TOP STORIES:

ಕೋವಿಡ್ ಗುಣವಾಯ್ತಾ? ಹಾರ್ಟ್ ಚೆಕಪ್ ಮಾಡಿಸದಿದ್ರೆ ಅಪಾಯ ಇನ್ನೂ ಇದೆ!


  • ಬೆಂಗಳೂರು : ಕೋವಿಡ್ ಗುಣಮುಖರಾದ ನಂತರ ಅಬ್ಬಾ ಅಂತೂ ಬದುಕಿಕೊಂಡೆ ಅಂತ ನಿಟ್ಟುಸಿರು ಬಿಡುತ್ತಿರುವ ಅನೇಕರು ನಂತರವೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಲೇಬೇಕು. ಅದರಲ್ಲೂ ಹೃದಯದ ಪರೀಕ್ಷೆಯನ್ನಂತೂ ಖಂಡಿತಾ
    ತಪ್ಪಿಸಬಾರದು ಎನ್ನುತ್ತಾರೆ ವೈದ್ಯರು.
  • ಕೋವಿಡ್ ನಿಂದ ಬಳಲಿ ನಂತರ ಸಂಪೂರ್ಣವಾಗಿ ಗುಣಮುಖರಾದ ಅನೇಕರಲ್ಲಿ ಹೃದಯ ಮತ್ತು ರಕ್ತನಾಳ ಸಂಬಂಧಿ ಸಮಸ್ಯೆಗಳು ಕಂಡುಬಂದಿವೆ. ಅನೇಕ ಪ್ರಕರಣಗಳಲ್ಲಂತೂ ಬಹಳ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಉದಾಹರಣೆಗಳೂ ಸಾಕಷ್ಟಿವೆ. ಹಾಗಾಗಿ ತಪ್ಪದೇ ಕನಿಷ್ಟ 3 ತಿಂಗಳಿಗೆ ಒಂದು ಸಲವಾದರೂ ಹೃದಯದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎನ್ನುತ್ತಾರೆ ವೈದ್ಯರು. ಇದರಿಂದ ದಿಢೀರನೆ ಹೃದಯಾಘಾತವಾಗುವುದನ್ನು ತಪ್ಪಿಸಬಹುದು.
  • ಕೋವಿಡ್ ನಂತರದ ಹೃದ್ರೋಗಗಳು ಸಣ್ಣ ವಯಸ್ಸಿನವರನ್ನು ಕಾಡುತ್ತಿರುವುದು ಆತಂಕಕಾರಿ ವಿಚಾರ. ಅದರಲ್ಲೂ 50 ವರ್ಷದೊಳಗಿನವರಾದರೆ ಹೃದ್ರೋಗ ಇರಲಿ, ಇಲ್ಲದಿರಲಿ ಒಮ್ಮೆ ತಪಾಸಣೆ ಮಾಡಿಸಿಕೊಳ್ಳುವ ಅಭ್ಯಾಸ ರೂಢಿಸಿಕೊಳ್ಳಬೇಕು ಎನ್ನುತ್ತಾರೆ
ಫೋರ್ಟಿಸ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ ಆರ್ ಕೇಶವ.
ಕೋವಿಡ್ ಗೂ ಹೃದಯಾಘಾತಕ್ಕೂ ಏನು ಸಂಬಂಧ?

ಇತ್ತೀಚೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಕೋವಿಡ್ನಿಂದ ಗುಣಮುಖರಾದ 3-4 ವಾರಗಳ ಬಳಿಕ ಹೃದಯಾಘಾತ ಹೆಚ್ಚಳವಾಗುತ್ತಿರುವ ಬಗ್ಗೆ ತಿಳಿದುಬಂದಿದೆ. ಅದರಲ್ಲೂ ಎರಡನೇ ಅಲೆಯಲ್ಲಿ ಸಣ್ಣ ವಯಸ್ಸಿನವರನ್ನೇ ಹೆಚ್ಚಾಗಿ ಕೋವಿಡ್ ಬಾಧಿಸಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರು ನಂತರವೂ ದೀರ್ಘಕಾಲದವರಗೆ ಸಂಪೂರ್ಣ ನಿಶ್ಶಕ್ತಿ ಹೊಂದಿರುತ್ತಾರೆ. ಇಂಥ ಸಂದರ್ಭದಲ್ಲಿ ಹೃದಯಾಘಾತ ಸಂಭವ ಹೆಚ್ಚಿರುತ್ತದೆ ಎನ್ನುತ್ತಾರೆ ವೈದ್ಯರು.
ಎಚ್ಚರಿಕೆ ವಹಿಸುವುದು ಹೇಗೆ?
ಒಂದು ಸಲ ಕೋವಿಡ್ ಬಂದರೆ ದೇಹ ಸಹಜವಾಗಿಯೇ ಸುಸ್ತಾಗಿರುತ್ತದೆ. ಅದು ರೋಗಲಕ್ಷಣ ಇಲ್ಲದಿರುವ ಏಸಿಂಪ್ಟಮ್ಯಾಟಿಕ್ ಸ್ಥಿತಿ ಇರಲಿ ಅಥವಾ ತೀವ್ರವಾದ ಸೋಂಕು ತಗುಲಿ ಆಸ್ಪತ್ರೆಯಲ್ಲಿ ವಾರಗಟ್ಟಲೆ ಇರಬೇಕಾಗಿ ಬಂದ ಗಂಭೀರ ಪ್ರಕರಣವಿರಲಿ ದೇಹವನ್ನು ಕೋವಿಡ್ ಹೈರಾಣು ಮಾಡಿ ಹಾಕಿರುವುದಂತೂ ಸತ್ಯ. ಇದೇ ಗೊಂದಲದಲ್ಲಿ ಇರುವ ಜನ ಹೆಚ್ಚಾಗಿ ಹೃದಯದ ಆರೋಗ್ಯದ ಬಗ್ಗೆ ಗಮನ ಹರಿಸುವುದಿಲ್ಲ. ಆದರೆ ಕೋವಿಡ್ನಿಂದ ಗುಣವಾದ ಬಳಿಕ ದೇಹದಲ್ಲಿ ರೋಗನಿರೋಧಕ ಶಕ್ತಿ ಕುಗ್ಗಿರುತ್ತದೆ. ಹೀಗಾಗಿ, ದೇಹಕ್ಕೆ ಅಗತ್ಯ ಪ್ರೋಟಿನ್ಯುಕ್ತ ಆಹಾರ ನೀಡುವುದು, ವ್ಯಾಯಾಮ, ಯೋಗ, ಧ್ಯಾನ ಮಾಡುವುದು, ಧೂಮಪಾನ, ಮದ್ಯಪಾನ ತ್ಯಜಿಸುವುದು, ಜಂಕ್ ಫುಡ್ ಸೇವನೆ ನಿಯಂತ್ರಣ ಸೇರಿದಂತೆ ಇತರೆ ಅನಾರೋಗ್ಯಕರ ಹವ್ಯಾಸವನ್ನು ತ್ಯಜಿಸಿ, ಹೃದಯದ ಆರೈಕೆಗೆ ಒತ್ತು ನೀಡಬೇಕು. ಅಲ್ಲದೆ, ಕೆಲಸದ ಒತ್ತಡ ಕೂಡ ಹೃದಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಹೀಗಾಗಿ ಕನಿಷ್ಠ 3 ತಿಂಗಳು ಹೃದಯದ ಆರೋಗ್ಯದತ್ತ ಎಚ್ಚರಿಕೆಯಿಂದಿರುವುದು ಒಳ್ಳೆಯದು ಎನ್ನುತ್ತಾರೆ ವೈದ್ಯರು.
ಸಣ್ಣ ವಯಸ್ಸಿನವರಲ್ಲಿ ಹೃದಯ ಸಮಸ್ಯೆ ಹೆಚ್ಚಳ
ಮೊದಲೆಲ್ಲಾ ನಿವೃತ್ತಿ ಹೊಂದಿದವರಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡುಬರುತ್ತಿತ್ತು. ಆದ್ರೆ ಇತ್ತೀಚೆಗೆ ಯುವಕರಲ್ಲೇ ಹೆಚ್ಚೆಚ್ಚು ಹೃದಯಾಘಾತ ಮತ್ತು ಅದಕ್ಕೆ ಸಂಬಂಧಿಸಿದ ನಾನಾ ಸಮಸ್ಯೆಗಳು ಕಂಡುಬರುತ್ತಿವೆ. ಚಿದರಲ್ಲು 20ರಿಂದ 45 ವರ್ಷದೊಳಗಿನವರಲ್ಲಿ ಈ ಪ್ರಕರಣ ಮತ್ತಷ್ಟು ಹೆಚ್ಚು ಎನ್ನಲಾಗಿದೆ. 2017ರಲ್ಲಿ ನಡೆದ ಅಧ್ಯಯನ ಒಂದರ ಪ್ರಕಾರ ವರ್ಷಕ್ಕೆ 4 ಲಕ್ಷ ಮಧ್ಯವಯಸ್ಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರಂತೆ.
ಲಸಿಕೆಯಿಂದ ಹೃದಯಕ್ಕೂ ಪ್ರಯೋಜನ ಇದೆಯಾ?
ಕೋವಿಡ್ ಬರದಂತೆ ಅಥವಾ ಬಂದರೂ ಹೆಚ್ಚು ಹಾನಿ ಮಾಡದಂತೆ ತಡೆಯುವಲ್ಲಿ ಲಸಿಕೆ ಪರಿಣಾಮಕಾರಿಯಾಗಿದೆ ಎನ್ನುವುದು ಈಗಾಗಲೇ ತಿಳಿದಿರುವ ವಿಚಾರ. ಹಾಗಾಗಿ ದೇಹದ ಮೇಲಾಗುವ ಅಪಾಯವನ್ನು ಕಡಿಮೆ ಮಾಡಿದರೆ ಸಹಜವಾಗಿಯೇ ಹೃದಯದ ಆರೋಗ್ಯವನ್ನೂ ಕಾಪಾಡುವ ಅವಕಾಶ ಸಿಕ್ಕಂತಾಗುತ್ತದೆ. ಹಾಗಾಗಿ ಲಸಿಕೆ ಪಡೆಯುವುದು ಬಹಳ ಅವಶ್ಯಕ ಎನ್ನುತ್ತಾರೆ ವೈದ್ಯರು. ಕೇವಲ ಕೋವಿಡ್ ನಿಂದ ಕಾಪಾಡುವುದು ಮಾತ್ರವಲ್ಲ, ಲಸಿಕೆ ಹೃದಯದ ಮೇಲಾಗುವ ವಿಪರೀತ ಪರಿಣಾಮಗಳನ್ನೂ ಆ ಮೂಕಲ ತಡೆಯಲು ಸಹಕಾರಿ ಎನ್ನಲಾಗಿದೆ. ಈಗಾಗಲೇ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ಎಲ್ಲರೂ ಸಾಕಷ್ಟು ಏಟು ತಿಂದಿದ್ದೇವೆ. ಈಗಲಾದರೂ ಎಚ್ಚೆತ್ತುಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಆರೋಗ್ಯವಂತ ಜೀವನಶೈಲಿ ರೂಢಿಸಿಕೊಂಡರೆ ಮೂರನೇ ಅಲೆಯ ಅಪಾಯ ತಪ್ಪಿಸಬಹುದು ಎನ್ನುವುದು ತಜ್ಞರ ಅಭಿಮತ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »