TOP STORIES:

ಗರೋಡಿ ಸ್ಟೀಲ್ ಸಂಸ್ಥೆಯಿಂದ ಜೆಎಸ್‌ಡಬ್ಲ್ಯೂ ಸಹಕಾರದೊಂದಿಗೆ ಉಚಿತ ಅಂಬುಲೆನ್ಸ್ ಸೇವೆ


ಮಂಗಳೂರು: ಗರೋಡಿ ಸ್ಟೀಲ್ ಸಂಸ್ಥೆಯಿಂದ ಜೆಎಸ್‌ಡಬ್ಲ್ಯೂ ಸಹಕಾರದೊಂದಿಗೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಗೆ ಆರಂಭಿಸಲಾದ ಉಚಿತ ಅಂಬುಲೆನ್ಸ್ ಸೇವೆಗೆ ಸೋಮವಾರ ಬೈಕಂಪಾಡಿ ಗರೋಡಿ ಸ್ಟೀಲ್ ಪ್ರಾಂಗಣದಲ್ಲಿ ಚಾಲನೆ ನೀಡಲಾಯಿತು.

ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅಂಬುಲೆನ್ಸ್ ಸೇವೆ ಉದ್ಘಾಟಿಸಿ ಮಾತನಾಡಿ, ಕೋವಿಡ್ ಸಂಕಷ್ಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಿಗಳು ನಾನಾ ರೀತಿಯಲ್ಲಿ ಸಹಕಾರ ನೀಡಿದ್ದಾರೆ. ಇದೀಗ ಗರೋಡಿ ಸ್ಟೀಲ್ ಸಂಸ್ಥೆಯ ಸಂಸ್ಥಾಪಕರಾದ ಮನೋಜ್ ಸರಿಪಲ್ಲ ಅವರು ಮೂಡುಬಿದಿರೆ ಕ್ಷೇತ್ರಕ್ಕೆ ಉಚಿತ ಅಂಬುಲೆನ್ಸ್ ಸೇವೆ ನೀಡಿರುವುದು ಶ್ಲಾಘನೀಯ ಮತ್ತು ಅವರ ಸಮಾಜಮುಖಿ ಕಾರ್ಯವನ್ನು ವ್ಯಕ್ತಪಡಿಸುತ್ತದೆ.

ಈ ಕಾರ್ಯಕ್ಕೆ ಮೂಡುಬಿದಿರೆ ಜನತೆಯ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಇನ್ನಷ್ಟು ಸಾಮಾಜಿಕ ಕಾರ್ಯಗಳು ಈ ಸಂಸ್ಥೆಯ ಮುಖೇನ ನಡೆಯಲಿ ಎಂದು ಶುಭ ಹಾರೈಸಿದರು.

ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮಾತನಾಡಿ, ಸಾಮಾಜಿಕ ಸೇವಾ ಮನೋಭಾವದಿಂದ ಉದ್ಯಮಿಗಳು ಸರಕಾರದ ಜತೆ ಕೈ ಜೋಡಿಸಿದಾಗ ಜನರಿಗೆ ಉತ್ತಮ ಸೌಲಭ್ಯ ನೀಡಲು ಸಾಧ್ಯವಾಗುತ್ತದೆ.  ಕೊರೊನಾ ವಿರುದ್ದದ ಹೋರಾಟದಲ್ಲಿ ಜೀವದ ರಕ್ಷಣೆಗೆ ಪ್ರಥಮ ಆಧ್ಯತೆಯಾಗಿದೆ.ಈ ನಿಟ್ಟಿನಲ್ಲಿ ಮನೋಜ್ ಅವರ ಕೊಡುವೆ ಅಭಿನಂದನೀಯ ಎಂದರು.

ಗರೋಡಿ ಸ್ಟೀಲ್ ಸಂಸ್ಥೆಯ ಸಂಸ್ಥಾಪಕ ಮನೋಜ್ ಸರಿಪಲ್ಲ ಮಾತನಾಡಿ, ಅಂಬುಲೆನ್ಸ್ ಸಂಪೂರ್ಣ ಉಚಿತ ಸೇವೆ ನೀಡಲಿದ್ದು, ಹವಾನಿಯಂತ್ರಿತ ಸಹಿತ ಆಕ್ಸಿಜನ್, ಪ್ರಥಮ ಚಿಕಿತ್ಸೆಗೆ ಪೂರಕವಾದ ವ್ಯವಸ್ಥೆಗಳು ಇವೆ. ಇಬ್ಬರು ಸಿಬ್ಬಂದಿಗಳು ಅದಕ್ಕಾಗಿ ನೇಮಿಸಲಾಗಿದೆ. ಮೂಡುಬಿದಿರೆ ಶಾಸಕರ ಮನವಿ ಮೇರೆಗೆ ಈ ಅಂಬುಲೆನ್ಸ್ ನ್ನು ನೀಡಲಾಗಿದ್ದು ಜನತೆಯ ಜೀವ ರಕ್ಷಣೆಗೆ ಬಳಕೆಯಾಗಲಿದೆ ಎಂದರು.

ಜೆಎಸ್‌ಡಬ್ಲ್ಯೂ ಸ್ಟೀಲ್ ಲಿ. ಸಂಸ್ಥೆಯ ರಾಜ್ಯ ಪ್ರಾಂತೀಯ ಸೇಲ್ಸ್ ಮ್ಯಾನೇಜರ್ ಶ್ರೀವತ್ಸ ಕಲುಮಂಗಿ ಮಾತನಾಡಿ, ಸಮಾಜಮುಖೀ ಚಟುವಟಿಕೆಯ ಭಾಗವಾಗಿ ಸಂಸ್ಥೆಯಿಂದ ಬೆಂಗಳೂರು, ಹುಬ್ಬಳ್ಳಿ ಗೋವಾದಲ್ಲಿ ಉಚಿತ ಅಂಬುಲೆನ್ಸ್ ಕೊಡುಗೆ ನೀಡಲಾಗಿದೆ. ಮಹಾರಾಷ್ಟ ಬಳ್ಳಾರಿಯಲ್ಲಿ ೨ಸಾವಿರ ಆಕ್ಸಿಜನ್ ಬೆಡ್ ನಿರ್ಮಿಸಲಾಗಿದೆ. ನಾಗರಿಕರ ಸೇವೆಯಲ್ಲಿ ಜೆಎಸ್‌ಡಬ್ಲ್ಯೂ ಸಂಸ್ಥೆ ಸದಾ ಮುಂದಿದೆ ಎಂದರು.

ಈ ಸಂದರ್ಭ ಮನಪಾ ಸದಸ್ಯ ರಾಜೇಶ್ ಸಾಲ್ಯಾನ್, ಗರೋಡಿ ಸ್ಟೀಲ್ ಸಂಸ್ಥೆಯ ಪಾಲುದಾರರಾದ ಬಿಂಬಾ ಮನೋಜ್, ಕನ್ಸಲ್ಟೆಂಟ್ ಗಿರೀಶ್ ರಾವ್, ಜನರಲ್ ಮ್ಯಾನೇಜರ್‌ಗಳಾದ ಸುಮಂತ್ ಮಲ್ಯ, ನಾಗರಾಜ್ ಎಸ್. ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »