TOP STORIES:

FOLLOW US

ಚಳಿಗಾಲದಲ್ಲಿ ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು


ಚಳಿಗಾಲದಲ್ಲಿ ಚರ್ಮ ಬೇಗನೆ ಕಾಂತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮ ಕೈಗೊಳ್ಳಬಹುದು. ಅದು ಹೇಗೆ ಅಂತ ನೀವು ತಿಳಿಯಿರಿ.ಕಡಲೆಹಿಟ್ಟು ಹಾಗೂ ಅರಿಶಿಣ

ಒಣ ಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು.

ಇಲ್ಲದಿದ್ದಲ್ಲಿ ನಿಂಬೆ ರಸ ಅಥವಾ ತಿಳಿಮಜ್ಜಿಗೆ ನೀರು ಬೆರೆಸಿ ಲೇಪನ ಮಾಡಿಕೊಳ್ಳಬೇಕು.

ಈ ಲೇಪನವನ್ನು ಮುಖ, ಕೈ-ಕಾಲುಗಳಿಗೆ ಲೇಪಿಸಿಕೊಂಡು, ಒಣಗಿದಂತೆ ಅನಿಸಿದಾಗ ಉಗುರು ಬೆಚ್ಚಗಿನ ನೀರನ್ನು ಬಳಸಿ ತೊಳೆದುಕೊಳ್ಳಬೇಕು.

ಲೋಳೆಸರ

ಯಾವ ಬಗೆಯ ಚರ್ಮದವರೂ ಧಾರಾಳವಾಗಿ ಇದನ್ನು ಬಳಸಬಹುದು. ಬಟ್ಟಲೊಂದಕ್ಕೆ ಲೋಳೆ ಸರದ ತಿರುಳನ್ನು ತೆಗೆದುಕೊಂಡು, ನಿಂಬೆ ರಸ ಹಾಗೂ ಅರಿಶಿಣವನ್ನು ಬೆರೆಸಿ, ಜೆಲ್‌ನಂತೆ ಇದನ್ನು ಮುಖಕ್ಕೆ, ಮೊಣಕೈ ತುದಿಗಳಿಗೆ ಲೇಪಿಸಿ, ಹದಿನೈದು ನಿಮಿಷಗಳ ನಂತರ ತೊಳೆದುಕೊಳ್ಳಿ.

ಆಲೂಗಡ್ಡೆ

ಇದು ಚರ್ಮವನ್ನು ಸ್ವಚ್ಛಗೊಳಿಸಿ, ಕೋಮಲಾಂಶ ನೀಡುತ್ತದೆ. ಆಲೂಗಡ್ಡೆಯನ್ನು ತುರಿದುಕೊಂಡು, ಆ ತುರಿಯನ್ನು ಮುಖಕ್ಕೆ ಉಜ್ಜಿಕೊಳ್ಳಬೇಕು. ಅದರ ನಂತರ ಐಸ್‌ ಕ್ಯುಬ್‌ ಅನ್ನು ಮುಖದ ತುಂಬಾ ಆಡಿಸಿಕೊಂಡರೆ ನುಣುಪು ನಿಮ್ಮ ಅನುಭವಕ್ಕೆ ಬರುತ್ತದೆ.

ಪಪ್ಪಾಯ

ಅತಿ ಹಣ್ಣಾಗಿ ಕಳೆತ ಪಪ್ಪಾಯದ ತಿರುಳನ್ನು ಅಂಗೈಯಲ್ಲಿ ಹಿಸುಕಿಕೊಳ್ಳಿ. ಒಣಚರ್ಮವಾದರೆ ಕೆನೆ, ಎಣ್ಣೆ ಚರ್ಮವಾದರೆ ನಿಂಬೆರಸ ಬೆರೆಸಿ, ಪೇಸ್ಟ್‌ ಮಾಡಿಕೊಳ್ಳಿ. ಈ ಲೇಪನವನ್ನು ಮುಖ, ಕತ್ತು, ಕೈಗಳಿಗೆ ಲೇಪಿಸಿಕೊಳ್ಳಿ. ಕಾಲು ಗಂಟೆಯ ನಂತರ ಚರ್ಮ ಬಿಗಿದುಕೊಂಡಂತೆ ಎನಿಸತೊಡಗುತ್ತದೆ. ಆಗ ಉಗುರು ಬಿಸಿ ನೀರಿನಿಂದ ಇದನ್ನು ತೊಳೆದುಕೊಳ್ಳಿ.

ಕೊಬ್ಬರಿ ಎಣ್ಣೆ

ಸ್ನಾನದ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಉಗುರು ಬಿಸಿ ನೀರಿನಿಂದ ಸ್ನಾನ ಮಾಡಿದರೆ ನೈಸರ್ಗಿಕ ಮಾಯಿಶ್ಚರೈಸರ್‌ ನೀಡಿದಂತೆ ಆಗುತ್ತದೆ. ಸ್ನಾನಕ್ಕೆ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಳ್ಳಲು ಆಗದಿದ್ದರೆ ಸ್ನಾನದ ಕೊನೆಯಲ್ಲಿ ಒಂದು ಲೋಟ ನೀರಿಗೆ ಒಂದಷ್ಟು ತೆಂಗಿನೆಣ್ಣೆಯ ಹನಿಗಳನ್ನು ಸೇರ್ಪಡೆಗೊಳಿಸಿ, ಅವನ್ನು ಕೈ, ಕಾಲು, ಬೆನ್ನು, ಹೊಟ್ಟೆಗೆ ಹಚ್ಚಿಕೊಂಡರೆ ಚಳಿಗಾಲದ ತುರಿಕೆ ಹಾಗೂ ಕೆರೆತವನ್ನು ಕಡಿಮೆ ಮಾಡಬಹುದು.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »