TOP STORIES:

ದಿನನಿತ್ಯ ದಾಳಿಂಬೆ ತಿಂದರೆ ಹೀಗೆ ಆಗುವುದು ಕಂಡಿತ…


ನಾವು ದಿನನಿತ್ಯ ಉಪಯೋಗಿಸುವ ಹಣ್ಣುಹಂಪಲುಗಳಲ್ಲಿ ದಾಳಿಂಬೆ ವಿಭಿನ್ನ ಮತ್ತು ವಿಶಿಷ್ಟ ಹಣ್ಣಾಗಿದ್ದು ನಾಲಿಗೆ ರುಚಿ ಮಾತ್ರವಲ್ಲದೆ ದೇಹಕ್ಕೆ ಶಕ್ತಿಕೊಡುವ ಗುಣವನ್ನು ಹೊಂದಿದೆ ಎಂದರೆ ತಪ್ಪಾಗಲಾರದು.

ಇದನ್ನು ಹಣ್ಣಿನ ರೂಪದ ತಿನಿಸಾಗಿ ಮಾತ್ರವಲ್ಲದೆ, ಸಂಬಾರ ಪದಾರ್ಥಗಳಲ್ಲಿಯೂ ಉಪಯೋಗಿಸಲಾಗುತ್ತದೆ. ದಾಳಿಂಬೆಯು ಹಲವಷ್ಟು ಔಷಧೀಯ ಗುಣಗಳನ್ನು ಹೊಂದಿದ್ದು, ಸೇವನೆಗೆ ಉಪಯುಕ್ತವಾಗಿದೆ. ಮಾರುಕಟ್ಟೆಯಲ್ಲಿ ದೊರೆಯುವ ದಾಳಿಂಬೆಗೆ ಬಹಳಷ್ಟು ಬೇಡಿಕೆಯಿದ್ದು, ಇದನ್ನು ಎಲ್ಲ ಕಡೆಗಳಲ್ಲಿ ಬೆಳೆಯುವುದು ಸಾಧ್ಯವಾಗದ ಮಾತು. ಸಮಶೀತೋಷ್ಣ ವಾತಾವರಣ ಶೀತವಲಯಗಳಲ್ಲಿ ಇದು ಚೆನ್ನಾಗಿ ಬೆಳೆಯುತ್ತದೆ. ಹಿಮಾಚಲಪ್ರದೇಶ, ಜಮ್ಮು ಇಲ್ಲಿನ ಕಾಡುಗಳಲ್ಲಿ ಕಾಡು ದಾಳಿಂಬೆಗಳು ಹೆಚ್ಚಾಗಿ ಕಂಡು ಬರುತ್ತವೆ.

ಈಗಾಗಲೇ ಹಲವು ರೈತರು ದಾಳಿಂಬೆ ಬೆಳೆದು ಬದುಕು ಕಂಡುಕೊಂಡಿದ್ದಾರೆ. ಇತ್ತೀಚೆಗೆ ಹಲವು ತಳಿಗಳು ಬಂದಿವೆ. ಬಹಳಷ್ಟು ಕಡೆಗಳಲ್ಲಿ ತಮ್ಮ ಮನೆಯ ಹಿತ್ತಲಲ್ಲಿ ಗಿಡನೆಟ್ಟು ಬೆಳೆಸುವುದು ಕೂಡ ಕಾಣಸಿಗುತ್ತದೆ. ದಾಳಿಂಬೆ ವಾಣಿಜ್ಯಿಕವಾಗಿ ಆದಾಯ ತರುವುದನ್ನು ಆಚೆಗಿಟ್ಟು ಆರೋಗ್ಯದ ದೃಷ್ಠಿಯಿಂದ ಸಿಗುವ ಲಾಭವನ್ನು ಅರಿತರೆ ಮನೆ ಪಕ್ಕದಲ್ಲೊಂದು ಗಿಡನೆಡೋಣ ಎಂದೆನಿಸದಿರದು. ಕಾರಣ ಇದರ ಹಣ್ಣು ಮಾತ್ರವಲ್ಲದೆ, ಮರದ ಬೇರಿನಿಂದ ಹಿಡಿದು ತೊಗಟೆ, ಹೂ, ಬೀಜ ಎಲ್ಲವೂ ಔಷಧೀಯ ಗುಣಗಳಿಂದ ಕೂಡಿದ್ದು ಬಹು ಉಪಯುಕ್ತವಾಗಿವೆ.

ದಾಳಿಂಬೆ ರಸವನ್ನು ಸೇವಿಸುವುದರಿಂದ ಅಮಶಂಕೆಯನ್ನು ತಡೆಯಬಹುದಾಗಿದೆ. ಗಿಡದ ತೊಗಟೆಯ ಕಷಾಯಕ್ಕೆ ಚಿಟಿಕೆ ಉಪ್ಪು ಬೆರೆಸಿ ಮುಕ್ಕಳಿಸಿದರೆ ಹಲ್ಲು ನೋವು ಕಡಿಮೆಯಾಗುತ್ತದೆ. ಇದರ ಚಿಗುರು ಎಲೆಗಳನ್ನು ಬಾಯಲ್ಲಿ ಹಾಕಿಕೊಂಡು ಅಗೆಯುವುದರಿಂದ ವಸಡಿನಿಂದ ರಕ್ತ ಬರುವುದನ್ನು ತಡೆಯಲು ಸಾಧ್ಯವಿದೆ. ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಚೆನ್ನಾಗಿ ಪುಡಿ ಮಾಡಿ ಅದರೊಂದಿಗೆ ಸ್ವಲ್ಪ ಕರಿಮೆಣಸು, ಉಪ್ಪು ಬೆರೆಸಿ ನುಣ್ಣಗೆ ಪುಡಿ ಮಾಡಿ ಆ ಪುಡಿಯಿಂದ ಹಲ್ಲು ಉಜ್ಜಿದರೆ ಹಲ್ಲು ಹೊಳಪು ಬರುತ್ತದೆ. ಜತೆಗೆ ದೃಢತ್ವ ಹೊಂದುತ್ತದೆ.

ದಾಳಿಂಬೆ ಹಣ್ಣು ಸೇವಿಸುವುದರಿಂದ ವಿಷಮ ಶೀತ ಜ್ವರ, ಅಸ್ತಮಾ, ಮಾನಸಿಕ ಒತ್ತಡ ಹಾಗೂ ನರಗಳ ದೌರ್ಬಲ್ಯದಿಂದ ಉಂಟಾಗುವ ತಲೆನೋವು ಕಡಿಮೆಯಾಗುತ್ತದೆ. ಇದು ಪಿತ್ತಶಮನ ಗುಣ ಹೊಂದಿದ್ದು, ಬಾಯಾರಿಕೆಯನ್ನು ನೀಗಿಸುವಲ್ಲಿ ಮತ್ತು ದೇಹಕ್ಕೆ ಶಕ್ತಿ ನೀಡುವಲ್ಲಿ ಸಹಕಾರಿಯಾಗಿದೆ. ರಸದೊಂದಿಗೆ ಅಷ್ಟೇ ಪ್ರಮಾಣದ ಜೇನು ಬೆರೆಸಿ ಸೇವಿಸಿದ್ದೇ ಆದಲ್ಲಿ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಬೇಸಿಗೆಯಲ್ಲಿ ಆಗುವ ಬಾಯಾರಿಕೆ ತಡೆಗೆ ದಾಳಿಂಬೆ ರಸದಿಂದ ಮಾಡಿದ ಪಾನೀಯ ಉತ್ತಮವಾಗಿದ್ದು, ಬಾಯಾರಿಕೆ ನೀಗಿಸಿ ದೇಹವನ್ನು ತಂಪಾಗಿಡುವಲ್ಲಿ ಸಹಾಯ ಮಾಡುತ್ತದೆ.

ದಾಳಿಂಬೆಯ ಬೀಜದಲ್ಲಿ ಜಠರೋತ್ತೇಜಕ ಗುಣವಿದ್ದು, ಬೀಜದ ಪುಡಿಯೊಂದಿಗೆ ಸ್ವಲ್ಪ ಜೇನು ಸೇರಿಸಿ ಸೇವಿಸಿದರೆ ಅತಿಸಾರವನ್ನು ನಿಯಂತ್ರಿಸಬಹುದು. ಒಂದು ಚಮಚದಷ್ಟು ಹಣ್ಣಿನ ಬೀಜಗಳನ್ನು ತೆಗೆದುಕೊಂಡು ಚೆನ್ನಾಗಿ ಅರೆದು ನಂತರ ಒಂದು ಲೋಟದ ತುಂಬಾ ಹುರುಳಿ ಕಾಳಿನ ಸೂಪ್ ನ್ನು ತೆಗೆದುಕೊಂಡು ಎರಡನ್ನು ಬೆರೆಸಿ ಕುಡಿಯುವುದರಿಂದ ಮೂತ್ರಕೋಶದ ಮತ್ತು ಮೂತ್ರ ಜನಕಾಂಗಗಳಲ್ಲಿ ಸಿಕ್ಕಿ ಹಾಕಿಕೊಂಡ ಕಲ್ಲುಗಳು ಕರಗುತ್ತವೆ ಎನ್ನಲಾಗಿದೆ.

ಇನ್ನು ದಾಳಿಂಬೆ ಹಣ್ಣಿನ ಒಳಗಡೆ ರಸ ತುಂಬಿದ ಕೆಂಪು ಗುಲಾಬಿ ಹಳದಿ ಬಿಳಿಯ ಸಿಹಿ ಒಗರು ಹುಳಿ ರುಚಿಯ ತಿರುಳಿನ ಬೀಜಗಳನ್ನು ಒಣಗಿಸಿ ಅನಾರ್ ದಾನ್ ತಯಾರಿಸುತ್ತಾರೆ ಇದು ರುಚಿಕಾರಕ ಗುಣ ಹೊಂದಿದ್ದು, ಉತ್ತರ ಭಾರತದಲ್ಲಿ ಹೆಚ್ಚಾಗಿ ಅಡುಗೆಗಳಿಗೆ ಹುಳಿಯ ರುಚಿ ಕೊಡಲು ಬಳಸುತ್ತಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ದಾಳಿಂಬೆ ಆರೋಗ್ಯದ ದೃಷ್ಠಿಯಿಂದ ಹಲವು ರೀತಿಯಲ್ಲಿ ಉಪಕಾರಿಯಾಗಿದ್ದು, ಅದನ್ನು ಸೇವಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಜಾಣತನವಾಗಿದೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »