TOP STORIES:

ತುಳು ಸತ್ಯ ಅನಾವರಣದ ಮಹಾಶಕ್ತಿ ಡಾ. ವೆಂಕಟರಾಜ ಪುಣಿಂಚಿತ್ತಾಯ!


ತುಳುವರಿಗೆ ಕುವೆಂಪು, ದ. ರಾ. ಬೇಂದ್ರೆ, ಮಾಸ್ತಿ ಇಂತಹ ಕನ್ನಡ ಕವಿಗಳ ಹೆಸರು ಚಿರಪರಿಚಿತ. ಆಗಾಗ ಅವರ ಕವಿತೆಗಳನ್ನು, ಸಾಹಿತ್ಯಗಳನ್ನು ಓದಿ ಖುಷಿ ಪಡುತ್ತೇವೆ. ಅದರೆ ತುಳು ಕವಿಗಳ ಬಗ್ಗೆ ಕೇಳಿದರೆ ಮಾತ್ರ ಯಾಕೋ ಮುಖ ಮುಖ ನೋಡುತ್ತೇವೆ.

ಯಾರೊಬ್ಬರ ಪರಿಚಯವೂ ನಮಗಿಲ್ಲ. ಅವರ ಬರಹಗಳು ಕವಿತೆಗಳನ್ನಂತೂ ನೋಡಿಯೇ ಇರಲಿಕ್ಕಿಲ್ಲ. ಅನೇಕ ಕವಿಗಳು ಅಥವಾ ಸಾಹಿತಿಗಳು ತುಳು ಭಾಷೆಯಲ್ಲಿ ತುಳು ಭಾಷೆಗಾಗಿ ಅನರ್ಘ್ಯ ಸೇವೆ ಸಲ್ಲಿಸಿದ್ದಾರೆ. ಅಂಥವರಲ್ಲೇ ಒಬ್ಬರು ಡಾ. ವೆಂಕಟರಾಜ ಪುಣಿಚಿತ್ತಾಯ!

ಪುಣಿಚಿತ್ತಾಯರು ಸಾಹಿತಿ ಮಾತ್ರವಲ್ಲ ಸಂಶೋಧಕರು. ತುಳು ಸಾಹಿತ್ಯ ಸಂಶೋಧನೆಯಲ್ಲಿ ಅಗಾಧ ಸಾಧನೆ ಮಾಡಿರುವ ಪುಣಿಂಚಿತ್ತಾಯರು ತುಳುವಿನಲ್ಲಿ ಶಿಷ್ಟ ಸಾಹಿತ್ಯ ಪರಂಪರೆಯೇ ಇರಲಿಲ್ಲ ಎಂಬ ವಾದವನ್ನು ಅಲ್ಲಗಳೆದು 4 ಅತಿ ಪ್ರಾಚೀನ ತಾಡವಾಲೆ ಗ್ರಂಥಗಳನ್ನು ಪತ್ತೆಹಚ್ಚಿ ಅವುಗಳನ್ನು ಕನ್ನಡಕ್ಕೆ ಲಿಪ್ಯಂತರಗೊಳಿಸಿ ವಿಸ್ತಾರವಾದ ಪೀಠಿಕೆ, ಅಡಿಟಿಪ್ಪಣಿ, ಅರ್ಥ ಕೋಶಗಳೊಂದಿಗೆ ಸಂಪಾದಿಸುವ ಮೂಲಕ ತುಳು ಭಾಷೆಗೆ ಭಾರತದ ಇತರ 20 ಭಾಷೆಗಳ ಸಾಲಿನಲ್ಲಿ ಸಮಾನ ಸ್ಥಾನವನ್ನು ದೊರಕಿಸಿಕೊಟ್ಟ ಶ್ರೇಯಸ್ಸು ಹೊಂದಿದ್ದಾರೆ. ಶ್ರೀ ಭಾಗವತೊ, ಕಾವೇರಿ, ದೇವಿ ಮಹಾತ್ಮೆ, ತುಳು ಮಹಾಭಾರತೋ ಈ ಪ್ರಾಚೀನ ತುಳು ಗ್ರಂಥಗಳಾಗಿವೆ. ಹೆಂಗಸರ ಬಾಯಿಯಿಂದ ಕೇಳಿದ ತುಳು ಹಾಡುಗಳ ಬೆನ್ನು ಹತ್ತಿ ಹೋಗಿ ತುಳುವಿಗೂ ಲಿಪಿ ಇದೆ ಎಂದು ತೋರಿಸಿದ ಡಾ. ವೆಂಕಟರಾಜ ಪುಣಿಂಚಿತ್ತಾಯರ ಸಾಧನೆ ತುಳುನಾಡು ಯಾವತ್ತೂ ಮರೆಯಲಾಗದ್ದು.

ಎಲ್ಲ ದ್ರಾವಿಡ ಭಾಷೆಗಳಂತೆ ಸಂಶೋಧನೆಯ ಶಾಸ್ತ್ರೀಯ ಚೌಕಟ್ಟಿನಲ್ಲಿ ತುಳುವಿನ ಬಗ್ಗೆ ಮೊದಲು ಆಸಕ್ತಿ ತೋರಿಸಿದ್ದು ಇಂಗ್ಲಿಷರು. ಆದರೆ, ತುಳುವಿನ ಮೂಲದ ಜಾಡು ಹುಡುಕಿ ಹೊರಟವರು ಪುಣಿಂಚಿತ್ತಾಯರು.

ಅವರನ್ನು ಸಂಶೋಧಕರನ್ನಾಗಿಸಿದ್ದು ಹೊರಗಿನದ್ದಲ್ಲ, ಒಳಗಿನ ಒತ್ತಡ. ಗದ್ದೆಯಲ್ಲಿ ಕಾಯಕ ನಡೆಸುತ್ತಿದ್ದ ಹತ್ತಾರು ಹೆಂಗಸರ ಬಾಯಿಯಿಂದ ಕೇಳಿದ ತುಳು ಹಾಡುಗಳು ಅವರಲ್ಲಿ ಮೂಡಿಸಿದ ಆಸಕ್ತಿ ‘ಶ್ರೀ ಭಾಗವತೋ’ದಂಥ ಪ್ರಾಚೀನ ತುಳು ಕಾವ್ಯದ ಹುಡುಕಾಟ ಸತತ ಸಂಶೋಧನ ಕಾಯಕದ ವರೆಗೆ ತಂದು ನಿಲ್ಲಿಸಿತು.

ಸಂಶೋಧನೆ ಸ್ವಭಾವವನ್ನು ಮೂಲಭೂತವಾಗಿಯೇ ಹೊಂದಿದ್ದ ಪುಣಿಂಚಿತ್ತಾಯರನ್ನು ಪಂಚ ದ್ರಾವಿಡ ಭಾಷೆಗಳ ಪೆಕಿ ತುಳುವನ್ನು ಉಳಿದು ಮಿಕ್ಕ 4ಕ್ಕೂ ಲಿಪಿಯಿದೆ. ಹಾಗಿದ್ದರೆ ತುಳುವಿಗೂ ಲಿಪಿ ಇದ್ದಿರಲೇಬೇಕು ಎಂಬ ಜಿಜ್ಞಾಸೆ ಕಾಡುತ್ತಲೇ ಇತ್ತು. ಪುಣಿಂಚಿತ್ತಾಯರು ಒಮ್ಮೆ ಮಧೂರಿನ ಶಿವನಾರಾಯಣ ಸರಳಾಯ ಅವರ ನಿವಾಸಕ್ಕೆ ತೆರಳಿದ್ದ ವೇಳೆ ಮಾತಿನ ನಡುವೆ ಸರಳಾಯರು ತಂದು ತೋರಿದ ತಾಡವಾಲೆ ಗ್ರಂಥವೇ ಹೊಸ ಅಧ್ಯಾಯ ಬರೆಯಿತು. ಆ ಕೃತಿ ತುಳು ಮಹಾಕಾವ್ಯ ‘ಶ್ರೀಭಾಗವತೋ’.

16ನೇ ಶತಮಾನದ ಅಂದಾಜಿನಲ್ಲಿ ಕವಿ ವಿಷ್ಣುತುಂಗ ಈ ಕತಿ ರಚಿಸಿದ್ದರು. ಇದರ ಜಾಡು ಹಿಡಿದು ಹೋದ ವರು ಕೋಯಿಕೋಡ್ ವಿವಿ ಸಂಸ್ಕೃತ ಗ್ರಂಥಾಲಯದಲ್ಲಿ ಅನಾಥವಾಗಿದ್ದ ತುಳು ಕಾವ್ಯ ‘ಕಾವೇರಿ’ಯನ್ನು ಪತ್ತೆ ಹಚ್ಚಿದರು. ನಂತರ ದೇವಿ ಮಹಾತ್ಮೆ, ನಾಟಿ ವೆದ್ಯ ಪದ್ಧತಿಯ ಚರ್ಚೆಗಳಿರುವ ಗ್ರಂಥವೊಂದನ್ನೂ ಹುಡುಕಿದರು.

ತುಳು ಪಾಡ್ದನಗಳನ್ನು ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿದ್ದು ತುಳು ಜಾನಪದ ಲೋಕದಲ್ಲಿ ಅಜರಾಮರರನ್ನಾಗಿಸಿದೆ.

Inputs: Beauty of Tulunadu


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »