TOP STORIES:

FOLLOW US

” ದೀಪಾವಳಿ ಮಾಂಕಾಳಿ ಕುಣಿತ “


ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಹಾಗು ಉಡುಪಿ ತಾಲೂಕುಗಳಲ್ಲಿ ಮಾತ್ರ ಹೆಚ್ಚಾಗಿ ಈ ಕುಣಿತ ಕಂಡು ಬರುತ್ತದೆ. ದೀಪಾವಳಿ ಪಾಡ್ಯದಿಂದ ಮೊದಲ್ಗೊಂಡು ಪ್ರತೀ ಹಗಲಲ್ಲಿ ನಲಿಕೆ (ಪಾಣ) ಜನಾಂಗದವರು ಈ ಕುಣಿತವನ್ನು ನಡೆಸುತ್ತಾರೆ. ಗ್ರಾಮದ ಗುತ್ತು ಅಥವಾ ಗೂಡಿನ ಮನೆಯಿಂದ ಆರಂಭಿಸಿ ಎಲ್ಲಾ ಮನೆಗಳಿಗೂ ಹೋಗುತ್ತಾರೆ. ಇವರಿಗೆ ಸಂಭಾವನೆಯಾಗಿ ಮನೆಮನೆಯಿಂದ ಹಣ ಸಿಗುವುದಿಲ್ಲ. ಬದಲಿಗೆ ಅಕ್ಕಿ, ಎಣ್ಣೆ, ಉಪ್ಪು, ಮೆಣಸು ದೊರೆಯುತ್ತದೆ.ಮಾಂಕಾಳಿ ಕುಣಿತದಲ್ಲಿ ಒಬ್ಬ ನರ್ತಕ ಇರುತ್ತಾನೆ. ಈತ ಕಂಗಿನ ಹಾಳೆಯಿಂದ ತಯಾರಿಸಿದ ಮುಖವಾಡವನ್ನು ಮುಖಕ್ಕೆ ಹಿಡಿದುಕೊಳ್ಳುತ್ತಾನೆ. ಮುಖವಾಡವೆಂದರೆ ಕಣ್ಣು, ಮೂಗು, ತೆರೆದ ಬಾಯಿ, ಚಾಚಿದ ನಾಲಿಗೆಯನ್ನು ಬಿಳಿ, ಹಳದಿ, ಕಪ್ಪು, ಹಸಿರು, ಕೆಂಪು ಬಣ್ಣಗಳಿಂದ ತಯಾರಿಸುತ್ತಾರೆ. ಕುಣಿಯುವವ ಸೀರೆಯನ್ನು ನೆರಿಗೆ ಹಾಕಿ ಒಂದರ ಮೇಲೊಂದರಂತೆ ಹಂತಹಂತವಾಗಿ ಹಾಕಿ ಸೊಂಟಕ್ಕೆ ಕಟ್ಟಿಕೊಳ್ಳುತ್ತಾನೆ. ಕಾಲಿಗೆ ಗಗ್ಗರ ಕಟ್ಟಿ ಮೈಯನ್ನು ದೊಗಲೆ ಅಂಗಿಯಿಂದ ಮುಚ್ಚಿಕೊಳ್ಳುತ್ತಾನೆ. ಮುಖವಾಡದ ಹಿಂದಿನಿಂದ ಒಂದು ಸೀರೆಯನ್ನು ಇಳಿ ಬಿಟ್ಟಿರುತ್ತಾನೆ. ಇದು ಮುಖವಾಡ ಇಟ್ಟುಕೊಂಡ ವ್ಯಕ್ತಿಯ ಬೆನ್ನನ್ನು ಆವರಿಸುತ್ತದೆ. ಮುಖವಾಡವನ್ನು ಮುಖಕ್ಕೆ ಕಟ್ಟಿಕೊಳ್ಳುವುದಿಲ್ಲ. ಬದಲಿಗೆ ಎರಡು ಕೈಗಳಿಂದ ಮುಖದೆದುರು ಹಿಡಿದುಕೊಳ್ಳುತ್ತಾರೆ.

Watch Video is here:  https://www.facebook.com/watch/?v=698187894157792

ಹಾಡು ಹೇಳುವಾತ ತೆಂಬರೆಯನ್ನು ಬಡಿದು ಹಾಡು ಹೇಳುತ್ತಿದ್ದಂತೆ ಇದರ ಲಯಕ್ಕನುಗುಣವಾಗಿ ನರ್ತಕ ಸಣ್ಣ ಹೆಜ್ಜೆಗಳನ್ನಿಟ್ಟು ಸುತ್ತು ಬರುತ್ತಾನೆ. ತೆಂಬರೆಯ ಬಡಿತ ನಿಧಾನವಾಗಿರುತ್ತದೆ. ಕೈಗಳಲ್ಲಿ ಮುಖವಾಡವನ್ನು ಮುಖಕ್ಕೆ ಎದುರಾಗಿ ಹಿಡಿದುಕೊಂಡಿರುವುದರಿಂದ ಕೈಗಳಲ್ಲಿ ಯಾವುದೇ ಭಂಗಿಯನ್ನು ಅಭಿನಯಿಸುವಂತಿಲ್ಲ. ಮುಖವಾಡವನ್ನೆತ್ತಿ ಕುಣಿತಗಾರ ನೆಲವನ್ನು ನೋಡಬೇಕಾಗಿರುವುದರಿಂದ ಕುಣಿತದಲ್ಲಿ ವೇಗ ಇರುವುದಿಲ್ಲ. ಈ ಸಂದರ್ಭದಲ್ಲಿ ಹೇಳುವ ಹಾಡು ತುಳು ಭಾಷೆಯಲ್ಲಿರುತ್ತದೆ. ಊರಿನ ರೋಗ ರುಜಿನಗಳನ್ನು ಹೋಗಲಾಡಿಸಲು ಘಟ್ಟದಿಂದ ಇಳಿದು ಮಾಂಕಾಳಿ ಬರುತ್ತಾಳೆ ಎಂಬ ನಂಬಿಕೆ ಜನಪದರಲ್ಲಿದೆ. ತುಳು ನಾಡಿನಲ್ಲಿ ಆಚರಣೆಯಲ್ಲಿರುವ ಅಟಿಕಳಿಂಜನು ಊರಿನ ಮಾರಿಯನ್ನು ನಿವಾರಿಸುವುದಕ್ಕಾಗಿ ಆಷಾಢ ಮಾಸದಲ್ಲಿ ವರ್ಷಕ್ಕೆ ಒಂದಾವರ್ತಿ ಗ್ರಾಮದಲ್ಲಿ ಬರುವುದು. ತುಳಸಿ ಪೂಜೆಯ ದಿನ ಮಾಂಕಾಳಿ ಕುಣಿತದ ಅಂತ್ಯ ಪೂಜೆ. ಆ ದಿನ ಸಂಭಾವನೆಯಾಗಿ ದೊರೆತ ಭತ್ತ, ಅಕ್ಕಿ, ತೆಂಗಿನಕಾಯಿ, ಉಪ್ಪು, ಹುಳಿ, ಮಸಿ, ಮೆಣಸುಗಳನ್ನು ಸರಳೀ ಎಲೆಯಲ್ಲಿ ಸಾಂಕೇತಿಕವಾಗಿ ಮನೆಯ ಪಕ್ಕದಲ್ಲಿ ಬಡಿಸಿಡುತ್ತಾರೆ, ಅದರ ಎದುರು ಮಾಂಕಾಳಿಯ ಮುಖವಾಡವನ್ನಿಟ್ಟು ಊರಿನ ಮಾರಿಯನ್ನು ಕಳೆಯುವಂತೆ ಪ್ರಾರ್ಥಿಸುತ್ತಾರೆ, ಹಾಗೂ ಮುಖವಾಡವನ್ನು ತೆಗೆದು ಹೊಳೆಯಲ್ಲಿ ಬಿಡುತ್ತಾರೆ. ಈ ಮೂಲಕವಾಗಿ ಊರಿನ ಮಾರಿಯನ್ನು ಹೊಳೆ ದಾಟಿಸುವ ಆಶಯವನ್ನು ಕಾಣಬಹುದಾಗಿದೆ.

(ಸಂಪಾದಕರು: ಪ್ರೊ. ಹಿ. ಚಿ. ಬೋರಲಿಗಯ್ಯ, ಕರ್ನಾಟಕ ಜನಪದ ಕಲೆಗಳ ಕೋಶ. ಪುಟ ೨೬.)

Credits: Beauty of Tulunad  facebook page


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »