TOP STORIES:

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಮಹಾ ಸಭೆ


ಪುತ್ತೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ 2020-21 ನೇ ಸಾಲಿನ 5 ನೇ ವಾರ್ಷಿಕ ವಾರ್ಷಿಕ ಮಹಾ ಸಭೆಯು 30-10-2021 ಶನಿವಾರ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲ್ ಇವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ಜರಗಿತು.

ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ ಮಂಡಿಸಿದರು ವರದಿಯನ್ನು ಸಭೆಯು ಸರ್ವಾನುಮತದಿಂದ ಅಂಗೀಕರಿಸಿತು, ಸುಜಿತಾ ವಿ ಬಂಗೇರ ಸೂಚಿಸಿ ದಯಾನಂದ ಕಲ್ಯಾ ಅನುಮೋದಿಸಿದರು. ಕ್ಷೇತ್ರಾಡಳಿತ ಸಮಿತಿಯ ಕೋಶಾಧಿಕಾರಿ ದೀಪಕ್ ಕೋಟ್ಯಾನ್ ವಾರ್ಷಿಕ ಲೆಕ್ಕಪತ್ರ ವನ್ನು ಸಭೆಗೆ ಮಂಡಿಸಿದರು ಲೆಕ್ಕ ಪತ್ರ ವನ್ನು ಸಭೆಯು ವಿವರವಾಗಿ ಚರ್ಚಿಸಿ ಅಂಗೀಕರಿಸಿತು, ಭಾಸ್ಕರ್ ಸಾಲ್ಯಾನ್ ಸೂಚಿಸಿ ಎನ್. ಟಿ. ಪೂಜಾರಿ ಅನುಮೋದಿಸಿದರು. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಸಮಗ್ರ ಅಭಿವೃದ್ಧಿಯ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.

ಕ್ಷೇತ್ರಾಡಳಿತ ಸಮಿತಿಯ ಬೈಲಾದಲ್ಲಿ ನಮೂದಿಸಿರುವ ಹಾಗೆ ಹಾಲಿ ಕಾರ್ಯಕಾರಿ ಸಮಿತಿಯಲಿದ್ದ ಸದಸ್ಯರನ್ನು ಕೈ ಎತ್ತುವುದರ ಮೂಲಕ ಮುಂದಿನ ಅವಧಿಗೆ ಪುನಾರಾಯ್ಕೆ ಮಾಡಲಾಯಿತು.

ಪವರ್ ಸ್ಟಾರ್ ಸಮಾಜದ ಕಣ್ಮಣಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬಗ್ಗೆ ಭಕ್ತಿ ಭಾವವಿರುವ ಪುನೀತ್ ರಾಜ್ ಕುಮಾರ್ ನಿಧನಕ್ಕೆ ವಿಶೇಷವಾಗಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಭೆಯಲ್ಲಿ ಸಲ್ಲಿಸಲಾಯಿತು.

ಸಭೆಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷರಾದ ಡಾ. ರಾಜಶೇಖರ್ ಕೋಟ್ಯಾನ್, ಉಪಾಧ್ಯಕ್ಷರಾದ ಪೀತಾಂಬರ ಹೆರಾಜೆ, ಕಾರ್ಯಕಾರಿ ಸಮಿತಿಯ ಲ್ಲಿರುವ ಮುಂಬೈ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ಹರೀಶ್ ಅಮೀನ್, ಬಿಲ್ಲವ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ರಾದ ಎನ್. ಟಿ. ಪೂಜಾರಿ ಹಾಗೂ ಇನ್ನಿತರ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿಹಾಜರಿದ್ದರು. ಅಧ್ಯಕ್ಷರಾದ ಜಯಂತ ನಡುಬೈಲ್ ಸ್ವಾಗತಿಸಿ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಧನ್ಯವಾದ ನೀಡಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »