TOP STORIES:

ದಿನನಿತ್ಯ ದಾಳಿಂಬೆ ತಿಂದರೆ ಹೀಗೆ ಆಗುವುದು ಕಂಡಿತ…


ನಾವು ದಿನನಿತ್ಯ ಉಪಯೋಗಿಸುವ ಹಣ್ಣುಹಂಪಲುಗಳಲ್ಲಿ ದಾಳಿಂಬೆ ವಿಭಿನ್ನ ಮತ್ತು ವಿಶಿಷ್ಟ ಹಣ್ಣಾಗಿದ್ದು ನಾಲಿಗೆ ರುಚಿ ಮಾತ್ರವಲ್ಲದೆ ದೇಹಕ್ಕೆ ಶಕ್ತಿಕೊಡುವ ಗುಣವನ್ನು ಹೊಂದಿದೆ ಎಂದರೆ ತಪ್ಪಾಗಲಾರದು.

ಇದನ್ನು ಹಣ್ಣಿನ ರೂಪದ ತಿನಿಸಾಗಿ ಮಾತ್ರವಲ್ಲದೆ, ಸಂಬಾರ ಪದಾರ್ಥಗಳಲ್ಲಿಯೂ ಉಪಯೋಗಿಸಲಾಗುತ್ತದೆ. ದಾಳಿಂಬೆಯು ಹಲವಷ್ಟು ಔಷಧೀಯ ಗುಣಗಳನ್ನು ಹೊಂದಿದ್ದು, ಸೇವನೆಗೆ ಉಪಯುಕ್ತವಾಗಿದೆ. ಮಾರುಕಟ್ಟೆಯಲ್ಲಿ ದೊರೆಯುವ ದಾಳಿಂಬೆಗೆ ಬಹಳಷ್ಟು ಬೇಡಿಕೆಯಿದ್ದು, ಇದನ್ನು ಎಲ್ಲ ಕಡೆಗಳಲ್ಲಿ ಬೆಳೆಯುವುದು ಸಾಧ್ಯವಾಗದ ಮಾತು. ಸಮಶೀತೋಷ್ಣ ವಾತಾವರಣ ಶೀತವಲಯಗಳಲ್ಲಿ ಇದು ಚೆನ್ನಾಗಿ ಬೆಳೆಯುತ್ತದೆ. ಹಿಮಾಚಲಪ್ರದೇಶ, ಜಮ್ಮು ಇಲ್ಲಿನ ಕಾಡುಗಳಲ್ಲಿ ಕಾಡು ದಾಳಿಂಬೆಗಳು ಹೆಚ್ಚಾಗಿ ಕಂಡು ಬರುತ್ತವೆ.

ಈಗಾಗಲೇ ಹಲವು ರೈತರು ದಾಳಿಂಬೆ ಬೆಳೆದು ಬದುಕು ಕಂಡುಕೊಂಡಿದ್ದಾರೆ. ಇತ್ತೀಚೆಗೆ ಹಲವು ತಳಿಗಳು ಬಂದಿವೆ. ಬಹಳಷ್ಟು ಕಡೆಗಳಲ್ಲಿ ತಮ್ಮ ಮನೆಯ ಹಿತ್ತಲಲ್ಲಿ ಗಿಡನೆಟ್ಟು ಬೆಳೆಸುವುದು ಕೂಡ ಕಾಣಸಿಗುತ್ತದೆ. ದಾಳಿಂಬೆ ವಾಣಿಜ್ಯಿಕವಾಗಿ ಆದಾಯ ತರುವುದನ್ನು ಆಚೆಗಿಟ್ಟು ಆರೋಗ್ಯದ ದೃಷ್ಠಿಯಿಂದ ಸಿಗುವ ಲಾಭವನ್ನು ಅರಿತರೆ ಮನೆ ಪಕ್ಕದಲ್ಲೊಂದು ಗಿಡನೆಡೋಣ ಎಂದೆನಿಸದಿರದು. ಕಾರಣ ಇದರ ಹಣ್ಣು ಮಾತ್ರವಲ್ಲದೆ, ಮರದ ಬೇರಿನಿಂದ ಹಿಡಿದು ತೊಗಟೆ, ಹೂ, ಬೀಜ ಎಲ್ಲವೂ ಔಷಧೀಯ ಗುಣಗಳಿಂದ ಕೂಡಿದ್ದು ಬಹು ಉಪಯುಕ್ತವಾಗಿವೆ.

ದಾಳಿಂಬೆ ರಸವನ್ನು ಸೇವಿಸುವುದರಿಂದ ಅಮಶಂಕೆಯನ್ನು ತಡೆಯಬಹುದಾಗಿದೆ. ಗಿಡದ ತೊಗಟೆಯ ಕಷಾಯಕ್ಕೆ ಚಿಟಿಕೆ ಉಪ್ಪು ಬೆರೆಸಿ ಮುಕ್ಕಳಿಸಿದರೆ ಹಲ್ಲು ನೋವು ಕಡಿಮೆಯಾಗುತ್ತದೆ. ಇದರ ಚಿಗುರು ಎಲೆಗಳನ್ನು ಬಾಯಲ್ಲಿ ಹಾಕಿಕೊಂಡು ಅಗೆಯುವುದರಿಂದ ವಸಡಿನಿಂದ ರಕ್ತ ಬರುವುದನ್ನು ತಡೆಯಲು ಸಾಧ್ಯವಿದೆ. ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಚೆನ್ನಾಗಿ ಪುಡಿ ಮಾಡಿ ಅದರೊಂದಿಗೆ ಸ್ವಲ್ಪ ಕರಿಮೆಣಸು, ಉಪ್ಪು ಬೆರೆಸಿ ನುಣ್ಣಗೆ ಪುಡಿ ಮಾಡಿ ಆ ಪುಡಿಯಿಂದ ಹಲ್ಲು ಉಜ್ಜಿದರೆ ಹಲ್ಲು ಹೊಳಪು ಬರುತ್ತದೆ. ಜತೆಗೆ ದೃಢತ್ವ ಹೊಂದುತ್ತದೆ.

ದಾಳಿಂಬೆ ಹಣ್ಣು ಸೇವಿಸುವುದರಿಂದ ವಿಷಮ ಶೀತ ಜ್ವರ, ಅಸ್ತಮಾ, ಮಾನಸಿಕ ಒತ್ತಡ ಹಾಗೂ ನರಗಳ ದೌರ್ಬಲ್ಯದಿಂದ ಉಂಟಾಗುವ ತಲೆನೋವು ಕಡಿಮೆಯಾಗುತ್ತದೆ. ಇದು ಪಿತ್ತಶಮನ ಗುಣ ಹೊಂದಿದ್ದು, ಬಾಯಾರಿಕೆಯನ್ನು ನೀಗಿಸುವಲ್ಲಿ ಮತ್ತು ದೇಹಕ್ಕೆ ಶಕ್ತಿ ನೀಡುವಲ್ಲಿ ಸಹಕಾರಿಯಾಗಿದೆ. ರಸದೊಂದಿಗೆ ಅಷ್ಟೇ ಪ್ರಮಾಣದ ಜೇನು ಬೆರೆಸಿ ಸೇವಿಸಿದ್ದೇ ಆದಲ್ಲಿ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಬೇಸಿಗೆಯಲ್ಲಿ ಆಗುವ ಬಾಯಾರಿಕೆ ತಡೆಗೆ ದಾಳಿಂಬೆ ರಸದಿಂದ ಮಾಡಿದ ಪಾನೀಯ ಉತ್ತಮವಾಗಿದ್ದು, ಬಾಯಾರಿಕೆ ನೀಗಿಸಿ ದೇಹವನ್ನು ತಂಪಾಗಿಡುವಲ್ಲಿ ಸಹಾಯ ಮಾಡುತ್ತದೆ.

ದಾಳಿಂಬೆಯ ಬೀಜದಲ್ಲಿ ಜಠರೋತ್ತೇಜಕ ಗುಣವಿದ್ದು, ಬೀಜದ ಪುಡಿಯೊಂದಿಗೆ ಸ್ವಲ್ಪ ಜೇನು ಸೇರಿಸಿ ಸೇವಿಸಿದರೆ ಅತಿಸಾರವನ್ನು ನಿಯಂತ್ರಿಸಬಹುದು. ಒಂದು ಚಮಚದಷ್ಟು ಹಣ್ಣಿನ ಬೀಜಗಳನ್ನು ತೆಗೆದುಕೊಂಡು ಚೆನ್ನಾಗಿ ಅರೆದು ನಂತರ ಒಂದು ಲೋಟದ ತುಂಬಾ ಹುರುಳಿ ಕಾಳಿನ ಸೂಪ್ ನ್ನು ತೆಗೆದುಕೊಂಡು ಎರಡನ್ನು ಬೆರೆಸಿ ಕುಡಿಯುವುದರಿಂದ ಮೂತ್ರಕೋಶದ ಮತ್ತು ಮೂತ್ರ ಜನಕಾಂಗಗಳಲ್ಲಿ ಸಿಕ್ಕಿ ಹಾಕಿಕೊಂಡ ಕಲ್ಲುಗಳು ಕರಗುತ್ತವೆ ಎನ್ನಲಾಗಿದೆ.

ಇನ್ನು ದಾಳಿಂಬೆ ಹಣ್ಣಿನ ಒಳಗಡೆ ರಸ ತುಂಬಿದ ಕೆಂಪು ಗುಲಾಬಿ ಹಳದಿ ಬಿಳಿಯ ಸಿಹಿ ಒಗರು ಹುಳಿ ರುಚಿಯ ತಿರುಳಿನ ಬೀಜಗಳನ್ನು ಒಣಗಿಸಿ ಅನಾರ್ ದಾನ್ ತಯಾರಿಸುತ್ತಾರೆ ಇದು ರುಚಿಕಾರಕ ಗುಣ ಹೊಂದಿದ್ದು, ಉತ್ತರ ಭಾರತದಲ್ಲಿ ಹೆಚ್ಚಾಗಿ ಅಡುಗೆಗಳಿಗೆ ಹುಳಿಯ ರುಚಿ ಕೊಡಲು ಬಳಸುತ್ತಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ದಾಳಿಂಬೆ ಆರೋಗ್ಯದ ದೃಷ್ಠಿಯಿಂದ ಹಲವು ರೀತಿಯಲ್ಲಿ ಉಪಕಾರಿಯಾಗಿದ್ದು, ಅದನ್ನು ಸೇವಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಜಾಣತನವಾಗಿದೆ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »