TOP STORIES:

ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ


ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ

ಕರ್ನಾಟಕ ಸರಕಾರ ಧಾರ್ಮಿಕ ದತ್ತಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿನ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ ,ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 2020-21 ಸಾಲಿನ ಅನುದಾನ ಬಿಡುಗಡೆ ಮಾಡಿದೆ.(ಅದೇಶ ಸಂಖ್ಯೆ; ಕಂಇ 38,ಮುಅಬಿ 2020)
ಇದು ಸ್ವಾಗತಾರ್ಹ.ಒಂದೂರಿನ ಧಾರ್ಮಿಕ ಸ್ಥಳಗಳು ಅಭಿವೃದ್ಧಿಯಾದಲ್ಲಿ ಅದು ಊರಿನ ಪ್ರಗತಿಯ ಸಂಕೇತವೆ ಸರಿ.ಆದರೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋಟಿ ಚೆನ್ನಯರನ್ನು ಆರಾಧನೆ ಮಾಡುವ ಗರೋಡಿಗಳ ಸಂಖ್ಯೆ ದೊಡ್ಡದಾಗಿದ್ದು ಇದರಲ್ಲಿ ಅನೇಕ ಗರೋಡಿಗಳು ಅಜೀರ್ಣಾವಸ್ಥೆಯಲ್ಲಿದೆ.ಸರ್ಕಾರದ ಈ ವರ್ಷದ ಅನುದಾನ ಪಟ್ಟಿಯಲ್ಲಿ ಮೂಡಬಿದ್ರೆ ಭಾಗದ ಕೇವಲ ಒಂದು ಗರೋಡಿಗೆ ಐದು ಲಕ್ಷ ರೂಪಾಯಿ ಅನುದಾನ ಘೋಷಿಸಿದ್ದು ಬಿಟ್ಟರೆ ಬೇರೆ ಯಾವ ಗರೋಡಿಗೂ ಏನೂ ಇಲ್ಲ.ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರದೇ ಇರುವ ಇತರ ದೈವಸ್ಥಾನ,ಮಠ,ಮಂದಿರಗಳಿಗೆ ಅನುದಾನ ನೀಡಬಹುದಾದರೆ ಗರೋಡಿಯ ನಿರ್ಲಕ್ಷ್ಯ ಯಾಕೆ..? 436 ಧಾರ್ಮಿಕ ಸ್ಥಳಗಳಿಗೆ 800 ಲಕ್ಷ ನೀಡಿರುವುದಕ್ಕೆ ಅಕ್ಷೇಪವಲ್ಲ.ಇದರಲ್ಲಿ ಗರೋಡಿ ಮಾತ್ರ ನಿಮಗೆ ಹೊರತಾಯಿತೆ..?
ಗರೋಡಿ ಈ ಭಾಗದ ಜನರ ನಂಬಿಕೆ ಮತ್ತು ಆರಾಧನೆಯ ಪ್ರತೀಕ.ಈ ಕ್ಷೇತ್ರಕ್ಕೆ ಮಹತ್ವಪೂರ್ಣ ಹಿನ್ನೆಲೆಯಿದೆ.ಯಾವುದೇ ರಾಜಕೀಯ ಪಕ್ಷವಾಗಲಿ,ಜನಪ್ರತಿನಿಧಿಗಳಾಗಲಿ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೋಟಿ ಚೆನ್ನಯರು,ಹಾಗೂ ಬಿಲ್ಲವ ಸಮಾಜದ ಕುರಿತು ಉಲ್ಲೇಖ ಮಾಡಿ ವೋಟ್‌ಬ್ಯಾಂಕ್‌ಗೋಸ್ಕರ ನಡೆಯುವ ಗಿಮಿಕ್‌ಗಳು ಇನ್ನಾದರೂ ನಿಲ್ಲಬೇಕು.ಸಾಮರಸ್ಯ ಮತ್ತು ಸತ್ಯದ ಪ್ರತೀಕವಾದ ಎಲ್ಲಾ ಗರೋಡಿಗಳ ಅಭಿವೃದ್ಧಿಗೆ ಮತ್ತು ವಾರ್ಷಿಕ ಆರಾಧನ ಕಾರ್ಯಕ್ರಮಗಳಿಗೆ ಅನುದಾನ ಘೋಷಿಸಬೇಕು‌.ಮತ್ತು ಯಾವ ಗರೋಡಿಗಳ ಸ್ಥಳದ ಕುರಿತಾಗಿ ತಕರಾರುಗಳಿದೆಯೋ ಅದೆಲ್ಲದಕ್ಕೂ ಸಂಬಂಧಿಸಿ ಗ್ರಾಮದ ಹತ್ತು ಸಮಸ್ತರ ಆಡಳಿತ ಮಂಡಳಿಯ ತೀರ್ಮಾನಕ್ಕೆ ಆದ್ಯತೆಯ ನಿಯಮಗಳನ್ನು ರೂಪಿಸಬೇಕು.ಈಗ ಧಾರ್ಮಿಕ ಮಂತ್ರಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗರೋಡಿಯ ಹಿನ್ನೆಲೆ ,ಅಲ್ಲಿನ ಅದಾಯ ಪರಿಸ್ಥಿತಿ,ಅಜೀರ್ಣಾವಸ್ಥೆ ,ಸ್ವಂತ ಸ್ಥಳದ ಸಮಸ್ಯೆ ಇವೆಲ್ಲವೂ ಖುದ್ದು ತಿಳಿದಿದ್ದು ಅದರೂ ಸರ್ಕಾರ ಈ ಮಟ್ಟದಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ.ಯಾವುದೇ ಸರ್ಕಾರವಾಗಲಿ ಪುಣ್ಯಪುರುಷರು ನೆಲೆಸಿದ ಗರೋಡಿಗೆ ಅನುದಾನವನ್ನು ನೀಡಲೇ ಬೇಕೆಂಬುದು ನಮ್ಮ ಒತ್ತಾಯವಾಗಿದೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ (ರಿ)


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »