 ತಿಂಗಳು ಹೃದಯದ ಆರೋಗ್ಯದತ್ತ ಎಚ್ಚರಿಕೆಯಿಂದಿರುವುದು ಒಳ್ಳೆಯದು ಎನ್ನುತ್ತಾರೆ ವೈದ್ಯರು.
ಸಣ್ಣ ವಯಸ್ಸಿನವರಲ್ಲಿ ಹೃದಯ ಸಮಸ್ಯೆ ಹೆಚ್ಚಳ
ಮೊದಲೆಲ್ಲಾ ನಿವೃತ್ತಿ ಹೊಂದಿದವರಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡುಬರುತ್ತಿತ್ತು. ಆದ್ರೆ ಇತ್ತೀಚೆಗೆ ಯುವಕರಲ್ಲೇ ಹೆಚ್ಚೆಚ್ಚು ಹೃದಯಾಘಾತ ಮತ್ತು ಅದಕ್ಕೆ ಸಂಬಂಧಿಸಿದ ನಾನಾ ಸಮಸ್ಯೆಗಳು ಕಂಡುಬರುತ್ತಿವೆ. ಚಿದರಲ್ಲು 20ರಿಂದ 45 ವರ್ಷದೊಳಗಿನವರಲ್ಲಿ ಈ ಪ್ರಕರಣ ಮತ್ತಷ್ಟು ಹೆಚ್ಚು ಎನ್ನಲಾಗಿದೆ. 2017ರಲ್ಲಿ ನಡೆದ ಅಧ್ಯಯನ ಒಂದರ ಪ್ರಕಾರ ವರ್ಷಕ್ಕೆ 4 ಲಕ್ಷ ಮಧ್ಯವಯಸ್ಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರಂತೆ.
ಲಸಿಕೆಯಿಂದ ಹೃದಯಕ್ಕೂ ಪ್ರಯೋಜನ ಇದೆಯಾ?
ಕೋವಿಡ್ ಬರದಂತೆ ಅಥವಾ ಬಂದರೂ ಹೆಚ್ಚು ಹಾನಿ ಮಾಡದಂತೆ ತಡೆಯುವಲ್ಲಿ ಲಸಿಕೆ ಪರಿಣಾಮಕಾರಿಯಾಗಿದೆ ಎನ್ನುವುದು ಈಗಾಗಲೇ ತಿಳಿದಿರುವ ವಿಚಾರ. ಹಾಗಾಗಿ ದೇಹದ ಮೇಲಾಗುವ ಅಪಾಯವನ್ನು ಕಡಿಮೆ ಮಾಡಿದರೆ ಸಹಜವಾಗಿಯೇ ಹೃದಯದ ಆರೋಗ್ಯವನ್ನೂ ಕಾಪಾಡುವ ಅವಕಾಶ ಸಿಕ್ಕಂತಾಗುತ್ತದೆ. ಹಾಗಾಗಿ ಲಸಿಕೆ ಪಡೆಯುವುದು ಬಹಳ ಅವಶ್ಯಕ ಎನ್ನುತ್ತಾರೆ ವೈದ್ಯರು. ಕೇವಲ ಕೋವಿಡ್ ನಿಂದ ಕಾಪಾಡುವುದು ಮಾತ್ರವಲ್ಲ, ಲಸಿಕೆ ಹೃದಯದ ಮೇಲಾಗುವ ವಿಪರೀತ ಪರಿಣಾಮಗಳನ್ನೂ ಆ ಮೂಕಲ ತಡೆಯಲು ಸಹಕಾರಿ ಎನ್ನಲಾಗಿದೆ. ಈಗಾಗಲೇ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ಎಲ್ಲರೂ ಸಾಕಷ್ಟು ಏಟು ತಿಂದಿದ್ದೇವೆ. ಈಗಲಾದರೂ ಎಚ್ಚೆತ್ತುಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಆರೋಗ್ಯವಂತ ಜೀವನಶೈಲಿ ರೂಢಿಸಿಕೊಂಡರೆ ಮೂರನೇ ಅಲೆಯ ಅಪಾಯ ತಪ್ಪಿಸಬಹುದು ಎನ್ನುವುದು ತಜ್ಞರ ಅಭಿಮತ.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »