TOP STORIES:

ತುಳು ಸತ್ಯ ಅನಾವರಣದ ಮಹಾಶಕ್ತಿ ಡಾ. ವೆಂಕಟರಾಜ ಪುಣಿಂಚಿತ್ತಾಯ!


ತುಳುವರಿಗೆ ಕುವೆಂಪು, ದ. ರಾ. ಬೇಂದ್ರೆ, ಮಾಸ್ತಿ ಇಂತಹ ಕನ್ನಡ ಕವಿಗಳ ಹೆಸರು ಚಿರಪರಿಚಿತ. ಆಗಾಗ ಅವರ ಕವಿತೆಗಳನ್ನು, ಸಾಹಿತ್ಯಗಳನ್ನು ಓದಿ ಖುಷಿ ಪಡುತ್ತೇವೆ. ಅದರೆ ತುಳು ಕವಿಗಳ ಬಗ್ಗೆ ಕೇಳಿದರೆ ಮಾತ್ರ ಯಾಕೋ ಮುಖ ಮುಖ ನೋಡುತ್ತೇವೆ.

ಯಾರೊಬ್ಬರ ಪರಿಚಯವೂ ನಮಗಿಲ್ಲ. ಅವರ ಬರಹಗಳು ಕವಿತೆಗಳನ್ನಂತೂ ನೋಡಿಯೇ ಇರಲಿಕ್ಕಿಲ್ಲ. ಅನೇಕ ಕವಿಗಳು ಅಥವಾ ಸಾಹಿತಿಗಳು ತುಳು ಭಾಷೆಯಲ್ಲಿ ತುಳು ಭಾಷೆಗಾಗಿ ಅನರ್ಘ್ಯ ಸೇವೆ ಸಲ್ಲಿಸಿದ್ದಾರೆ. ಅಂಥವರಲ್ಲೇ ಒಬ್ಬರು ಡಾ. ವೆಂಕಟರಾಜ ಪುಣಿಚಿತ್ತಾಯ!

ಪುಣಿಚಿತ್ತಾಯರು ಸಾಹಿತಿ ಮಾತ್ರವಲ್ಲ ಸಂಶೋಧಕರು. ತುಳು ಸಾಹಿತ್ಯ ಸಂಶೋಧನೆಯಲ್ಲಿ ಅಗಾಧ ಸಾಧನೆ ಮಾಡಿರುವ ಪುಣಿಂಚಿತ್ತಾಯರು ತುಳುವಿನಲ್ಲಿ ಶಿಷ್ಟ ಸಾಹಿತ್ಯ ಪರಂಪರೆಯೇ ಇರಲಿಲ್ಲ ಎಂಬ ವಾದವನ್ನು ಅಲ್ಲಗಳೆದು 4 ಅತಿ ಪ್ರಾಚೀನ ತಾಡವಾಲೆ ಗ್ರಂಥಗಳನ್ನು ಪತ್ತೆಹಚ್ಚಿ ಅವುಗಳನ್ನು ಕನ್ನಡಕ್ಕೆ ಲಿಪ್ಯಂತರಗೊಳಿಸಿ ವಿಸ್ತಾರವಾದ ಪೀಠಿಕೆ, ಅಡಿಟಿಪ್ಪಣಿ, ಅರ್ಥ ಕೋಶಗಳೊಂದಿಗೆ ಸಂಪಾದಿಸುವ ಮೂಲಕ ತುಳು ಭಾಷೆಗೆ ಭಾರತದ ಇತರ 20 ಭಾಷೆಗಳ ಸಾಲಿನಲ್ಲಿ ಸಮಾನ ಸ್ಥಾನವನ್ನು ದೊರಕಿಸಿಕೊಟ್ಟ ಶ್ರೇಯಸ್ಸು ಹೊಂದಿದ್ದಾರೆ. ಶ್ರೀ ಭಾಗವತೊ, ಕಾವೇರಿ, ದೇವಿ ಮಹಾತ್ಮೆ, ತುಳು ಮಹಾಭಾರತೋ ಈ ಪ್ರಾಚೀನ ತುಳು ಗ್ರಂಥಗಳಾಗಿವೆ. ಹೆಂಗಸರ ಬಾಯಿಯಿಂದ ಕೇಳಿದ ತುಳು ಹಾಡುಗಳ ಬೆನ್ನು ಹತ್ತಿ ಹೋಗಿ ತುಳುವಿಗೂ ಲಿಪಿ ಇದೆ ಎಂದು ತೋರಿಸಿದ ಡಾ. ವೆಂಕಟರಾಜ ಪುಣಿಂಚಿತ್ತಾಯರ ಸಾಧನೆ ತುಳುನಾಡು ಯಾವತ್ತೂ ಮರೆಯಲಾಗದ್ದು.

ಎಲ್ಲ ದ್ರಾವಿಡ ಭಾಷೆಗಳಂತೆ ಸಂಶೋಧನೆಯ ಶಾಸ್ತ್ರೀಯ ಚೌಕಟ್ಟಿನಲ್ಲಿ ತುಳುವಿನ ಬಗ್ಗೆ ಮೊದಲು ಆಸಕ್ತಿ ತೋರಿಸಿದ್ದು ಇಂಗ್ಲಿಷರು. ಆದರೆ, ತುಳುವಿನ ಮೂಲದ ಜಾಡು ಹುಡುಕಿ ಹೊರಟವರು ಪುಣಿಂಚಿತ್ತಾಯರು.

ಅವರನ್ನು ಸಂಶೋಧಕರನ್ನಾಗಿಸಿದ್ದು ಹೊರಗಿನದ್ದಲ್ಲ, ಒಳಗಿನ ಒತ್ತಡ. ಗದ್ದೆಯಲ್ಲಿ ಕಾಯಕ ನಡೆಸುತ್ತಿದ್ದ ಹತ್ತಾರು ಹೆಂಗಸರ ಬಾಯಿಯಿಂದ ಕೇಳಿದ ತುಳು ಹಾಡುಗಳು ಅವರಲ್ಲಿ ಮೂಡಿಸಿದ ಆಸಕ್ತಿ ‘ಶ್ರೀ ಭಾಗವತೋ’ದಂಥ ಪ್ರಾಚೀನ ತುಳು ಕಾವ್ಯದ ಹುಡುಕಾಟ ಸತತ ಸಂಶೋಧನ ಕಾಯಕದ ವರೆಗೆ ತಂದು ನಿಲ್ಲಿಸಿತು.

ಸಂಶೋಧನೆ ಸ್ವಭಾವವನ್ನು ಮೂಲಭೂತವಾಗಿಯೇ ಹೊಂದಿದ್ದ ಪುಣಿಂಚಿತ್ತಾಯರನ್ನು ಪಂಚ ದ್ರಾವಿಡ ಭಾಷೆಗಳ ಪೆಕಿ ತುಳುವನ್ನು ಉಳಿದು ಮಿಕ್ಕ 4ಕ್ಕೂ ಲಿಪಿಯಿದೆ. ಹಾಗಿದ್ದರೆ ತುಳುವಿಗೂ ಲಿಪಿ ಇದ್ದಿರಲೇಬೇಕು ಎಂಬ ಜಿಜ್ಞಾಸೆ ಕಾಡುತ್ತಲೇ ಇತ್ತು. ಪುಣಿಂಚಿತ್ತಾಯರು ಒಮ್ಮೆ ಮಧೂರಿನ ಶಿವನಾರಾಯಣ ಸರಳಾಯ ಅವರ ನಿವಾಸಕ್ಕೆ ತೆರಳಿದ್ದ ವೇಳೆ ಮಾತಿನ ನಡುವೆ ಸರಳಾಯರು ತಂದು ತೋರಿದ ತಾಡವಾಲೆ ಗ್ರಂಥವೇ ಹೊಸ ಅಧ್ಯಾಯ ಬರೆಯಿತು. ಆ ಕೃತಿ ತುಳು ಮಹಾಕಾವ್ಯ ‘ಶ್ರೀಭಾಗವತೋ’.

16ನೇ ಶತಮಾನದ ಅಂದಾಜಿನಲ್ಲಿ ಕವಿ ವಿಷ್ಣುತುಂಗ ಈ ಕತಿ ರಚಿಸಿದ್ದರು. ಇದರ ಜಾಡು ಹಿಡಿದು ಹೋದ ವರು ಕೋಯಿಕೋಡ್ ವಿವಿ ಸಂಸ್ಕೃತ ಗ್ರಂಥಾಲಯದಲ್ಲಿ ಅನಾಥವಾಗಿದ್ದ ತುಳು ಕಾವ್ಯ ‘ಕಾವೇರಿ’ಯನ್ನು ಪತ್ತೆ ಹಚ್ಚಿದರು. ನಂತರ ದೇವಿ ಮಹಾತ್ಮೆ, ನಾಟಿ ವೆದ್ಯ ಪದ್ಧತಿಯ ಚರ್ಚೆಗಳಿರುವ ಗ್ರಂಥವೊಂದನ್ನೂ ಹುಡುಕಿದರು.

ತುಳು ಪಾಡ್ದನಗಳನ್ನು ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿದ್ದು ತುಳು ಜಾನಪದ ಲೋಕದಲ್ಲಿ ಅಜರಾಮರರನ್ನಾಗಿಸಿದೆ.

Inputs: Beauty of Tulunadu


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »