TOP STORIES:

ಕೋವಿಡ್ ಗುಣವಾಯ್ತಾ? ಹಾರ್ಟ್ ಚೆಕಪ್ ಮಾಡಿಸದಿದ್ರೆ ಅಪಾಯ ಇನ್ನೂ ಇದೆ!


  • ಬೆಂಗಳೂರು : ಕೋವಿಡ್ ಗುಣಮುಖರಾದ ನಂತರ ಅಬ್ಬಾ ಅಂತೂ ಬದುಕಿಕೊಂಡೆ ಅಂತ ನಿಟ್ಟುಸಿರು ಬಿಡುತ್ತಿರುವ ಅನೇಕರು ನಂತರವೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಲೇಬೇಕು. ಅದರಲ್ಲೂ ಹೃದಯದ ಪರೀಕ್ಷೆಯನ್ನಂತೂ ಖಂಡಿತಾ
    ತಪ್ಪಿಸಬಾರದು ಎನ್ನುತ್ತಾರೆ ವೈದ್ಯರು.
  • ಕೋವಿಡ್ ನಿಂದ ಬಳಲಿ ನಂತರ ಸಂಪೂರ್ಣವಾಗಿ ಗುಣಮುಖರಾದ ಅನೇಕರಲ್ಲಿ ಹೃದಯ ಮತ್ತು ರಕ್ತನಾಳ ಸಂಬಂಧಿ ಸಮಸ್ಯೆಗಳು ಕಂಡುಬಂದಿವೆ. ಅನೇಕ ಪ್ರಕರಣಗಳಲ್ಲಂತೂ ಬಹಳ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಉದಾಹರಣೆಗಳೂ ಸಾಕಷ್ಟಿವೆ. ಹಾಗಾಗಿ ತಪ್ಪದೇ ಕನಿಷ್ಟ 3 ತಿಂಗಳಿಗೆ ಒಂದು ಸಲವಾದರೂ ಹೃದಯದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎನ್ನುತ್ತಾರೆ ವೈದ್ಯರು. ಇದರಿಂದ ದಿಢೀರನೆ ಹೃದಯಾಘಾತವಾಗುವುದನ್ನು ತಪ್ಪಿಸಬಹುದು.
  • ಕೋವಿಡ್ ನಂತರದ ಹೃದ್ರೋಗಗಳು ಸಣ್ಣ ವಯಸ್ಸಿನವರನ್ನು ಕಾಡುತ್ತಿರುವುದು ಆತಂಕಕಾರಿ ವಿಚಾರ. ಅದರಲ್ಲೂ 50 ವರ್ಷದೊಳಗಿನವರಾದರೆ ಹೃದ್ರೋಗ ಇರಲಿ, ಇಲ್ಲದಿರಲಿ ಒಮ್ಮೆ ತಪಾಸಣೆ ಮಾಡಿಸಿಕೊಳ್ಳುವ ಅಭ್ಯಾಸ ರೂಢಿಸಿಕೊಳ್ಳಬೇಕು ಎನ್ನುತ್ತಾರೆ
ಫೋರ್ಟಿಸ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ ಆರ್ ಕೇಶವ.
ಕೋವಿಡ್ ಗೂ ಹೃದಯಾಘಾತಕ್ಕೂ ಏನು ಸಂಬಂಧ?

ಇತ್ತೀಚೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಕೋವಿಡ್ನಿಂದ ಗುಣಮುಖರಾದ 3-4 ವಾರಗಳ ಬಳಿಕ ಹೃದಯಾಘಾತ ಹೆಚ್ಚಳವಾಗುತ್ತಿರುವ ಬಗ್ಗೆ ತಿಳಿದುಬಂದಿದೆ. ಅದರಲ್ಲೂ ಎರಡನೇ ಅಲೆಯಲ್ಲಿ ಸಣ್ಣ ವಯಸ್ಸಿನವರನ್ನೇ ಹೆಚ್ಚಾಗಿ ಕೋವಿಡ್ ಬಾಧಿಸಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರು ನಂತರವೂ ದೀರ್ಘಕಾಲದವರಗೆ ಸಂಪೂರ್ಣ ನಿಶ್ಶಕ್ತಿ ಹೊಂದಿರುತ್ತಾರೆ. ಇಂಥ ಸಂದರ್ಭದಲ್ಲಿ ಹೃದಯಾಘಾತ ಸಂಭವ ಹೆಚ್ಚಿರುತ್ತದೆ ಎನ್ನುತ್ತಾರೆ ವೈದ್ಯರು.
ಎಚ್ಚರಿಕೆ ವಹಿಸುವುದು ಹೇಗೆ?
ಒಂದು ಸಲ ಕೋವಿಡ್ ಬಂದರೆ ದೇಹ ಸಹಜವಾಗಿಯೇ ಸುಸ್ತಾಗಿರುತ್ತದೆ. ಅದು ರೋಗಲಕ್ಷಣ ಇಲ್ಲದಿರುವ ಏಸಿಂಪ್ಟಮ್ಯಾಟಿಕ್ ಸ್ಥಿತಿ ಇರಲಿ ಅಥವಾ ತೀವ್ರವಾದ ಸೋಂಕು ತಗುಲಿ ಆಸ್ಪತ್ರೆಯಲ್ಲಿ ವಾರಗಟ್ಟಲೆ ಇರಬೇಕಾಗಿ ಬಂದ ಗಂಭೀರ ಪ್ರಕರಣವಿರಲಿ ದೇಹವನ್ನು ಕೋವಿಡ್ ಹೈರಾಣು ಮಾಡಿ ಹಾಕಿರುವುದಂತೂ ಸತ್ಯ. ಇದೇ ಗೊಂದಲದಲ್ಲಿ ಇರುವ ಜನ ಹೆಚ್ಚಾಗಿ ಹೃದಯದ ಆರೋಗ್ಯದ ಬಗ್ಗೆ ಗಮನ ಹರಿಸುವುದಿಲ್ಲ. ಆದರೆ ಕೋವಿಡ್ನಿಂದ ಗುಣವಾದ ಬಳಿಕ ದೇಹದಲ್ಲಿ ರೋಗನಿರೋಧಕ ಶಕ್ತಿ ಕುಗ್ಗಿರುತ್ತದೆ. ಹೀಗಾಗಿ, ದೇಹಕ್ಕೆ ಅಗತ್ಯ ಪ್ರೋಟಿನ್ಯುಕ್ತ ಆಹಾರ ನೀಡುವುದು, ವ್ಯಾಯಾಮ, ಯೋಗ, ಧ್ಯಾನ ಮಾಡುವುದು, ಧೂಮಪಾನ, ಮದ್ಯಪಾನ ತ್ಯಜಿಸುವುದು, ಜಂಕ್ ಫುಡ್ ಸೇವನೆ ನಿಯಂತ್ರಣ ಸೇರಿದಂತೆ ಇತರೆ ಅನಾರೋಗ್ಯಕರ ಹವ್ಯಾಸವನ್ನು ತ್ಯಜಿಸಿ, ಹೃದಯದ ಆರೈಕೆಗೆ ಒತ್ತು ನೀಡಬೇಕು. ಅಲ್ಲದೆ, ಕೆಲಸದ ಒತ್ತಡ ಕೂಡ ಹೃದಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಹೀಗಾಗಿ ಕನಿಷ್ಠ 3 ತಿಂಗಳು ಹೃದಯದ ಆರೋಗ್ಯದತ್ತ ಎಚ್ಚರಿಕೆಯಿಂದಿರುವುದು ಒಳ್ಳೆಯದು ಎನ್ನುತ್ತಾರೆ ವೈದ್ಯರು.
ಸಣ್ಣ ವಯಸ್ಸಿನವರಲ್ಲಿ ಹೃದಯ ಸಮಸ್ಯೆ ಹೆಚ್ಚಳ
ಮೊದಲೆಲ್ಲಾ ನಿವೃತ್ತಿ ಹೊಂದಿದವರಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡುಬರುತ್ತಿತ್ತು. ಆದ್ರೆ ಇತ್ತೀಚೆಗೆ ಯುವಕರಲ್ಲೇ ಹೆಚ್ಚೆಚ್ಚು ಹೃದಯಾಘಾತ ಮತ್ತು ಅದಕ್ಕೆ ಸಂಬಂಧಿಸಿದ ನಾನಾ ಸಮಸ್ಯೆಗಳು ಕಂಡುಬರುತ್ತಿವೆ. ಚಿದರಲ್ಲು 20ರಿಂದ 45 ವರ್ಷದೊಳಗಿನವರಲ್ಲಿ ಈ ಪ್ರಕರಣ ಮತ್ತಷ್ಟು ಹೆಚ್ಚು ಎನ್ನಲಾಗಿದೆ. 2017ರಲ್ಲಿ ನಡೆದ ಅಧ್ಯಯನ ಒಂದರ ಪ್ರಕಾರ ವರ್ಷಕ್ಕೆ 4 ಲಕ್ಷ ಮಧ್ಯವಯಸ್ಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರಂತೆ.
ಲಸಿಕೆಯಿಂದ ಹೃದಯಕ್ಕೂ ಪ್ರಯೋಜನ ಇದೆಯಾ?
ಕೋವಿಡ್ ಬರದಂತೆ ಅಥವಾ ಬಂದರೂ ಹೆಚ್ಚು ಹಾನಿ ಮಾಡದಂತೆ ತಡೆಯುವಲ್ಲಿ ಲಸಿಕೆ ಪರಿಣಾಮಕಾರಿಯಾಗಿದೆ ಎನ್ನುವುದು ಈಗಾಗಲೇ ತಿಳಿದಿರುವ ವಿಚಾರ. ಹಾಗಾಗಿ ದೇಹದ ಮೇಲಾಗುವ ಅಪಾಯವನ್ನು ಕಡಿಮೆ ಮಾಡಿದರೆ ಸಹಜವಾಗಿಯೇ ಹೃದಯದ ಆರೋಗ್ಯವನ್ನೂ ಕಾಪಾಡುವ ಅವಕಾಶ ಸಿಕ್ಕಂತಾಗುತ್ತದೆ. ಹಾಗಾಗಿ ಲಸಿಕೆ ಪಡೆಯುವುದು ಬಹಳ ಅವಶ್ಯಕ ಎನ್ನುತ್ತಾರೆ ವೈದ್ಯರು. ಕೇವಲ ಕೋವಿಡ್ ನಿಂದ ಕಾಪಾಡುವುದು ಮಾತ್ರವಲ್ಲ, ಲಸಿಕೆ ಹೃದಯದ ಮೇಲಾಗುವ ವಿಪರೀತ ಪರಿಣಾಮಗಳನ್ನೂ ಆ ಮೂಕಲ ತಡೆಯಲು ಸಹಕಾರಿ ಎನ್ನಲಾಗಿದೆ. ಈಗಾಗಲೇ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ಎಲ್ಲರೂ ಸಾಕಷ್ಟು ಏಟು ತಿಂದಿದ್ದೇವೆ. ಈಗಲಾದರೂ ಎಚ್ಚೆತ್ತುಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಆರೋಗ್ಯವಂತ ಜೀವನಶೈಲಿ ರೂಢಿಸಿಕೊಂಡರೆ ಮೂರನೇ ಅಲೆಯ ಅಪಾಯ ತಪ್ಪಿಸಬಹುದು ಎನ್ನುವುದು ತಜ್ಞರ ಅಭಿಮತ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »