TOP STORIES:

FOLLOW US

ಚುನಾವಣೆಗೆ ನಾನೂ ಸೇರಿದಂತೆ 50 ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ: ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ


ಮುಂದಿನ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ನಾನೂ ಸೇರಿದಂತೆ ೫೦ ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ ಎಂದು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಶಿರಾಲಿಯ ಹಳೇಕೋಟೆ ಹನುಮಂತ ದೇವಸ್ಥಾನದ ಶಿಲಾಮಯ ದೇಗುಲ ಸಮರ್ಪಣೆ, ಶ್ರೀ ದೇವರ ಪುನರ್ ಪ್ರತಿಷ್ಠೆ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಆಶಿರ್ವಚನ ನೀಡಿ ಮಾತನಾಡಿದರು, ರಾಜಕೀಯ ಕ್ಷೇತ್ರ ಹಾಳಾಗಿದ್ದು, ರಾಜ್ಯಾಂಗದ ವ್ಯವಸ್ಥೆಯೇ ದಿಕ್ಕು ತಪ್ಪಿದ್ದು, ರಾಜಕೀಯ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲು ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ ಎಂದರು.

ಶಾಸಕನಾಗುವವನು ಇಂದು ತಾನೆಷ್ಟು ಗಳಿಸುತ್ತೇನೆ ಎಂಬ ಲೆಕ್ಕಚಾರದೊಂದಿಗೆ ಚುನಾವಣೆಗೆ ನಿಲ್ಲುತ್ತಾನೆ. ನಾವು ಚುನಾವಣೆಯಲ್ಲಿ ನಿಂತು ಗೆದ್ದರೆ ನಮಗೆ ಸರಕಾರ ಸಂಬಳ ಕೊಡುವುದು ಬೇಡ, ಕೇವಲ ರೇಷನ್ ಕೊಟ್ಟರೆ ಸಾಕು, ಕ್ಷೇತ್ರ ಸುತ್ತುವ ಭತ್ತೆಯನ್ನು ಕೂಡಾ ನಾವು ಕೇಳುವುದಿಲ್ಲ. ಪಿಂಚಣಿಯಂತೂ ಬೇಡವೇ ಬೇಡ, ಸದ್ಯ ಪ್ರಜೆಗಳ ಹಣವು ಅನವಶ್ಯಕವಾಗಿ ದುಂದು ವೆಚ್ಚವಾಗುತ್ತಿದೆ ಎಂದು ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದರು. ಇನ್ನು, ಸ್ವಾಮೀಜಿಗಳು ಚುನಾವಣೆಗೆ ಸ್ಪರ್ಧಿಸಲು ನಮಗೆ ಮೋದೀಜಿ ಹಾಗೂ ಯೋಗೀಜಿ ಪ್ರೇರಣೆಯಾಗಿದ್ದಾರೆ. ಆದರೆ, ನಾವು ಯಾವುದೇ ಪಕ್ಷದಿಂದಲೂ ನಿಲ್ಲುವುದಿಲ್ಲ. ಭಗವದ್ಗೀತೆಯೇ ನಮ್ಮ ಚುನಾವಣಾ ಚಿಹ್ನೆ ಎಂದರು.

ಸದ್ಯದ ರಾಜಕೀಯ ವ್ಯವಸ್ಥೆಯ ಬಗ್ಗೆ ಖೇದ ವ್ಯಕ್ತಪಡಿಸಿದ ಸ್ವಾಮೀಜಿಗಳು, ವಿಧಾನಸಭೆಯ ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆಯನ್ನು ನಿಗದಿಪಡಿಸಬೇಕು. ಮಂತ್ರಿಗಳಾಗಲು ಕೂಡಾ ವಿದ್ಯಾರ್ಹತೆಯನ್ನು ಮಾನದಂಡವನ್ನಾಗಿಸಬೇಕು. ಆದರೆ, ಇಂದು ವಿದ್ಯೆಯಿಲ್ಲದ ಮಂತ್ರಿಗಳು ನಮ್ಮನ್ನು ಆಳುತ್ತಿದ್ದಾರೆ. ವಿಧಾನ ಸೌಧದಲ್ಲಿ ಕಚ್ಚಾಡಿಕೊಳ್ಳುವವರು ಹೊರ ಬಂದ ತಕ್ಷಣ ಟೇಬಲ್ ಹಂಚಿಕೊಂಡು ಚಹಾ ಸೇವಿಸುತ್ತಾರೆ. ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡುತ್ತಾ ಜನರ ಹಣ ದುರುಪಯೋಗವಾಗುತ್ತಿದೆ. ಇದು, ಸರಿಯಾಗಬೇಕು, ಹಳಿತಪ್ಪಿರುವ ರಾಜ್ಯಾಂಗ ವ್ಯವಸ್ಥೆಯನ್ನು ಸರಿಪಡಿಸುವ ಉದ್ಧೇಶದಿಂದ ನಾವು ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ ಎಂದರು.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »