TOP STORIES:

ತುಳು ಸತ್ಯ ಅನಾವರಣದ ಮಹಾಶಕ್ತಿ ಡಾ. ವೆಂಕಟರಾಜ ಪುಣಿಂಚಿತ್ತಾಯ!


ತುಳುವರಿಗೆ ಕುವೆಂಪು, ದ. ರಾ. ಬೇಂದ್ರೆ, ಮಾಸ್ತಿ ಇಂತಹ ಕನ್ನಡ ಕವಿಗಳ ಹೆಸರು ಚಿರಪರಿಚಿತ. ಆಗಾಗ ಅವರ ಕವಿತೆಗಳನ್ನು, ಸಾಹಿತ್ಯಗಳನ್ನು ಓದಿ ಖುಷಿ ಪಡುತ್ತೇವೆ. ಅದರೆ ತುಳು ಕವಿಗಳ ಬಗ್ಗೆ ಕೇಳಿದರೆ ಮಾತ್ರ ಯಾಕೋ ಮುಖ ಮುಖ ನೋಡುತ್ತೇವೆ.

ಯಾರೊಬ್ಬರ ಪರಿಚಯವೂ ನಮಗಿಲ್ಲ. ಅವರ ಬರಹಗಳು ಕವಿತೆಗಳನ್ನಂತೂ ನೋಡಿಯೇ ಇರಲಿಕ್ಕಿಲ್ಲ. ಅನೇಕ ಕವಿಗಳು ಅಥವಾ ಸಾಹಿತಿಗಳು ತುಳು ಭಾಷೆಯಲ್ಲಿ ತುಳು ಭಾಷೆಗಾಗಿ ಅನರ್ಘ್ಯ ಸೇವೆ ಸಲ್ಲಿಸಿದ್ದಾರೆ. ಅಂಥವರಲ್ಲೇ ಒಬ್ಬರು ಡಾ. ವೆಂಕಟರಾಜ ಪುಣಿಚಿತ್ತಾಯ!

ಪುಣಿಚಿತ್ತಾಯರು ಸಾಹಿತಿ ಮಾತ್ರವಲ್ಲ ಸಂಶೋಧಕರು. ತುಳು ಸಾಹಿತ್ಯ ಸಂಶೋಧನೆಯಲ್ಲಿ ಅಗಾಧ ಸಾಧನೆ ಮಾಡಿರುವ ಪುಣಿಂಚಿತ್ತಾಯರು ತುಳುವಿನಲ್ಲಿ ಶಿಷ್ಟ ಸಾಹಿತ್ಯ ಪರಂಪರೆಯೇ ಇರಲಿಲ್ಲ ಎಂಬ ವಾದವನ್ನು ಅಲ್ಲಗಳೆದು 4 ಅತಿ ಪ್ರಾಚೀನ ತಾಡವಾಲೆ ಗ್ರಂಥಗಳನ್ನು ಪತ್ತೆಹಚ್ಚಿ ಅವುಗಳನ್ನು ಕನ್ನಡಕ್ಕೆ ಲಿಪ್ಯಂತರಗೊಳಿಸಿ ವಿಸ್ತಾರವಾದ ಪೀಠಿಕೆ, ಅಡಿಟಿಪ್ಪಣಿ, ಅರ್ಥ ಕೋಶಗಳೊಂದಿಗೆ ಸಂಪಾದಿಸುವ ಮೂಲಕ ತುಳು ಭಾಷೆಗೆ ಭಾರತದ ಇತರ 20 ಭಾಷೆಗಳ ಸಾಲಿನಲ್ಲಿ ಸಮಾನ ಸ್ಥಾನವನ್ನು ದೊರಕಿಸಿಕೊಟ್ಟ ಶ್ರೇಯಸ್ಸು ಹೊಂದಿದ್ದಾರೆ. ಶ್ರೀ ಭಾಗವತೊ, ಕಾವೇರಿ, ದೇವಿ ಮಹಾತ್ಮೆ, ತುಳು ಮಹಾಭಾರತೋ ಈ ಪ್ರಾಚೀನ ತುಳು ಗ್ರಂಥಗಳಾಗಿವೆ. ಹೆಂಗಸರ ಬಾಯಿಯಿಂದ ಕೇಳಿದ ತುಳು ಹಾಡುಗಳ ಬೆನ್ನು ಹತ್ತಿ ಹೋಗಿ ತುಳುವಿಗೂ ಲಿಪಿ ಇದೆ ಎಂದು ತೋರಿಸಿದ ಡಾ. ವೆಂಕಟರಾಜ ಪುಣಿಂಚಿತ್ತಾಯರ ಸಾಧನೆ ತುಳುನಾಡು ಯಾವತ್ತೂ ಮರೆಯಲಾಗದ್ದು.

ಎಲ್ಲ ದ್ರಾವಿಡ ಭಾಷೆಗಳಂತೆ ಸಂಶೋಧನೆಯ ಶಾಸ್ತ್ರೀಯ ಚೌಕಟ್ಟಿನಲ್ಲಿ ತುಳುವಿನ ಬಗ್ಗೆ ಮೊದಲು ಆಸಕ್ತಿ ತೋರಿಸಿದ್ದು ಇಂಗ್ಲಿಷರು. ಆದರೆ, ತುಳುವಿನ ಮೂಲದ ಜಾಡು ಹುಡುಕಿ ಹೊರಟವರು ಪುಣಿಂಚಿತ್ತಾಯರು.

ಅವರನ್ನು ಸಂಶೋಧಕರನ್ನಾಗಿಸಿದ್ದು ಹೊರಗಿನದ್ದಲ್ಲ, ಒಳಗಿನ ಒತ್ತಡ. ಗದ್ದೆಯಲ್ಲಿ ಕಾಯಕ ನಡೆಸುತ್ತಿದ್ದ ಹತ್ತಾರು ಹೆಂಗಸರ ಬಾಯಿಯಿಂದ ಕೇಳಿದ ತುಳು ಹಾಡುಗಳು ಅವರಲ್ಲಿ ಮೂಡಿಸಿದ ಆಸಕ್ತಿ ‘ಶ್ರೀ ಭಾಗವತೋ’ದಂಥ ಪ್ರಾಚೀನ ತುಳು ಕಾವ್ಯದ ಹುಡುಕಾಟ ಸತತ ಸಂಶೋಧನ ಕಾಯಕದ ವರೆಗೆ ತಂದು ನಿಲ್ಲಿಸಿತು.

ಸಂಶೋಧನೆ ಸ್ವಭಾವವನ್ನು ಮೂಲಭೂತವಾಗಿಯೇ ಹೊಂದಿದ್ದ ಪುಣಿಂಚಿತ್ತಾಯರನ್ನು ಪಂಚ ದ್ರಾವಿಡ ಭಾಷೆಗಳ ಪೆಕಿ ತುಳುವನ್ನು ಉಳಿದು ಮಿಕ್ಕ 4ಕ್ಕೂ ಲಿಪಿಯಿದೆ. ಹಾಗಿದ್ದರೆ ತುಳುವಿಗೂ ಲಿಪಿ ಇದ್ದಿರಲೇಬೇಕು ಎಂಬ ಜಿಜ್ಞಾಸೆ ಕಾಡುತ್ತಲೇ ಇತ್ತು. ಪುಣಿಂಚಿತ್ತಾಯರು ಒಮ್ಮೆ ಮಧೂರಿನ ಶಿವನಾರಾಯಣ ಸರಳಾಯ ಅವರ ನಿವಾಸಕ್ಕೆ ತೆರಳಿದ್ದ ವೇಳೆ ಮಾತಿನ ನಡುವೆ ಸರಳಾಯರು ತಂದು ತೋರಿದ ತಾಡವಾಲೆ ಗ್ರಂಥವೇ ಹೊಸ ಅಧ್ಯಾಯ ಬರೆಯಿತು. ಆ ಕೃತಿ ತುಳು ಮಹಾಕಾವ್ಯ ‘ಶ್ರೀಭಾಗವತೋ’.

16ನೇ ಶತಮಾನದ ಅಂದಾಜಿನಲ್ಲಿ ಕವಿ ವಿಷ್ಣುತುಂಗ ಈ ಕತಿ ರಚಿಸಿದ್ದರು. ಇದರ ಜಾಡು ಹಿಡಿದು ಹೋದ ವರು ಕೋಯಿಕೋಡ್ ವಿವಿ ಸಂಸ್ಕೃತ ಗ್ರಂಥಾಲಯದಲ್ಲಿ ಅನಾಥವಾಗಿದ್ದ ತುಳು ಕಾವ್ಯ ‘ಕಾವೇರಿ’ಯನ್ನು ಪತ್ತೆ ಹಚ್ಚಿದರು. ನಂತರ ದೇವಿ ಮಹಾತ್ಮೆ, ನಾಟಿ ವೆದ್ಯ ಪದ್ಧತಿಯ ಚರ್ಚೆಗಳಿರುವ ಗ್ರಂಥವೊಂದನ್ನೂ ಹುಡುಕಿದರು.

ತುಳು ಪಾಡ್ದನಗಳನ್ನು ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿದ್ದು ತುಳು ಜಾನಪದ ಲೋಕದಲ್ಲಿ ಅಜರಾಮರರನ್ನಾಗಿಸಿದೆ.

Inputs: Beauty of Tulunadu


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »