TOP STORIES:

ಜೀವನದ ಸುದೀರ್ಘ ವರ್ಷಗಳನ್ನು ಕಾರಿನಲ್ಲಿ ಚಾಲಕನಾಗಿ ಕಳೆದ ವೇಣೂರಿನ ಭೈರಣ್ಣನಿಗೊಂದು ನುಡಿ ನಮನ…


ಹುಟ್ಟಿದ್ದು ಗುರುಪುರದಲ್ಲಿ. ಜೀವನದ ಸುದೀರ್ಘ ವರ್ಷಗಳನ್ನು  ಚಾಲಕನಾಗಿ ಕಳೆದದ್ದು ವೇಣೂರಿನಲ್ಲಿ. ಸರಿ ಸುಮಾರು 56 ವರ್ಷಗಳ ನಿರಂತರ ಚಾಲಕನಾಗಿ ಸೇವೆ ಸಲ್ಲಿಸಿದ್ದು ವೇಣೂರಿನ ಮಹಾಜನತೆಗೆ !

ಭೈರಣ್ಣನೇ ಹೇಳುವಂತೆ ಅವರು ವೇಣೂರಿಗೆ ಬಂದದ್ದು ಎಪ್ರಿಲ್ 9 , 1967 ರಂದು.  ವೇಣೂರಿನ ಖ್ಯಾತ ವರ್ತಕರಾದ   ಕಿಟ್ಟೆರ್  ಎಂದೇ ಖ್ಯಾತರಾದ  ಶ್ರೀ ಖಂಡಿಗ ನರಸಿಂಹ ಪೈ ( ಕೆ.ಎನ್. ಪೈ)ಯವರ ಚಾಲಕನಾಗಿ. ವೇಣೂರಿಗೆ ಬಂದ ಮೇಲೆ ಮತ್ತೆ ಗುರುಪುರಕ್ಕೆಮರಳಲು ಮನಸಾಗದೆ ವೇಣೂರಿನಲ್ಲೇ ಕಾರು ಚಾಲಕನಾಗಿ ನೆಲೆಯಾದವರು ಭೈರಣ್ಣ.

ಕಿಟ್ಟರ ಕಾರಿನ ಬಳಿಕ ಶ್ರೀ ನಾರಾಯಣ ಹೆಗ್ಡೆಯವರ ಕಾರಿನಲ್ಲಿ ಡ್ರೈವರ್ ಆಗಿ, ನಂತರ 1970 ರಿಂದ 1974 ವರೆಗೆ  ಕೆಳಗಿನಪೇಟೆಯ ಸಹನಾ ಟೆಕ್ಸ್ ಟೈಲ್ಸ್   ಮಾಲೀಕರಾದ ಶ್ರೀಸಂಜೀವ ಸಾಲ್ಯಾನ್ ಚಾಲಕರಾಗಿದ್ದ ಭೈರಣ್ಣ ನಂತರ ಸ್ವಂತ ಕಾರು ಖರೀದಿಸಿಬಾಡಿಗೆಗೆ ಕಾರು ಓಡಿಸಲು ಆರಂಭಿಸಿದರು.

ಭೈರಣ್ಣ ಕಲಿತದ್ದು ಎರಡನೇ ತರಗತಿಯವರೆಗೆ ಮಾತ್ರ. ಮನೆಯಲ್ಲಿ ಬಡತನವಿದ್ದ ಕಾರಣ ಮೊದಲು ಕೂಲಿ ಕೆಲಸ, ಬಳಿಕವಾಮಂಜೂರಿನಲ್ಲಿ ಸ್ವಲ್ಪ ಸಮಯ ಜೊಕಿಂ ಸೆರಾವೊ ಅವರಲ್ಲಿ ಕೆಲಸ, ಮಂಗಳೂರಿನ ಕೊಟ್ಟಾರದಲ್ಲಿ ಮಾಲಿಂಗ ಶೆಟ್ಟಿಯವರಮನೆಯಲ್ಲಿ ಕಾರು ತೊಳೆದು ಅದನ್ನು ಓಡಿಸಲು ಅಭ್ಯಾಸ ಮಾಡಿ ಪರಿಣತಿ ಪಡೆದವರು.

ಭೈರಣ್ಣ ಹೇಳುವಂತೆ ಅವರು ಹುಟ್ಟಿದ್ದು 1938ನೇ ವರ್ಷದ ಮಾಯಿಡ್ ಪದಿಮೂಜಿ ಪೋಯಿನಾನಿ. ತಂದೆ ಫಕೀರ ಪೂಜಾರಿ. ತಾಯಿ ಗೌರಿ. ದಂಪತಿಗಳ ನಾಲ್ವರು ಮಕ್ಕಳಲ್ಲಿ ಭೈರಣ್ಣ ಒಬ್ಬರು.  ಗುರುಪುರದಲ್ಲಿ ಒಂದೂಕಾಲು ಎಕರೆ ಜಾಗ ಅವರ ತಂದೆಗಿದ್ದಆಸ್ತಿ.

ಭೈರಣ್ಣ ವೇಣೂರಿಗೆ ಬಂದ ಮೇಲೆ ಅನೇಕ ಮಂದಿಯ ಪ್ರಾಣವನ್ನು ಉಳಿಸಿದ ಕೀರ್ತಿ ಅವರದು. 1970 ರಿಂದ 1990   ಕಾಲದಲ್ಲಿವೇಣೂರಿನಲ್ಲಿ ಬಾಡಿಗೆ ಕಾರು ಅಂದರೆ ಅದು ಭೈರಣ್ಣನ ಕಾರು ಅನ್ನುವಷ್ಟು ಪ್ರಸಿದ್ಧರಾಗಿದ್ದವರು ಅವರು. ಅತ್ಯಂತ ವಿನಯಶೀಲ, ದಿನದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಯಾವುದೇ ಹೊತ್ತಿನಲ್ಲಿ ಹೋಗಿ ಕರೆದರೂ ಸೇವೆಗೆ ಸದಾ ಸಿದ್ಧರಾಗಿದ್ದ ಭೈರಣ್ಣ ಯಾರೊಂದಿಗೂಸಿಡುಕಿದವರಲ್ಲ. ಎಷ್ಟೋ ಮಂದಿಯ ಮದುವೆ ದಿಬ್ಬಣ, ಆಫೀಸು ಕೆಲಸ, ಪುಣ್ಯಕ್ಷೇತ್ರ ದರ್ಶನ, ಕಾಜೂರು ಉರೂಸ್, ಅತ್ತೂರುಚರ್ಚ್ ಜಾತ್ರೆಗೆ ಜನರನ್ನು ಕರೆದೊಯ್ಯುವ ಕಾರ್ಯ,ಹಲವಾರು ಮಂದಿ ಗರ್ಭಿಣಿಯರನ್ನು ಹಾಗೂ ಅನಾರೋಗ್ಯ ಪೀಡಿತರನ್ನುಸಕಾಲಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಕಾಪಾಡಿದ ಕೀರ್ತಿ ಭೈರಣ್ಣನದ್ದು.

ಕೆಲವೊಮ್ಮೆ ಭೈರಣ್ಣನ ಅಂಬಾಸಿಡರ್ ಕಾರ್ ನಿಧಾನವಾಗಿ ಹೋಗುತ್ತಿದೆಯೆಂದರೆ ಯಾರಿಗೋ ಏನೋ ಆಗಿದೆಯೆಂದೋ, ಮಣಿಪಾಲ ಆಸ್ಪತ್ರೆಗೆ ಹೊರಟಿದೆಯೆಂದೋ ಒಂದು ರೀತಿಯ ಅನೂಹ್ಯ ಭಯವೂ ಅಗುವುದಿತ್ತು!

ಕಳೆದ ಕೆಲವು ವರ್ಷಗಳಿಂದ ಕುಟುಂಬದವರು ಬಂದು ವಾರ್ಧಕ್ಯದ  ಸಮಯದಲ್ಲಿ ಗುರುಪುರದ ಮನೆಗೆ ಬರುವಂತೆಕೇಳಿಕೊಂಡರೂ ಅತ್ತ ಹೋಗಲು ಮನಸಾಗದೇ ವೇಣೂರಿನಲ್ಲಿ  ಶ್ರೀ ಕೇಶವ ಕಾಮತರ ಅಂಗಡಿಯ ಮೇಲಿದ್ದ ರೂಮಿನಲ್ಲೇವಾಸವಿದ್ದರು. ಶ್ರೀ ಕೇಶವ ಕಾಮತರ ಸುಪುತ್ರ ಶ್ರೀ ವೆಂಕಟರಮಣ ಕಾಮತರು ಕೊನೆಯವರೆಗೂ ಅವರಿಗೆ ಆಶ್ರಯವಿತ್ತುಸಹೃದಯತೆಯನ್ನು ತೋರಿದವರು. ಭೈರಣ್ಣನ ಶಿಷ್ಯರಾದ ಇಬ್ರಾಹಿಂರವರು ಭೈರಣ್ಣನನ್ನು ಅನಾರೋಗ್ಯದ ಸಮಯದಲ್ಲಿನೋಡಿಕೊಂಡು ಗುರುಭಕ್ತಿಯನ್ನು ಮೆರೆದಿದ್ದಾರೆ.

ಅವಿವಾಹಿತರಾಗಿಯೇ ಉಳಿದಿದ್ದ ಭೈರಣ್ಣ ಕೊನೆಯ ತನಕವೂ ವೇಣೂರಿನಲ್ಲಿಯೇ ಯಾರಿಗೂ ಹೊರೆಯಾಗದಂತೆ ಉಳಿದು   ಜೂನ್ 9, 2023ರಂದು ತಮ್ಮ 85 ನೇ ವಯಸ್ಸಿನಲ್ಲಿ ಭಗವಂತನ ಪಾದವನ್ನು ಸೇರಿದರು.

ವೇಣೂರಿನಲ್ಲಿ 56 ವರ್ಷಗಳ ಕಾಲ ಜನರಿಗೆ ಕಾರಿನ ಮೂಲಕ ಸೇವೆಯನ್ನು ನೀಡಿದ ಭೈರಣ್ಣನನ್ನು ಯಾವುದೇ ಸಂಘಸಂಸ್ಥೆಗಳಾಗಲೀ, ಶಾರದೋತ್ಸವ, ಗಣೇಶೋತ್ಸವ ಸಮಿತಿಯವರಾಗಲೀ ಗುರುತಿಸಿ ಗೌರವಿಸದೇ ಇದ್ದುದ್ದು ಮಾತ್ರ ವಿಷಾದನೀಯ.

ವೇಣೂರಿನ ಸ್ಮರಣೀಯ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಭೈರಣ್ಣನಿಗೆ ಭಾವಪೂರ್ಣ ಶ್ರದ್ಧಾಂಜಲಿ.

ಡಾ. ಸುಬ್ರಹ್ಮಣ್ಯ ಭಟ್, ಕಜೆ ಮನೆ ವೇಣೂರು

ಮಾಹಿತಿ ಆಧಾರ:

. 23-09-2022 ರಂದು ನಾನು ನಡೆಸಿದ ಮೌಖಿಕ ಸಂದರ್ಶನದ ದಾಖಲಾತಿ

. ಶ್ರೀಮತಿ ಶಶಿಪ್ರಭಾ ಟೀಚರ್ ಅವರ ಮೌ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »