TOP STORIES:

FOLLOW US

ತನ್ನ ಇರುವಿಕೆ ತೋರಿದ ತುಳುನಾಡಿನ ದೈವಿಶಕ್ತಿ: ಉಗ್ರನನ್ನು ನಗರ ಪ್ರವೇಶಿಸಲು ಬಿಡದೇ ದಾರಿಯಲ್ಲೇ ಬಾಂಬ್ ಸ್ಪೋಟಿಸಿ ಜನರ ರಕ್ಷಿಸಿದ ಕಂಕನಾಡಿ ಗರಡಿಯ ಅವಳಿ ವೀರರು..!


ಮಂಗಳೂರು: ಕಳೆದ ಕೆಲವು ದಶಕಗಳಿಂದ ಕೋಮುದಳ್ಳೂರಿಯಲ್ಲಿ ಬೆಂದು ಹೋಗಿದ್ದ ಕರಾವಳಿಯ ವಾಣಿಜ್ಯ ನಗರಿ ಮಂಗಳೂರುಇತ್ತೀಚಿನ ವರ್ಷಗಳಲ್ಲಿ ಅದ್ಯಾಕೋ ಸ್ಥಬ್ಧವಾಗಿತ್ತು. ಸಂತೃಪ್ತಿಯ ಮಧ್ಯೆ ಶನಿವಾರ ಮಂಗಳೂರು ನಗರದ ಕಂಕನಾಡಿ ಪೊಲೀಸ್ಠಾಣೆ ಬಳಿ ಆಟೋ ಕುಕ್ಕರ್ ಬಾಂಬ್ ಸ್ಫೋಟ ಜನರನ್ನು ಮತ್ತೆ ಆತಂಕಕ್ಕೀಡು ಮಾಡಿದೆ. ಆದರೆ ಇದೆಲ್ಲದರ ನಡುವೆ ಘಟನೆಯಲ್ಲೂ ತುಳುನಾಡಿನ ಕಾರ್ಣಿಕ ಶಕ್ತಿಗಳು ಪವಾಡ ಮೆರೆದಿರುವುದು ಗೋಚರವಾಗುತ್ತಿದೆ.

ಶನಿವಾರ ಮಂಗಳೂರು ನಗರದ ಕಂಕನಾಡಿ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾ ಒಂದರಲ್ಲಿ ಸ್ಪೋಟ ಸಂಭವಿಸಿದ್ದುಘಟನೆಯಲ್ಲಿ ಚಾಲಕ ಸೇರಿದಂತೆ ಪ್ರಯಾಣಿಕನು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಕರಣ ಅನೇಕ ಆಯಾಮಗಳನ್ನುಪಡೆದುಕೊಂಡರೂ ಕೊನೆಗೂ ಒಂದು ನಿರ್ದಿಷ್ಟ ಸ್ವರೂಪವನ್ನು ಪಡೆದುಕೊಂಡಿದೆ.

ಭಯೋತ್ಪಾದನೆ ಸಂಚು ರೂಪಿಸಿದ್ದ ಶಾರೀಕ್ ಕುಕ್ಕರ್‌ನಲ್ಲಿ ಅನೇಕ ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ಪ್ರೀ ಪ್ಲಾನ್ ಎಂಬಂತೆಯೋಜನೆ ಹಾಕಿಕೊಂಡಿದ್ದ.

ಈತ ಮೈಸೂರಿನಿಂದ ಬಸ್ಸಿನಲ್ಲಿ ಬಂದು ಪಡೀಲ್‌ನ ಹತ್ತಿರ ಇಳಿದು ಪುರುಷೋತ್ತಮ್ ಎಂಬವರ ರಿಕ್ಷಾದಲ್ಲಿ ಕೂತು ಪಂಪ್‌ವೆಲ್‌ಗೆಹೋಗಬೇಕು ಎಂದಿದ್ದಾನೆ.

ಆದರೆ ಚಾಲಕ ರಿಕ್ಷಾ ಚಲಾಯಿಸುತ್ತಾ ಸಾಗುತ್ತಿರುವಾಗಲೇ ಕಂಕನಾಡಿ ನಗರ ಪೊಲೀಸ್ ಠಾಣೆ  ಬಳಿ ಆತ ಹೊತ್ತೊಯ್ಯುತ್ತಿದ್ದ ಬ್ಯಾಗ್‌ನಲ್ಲಿದ್ದ ಕುಕ್ಕರ್ ಅಚಾನಕ್ ಆಗಿ ಸ್ಫೋಟಗೊಂಡಿದೆ. ಸ್ಫೋಟದ ಪರಿಣಾಮವಾಗಿ ಇಬ್ಬರೂ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.

ಈತನ ಕೃತ್ಯದ ಬಗ್ಗೆ ಅನೇಕ ಪ್ರಶ್ನೆಗಳು, ಅನುಮಾನಗಳು, ಆತಂಕಗಳು ಸೃಷ್ಠಿಯಾಗುತ್ತಿದ್ದರೂ ಆತ ಸ್ಪೋಟಕ ತುಂಬಿದ್ದ ಕುಕ್ಕರನ್ನುತೆಗೆದುಕೊಂಡು ಜನರು ನಂಬಿಕೊಂಡು ಬಂದಿರುವ ತುಳುನಾಡ ಕಾರ್ಣಿಕ ಪುರುಷರ ದೈವಸ್ಥಾನವಾದ ಕೋಟಿ ಚೆನ್ನಯ್ಯ ಗರೋಡಿತನ್ನ ಗಡಿಯನ್ನೂ ದಾಟಲು ಬಿಡದೆ ಮುಂಚಿತವಾಗಿಯೇ ಅವಘಡ ನಡೆದಿರುವುದು ಎಲ್ಲೋ ಒಂದು ಕಡೆ ಜನ ಇದು ಮಣ್ಣಿನಪವಾಡ ಪುರುಷರ ಶಕ್ತಿಎಂದು ಮಾತಾಡಿಕೊಳ್ಳುತ್ತಿದ್ದಾರೆ.

ಘಟನೆಯ ಭೀಕರತೆ ಅದೆಷ್ಟಿತ್ತೋ ತಿಳಿದಿಲ್ಲ. ಆದರೆ ದುರಂತವನ್ನು ಇಷ್ಟರಲ್ಲಿಯೇ ಮುಗಿಸಿದ್ದು ಮಾತ್ರ ನಾವು ನಂಬಿಕೊಂಡುಬಂದಿರುವ ಜಾಗದ ಶಕ್ತಿಗಳು ಎನ್ನುತಾರೆ ಸ್ಥಳೀಯರು.ಇನ್ನು ದುರಾದೃಷ್ಟವಶಾತ್ ಅಂದುಪ್ರತಿದಿನದಂತೆ ಇದು ಕೂಡಾ ಬಾಡಿಗೆಎಂದುಕೊಂಡಿದ್ದ ಪ್ರಮಾಣಿಕ ಆಟೋ ಚಾಲಕಪುರುಷೋತ್ತಮ ಅವರಿಗೆ ಮಾತ್ರ ಕಾದಿತ್ತು ಆಶ್ಚರ್ಯ.

ತನ್ನ ರಿಕ್ಷಾದಲ್ಲಿ ಪ್ರಯಾಣಿಕನನ್ನು ಕರೆದುಕೊಂಡು ಚಲಾಯಿಸುತ್ತಿರುವಾಗಲೇ ದುರಂತ ನಡೆದಿದ್ದು ಅವರನ್ನಷ್ಟೇ ಅಲ್ಲದೆ ಅಲ್ಲಿದ್ದವರನ್ನುಒಂದು ಕ್ಷಣ ದಿಗ್ಭ್ರಮೆಗೊಳಿಸಿತ್ತು. ಕರಾವಳಿಯಲ್ಲಿ ಏನು ಆಗುತ್ತೆ ಅಂತ ಭಯ ಇತ್ತೋ ಅದು ಘಟಿಸಿತ್ತು.

ಆದರೆ ಕುಕ್ಕರ್ ಬಾಂಬ್ ಮಂಗಳೂರು ನಗರ ಪ್ರವೇಶಿಸಿ ಯಾವುದೋ ಜನ ನಿಬಿಡ ಪ್ರದೇಶ, ಶಾಲೆಗಳ ಪ್ರದೇಶಗಳಲ್ಲಿ ಶಾಕೀರಕೊಂಡಿ ಹೋಗಿ ಸ್ಪೋಟಿಸಿದ್ದರೆ ಅದರ ಪರಿಣಾಮ ಬಹುಷ ಯಾರು ಕೂಡ ಊಹಿಸಲಸಾಧ್ಯ.

ಅಂತಹ ಸಜೀವ ಸ್ಪೋಟಕಗಳಿಂದ ತುಂಬಿದ್ದ ಟೈಮರ್ ಫಿಕ್ಸ್ ಮಾಡಿದ್ದ ಕುಕ್ಕರ್ ಬಾಂಬ್ ಜೊತೆಯಲ್ಲಿ ಶಾಕಿರನನ್ನು ಕಾರಣಿಕದ ಗರಡಿಕ್ಷೇತ್ರದ ಅವಳಿ ವೀರರು ಆಚೆಗೆ ದಾಟಿ ಬರಲು ಬಿಡದೇ ಮೊದಲೇ ಸ್ಪೋಟಗೊಂಡಿದ್ದು ದೈವ ಸಂಕಲ್ಪವಾಗಿತ್ತು.

ಎರಡು ವರ್ಷಗಳ ಹಿಂದೆಯಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ, ಮುಂದಿನ ದಿನಗಳಲ್ಲಿ ಮಗಳ ಮದುವೆಯನ್ನು ಎದುರುನೋಡುತ್ತಿದ್ದ ಪುರುಷೋತ್ತಮರ ಸ್ಥಿತಿ ಅವರ ಕುಟುಂಬಸ್ಥರ ಮನಸ್ಸನ್ನು ತಲ್ಲಣಗೊಳಿಸಿದೆ.

ಸಂಸಾರಕ್ಕೆ ಆರ್ಥಿಕ ಬೆನ್ನೆಲುಬಾಗಿದ್ದ ಪುರುಷೋತ್ತಮರು ಇದೀಗ ಸ್ಪೋಟಗಳ ಗಾಯಗಳಿಂದ ಆಸ್ಪತ್ರೆಯ ಹಾಸಿಗೆ ಮೇಲೆಮಲಗಿದ್ದಾರೆ.

ಆಟೋ ಚಾಲಕ ಪುರುಷೋತ್ತಮ್ ಅವರು ವೃತ್ತಿಯಲ್ಲಿ ಚಾಲಕರಾಗಿದ್ದರೂ ಅಪಾರ ದೈವಭಕ್ತ. ಮಹಾಕಾಳಿ ಮತ್ತು ಕೊರಗಜ್ಜ ದೈವದಭಕ್ತ ಕೂಡಾ. ದೈವಕ್ಕೆ ಬೂಳ್ಯ ಕೊಡುವ ಸಂಪ್ರದಾಯವನ್ನು ಬಹಳ ಹಿಂದಿನಿಂದಲೂ ಪಾಲಿಸಿಕೊಂಡು ಬರುತ್ತಿದ್ದಾರೆ.

ವಿಶೇಷ ದಿನಗಳು, ಸಂಕ್ರಾಂತಿ, ವಾರ್ಷಿಕ ದೇವರಾದನೆಯ ಸಂದರ್ಭದಲ್ಲಿ ದೈವದ ಚಾಕರಿಯನ್ನು ಮಾಡಿಕೊಂಡು ಬರುತ್ತಿದ್ದಾರೆ.

ದೈವಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆ ಪುರುಷೋತ್ತಮ್ ಜೀವ ಉಳಿಸಿದೆ. ಇವರು ದುರಂತದಲ್ಲಿ ಪಾರಾಗಲು ಉಜ್ಜೋಡಿಯ ಮಹಾಕಾಳಿಕೊರಗಜ್ಜ ದೈವಗಳೇ ಕಾರಣ ಅಂತಪತ್ನಿ ಚಿತ್ರಾಕ್ಷಿ ಕಣ್ಣೀರಿಟ್ಟಿದ್ದಾರೆ.


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »