TOP STORIES:

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ “ಆತ್ಮವಂದನಾ” ಕಿರುಚಿತ್ರಕ್ಕೆ ಎಲ್ಲೆಡೆಯಿಂದ ಭಾರಿ ಪ್ರಶಂಸೆ


ದೇಶಪ್ರೇಮ ಎಂಬುವುದು ಪ್ರತಿಯೊಬ್ಬ ಭಾರತೀಯನ ಎದೆಯ ಬಡಿತದಲ್ಲೂ ಇದೆ. ಅತೀ ಚಿಕ್ಕ ವಯಸ್ಸಿನಲ್ಲೇ ನೇಣಿಗೆ ಕೊರಳೊಡ್ಡಿದ ಭಗತ್ ಸಿಂಗ್ ರವರ ದೇಶಪ್ರೇಮ ಅಪಾರವಾದದ್ದು. ತನ್ನ ಪ್ರಾಣವನ್ನೆ ದೇಶಕ್ಕಾಗಿ ಮುಡಿಪಾಗಿಟ್ಟ ಯೋಧರ ದೇಶಪ್ರೇಮ.

ಹಗಲು-ರಾತ್ರಿ ಎನ್ನದೆ, ಬೆವರು ಸುರಿಸಿ ದುಡಿದು ದೇಶಕ್ಕೆ ಅನ್ನವನ್ನು ನೀಡುವ ರೈತನ ದೇಶಪ್ರೇಮ. ಗಡಿಯಲ್ಲಿ ವೀರ ಯೋಧ ನಾಡಿನಲ್ಲಿ ಖಾಕಿ ಯೋಧ ಎನ್ನುವ ಹಾಗೆ ಪೋಲಿಸ್ ರ ದೇಶಪ್ರೇಮ.

ಹೀಗೆಯೇ ಪ್ರತಿಯೊಬ್ಬ ಭಾರತೀಯನಲ್ಲೂ ದೇಶಪ್ರೇಮವು ಅಚಲವಾಗಿದೆ. ಓಟ್ಟೊಟ್ಟಿಗೆ ದೇಶವು ಇನ್ನಷ್ಟು ಬಲಿಷ್ಠವಾಗಬೇಕಿದೆ. ಹೀಗೆ ದೇಶವು ಬಲಿಷ್ಠ ಆಗಬೇಕಾದರೆ ನಾವು ಸ್ವತಂತ್ರರಾಗಬೇಕು,ಸ್ವವಲಂಭಿಯಾಗಬೇಕು. ನಾವು ಸ್ವತಃ ಸ್ವವಲಂಬಿಯಾದರೆ ದೇಶವನ್ನು ಬಲಿಷ್ಠಗೊಳಿಸಬಹುದು ಮತ್ತು ಆಗ ಮಾತ್ರ ಆತ್ಮರ್ನಿಭರತೆಯ ಕನಸು ನನಸಾಗಲು ಸಾಧ್ಯ.

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ ಕುರಿತಾದ ಹಾಗೂ ಭಾರತ ಸರ್ಕಾರದ ಮಿನಿಸ್ಟ್ರೀ ಆಫ್ ಇನ್ಫಾರ್ಮೇಷನ್ ರವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ ಶಾರ್ಟ್ ಫಿಲ್ಮ್ ಸ್ಪರ್ಧೆಯಲ್ಲಿ ಭಾಗವಹಿಸಿದ ಕಿರುಚಿತ್ರ.

ಇದೆ ಪರಿಕಲ್ಪನೆಯನ್ನು ಇಟ್ಟುಕೊಂಡು ಯುವವಾಹಿನಿ ಮಾಣಿ ಘಟಕದ ಅರ್ಪಿಸುವ, ರಾಜೇಶ್ ಎಸ್ ಬಲ್ಯ ರವರ ಕಥೆ-ಚಿತ್ರಕಥೆ-ನಿರ್ದೇಶನದ ಈ ಕಿರುಚಿತ್ರಕ್ಕೆ ಶಿವರಾಜ್ ಪಿ.ಆರ್ ರವರು ಕೂಡ ಚಿತ್ರ ಕಥೆ ಜೊಡಿಸಿದ್ದಾರೆ. ಕಿರುಚಿತ್ರಕ್ಕೆ ಸಂಭಾಷಣೆಯನ್ನು ಪ್ರಶಾಂತ್ ಅನಂತಾಡಿ ಬರೆದಿದ್ದಾರೆ. ಪ್ರವೀಣ್ ಸಾಲ್ಯಾನ್ ಮತ್ತು ವಿಕ್ರಮ್ ಬಿಳಿಯೂರು ಅವರು ಇಡೀ ಕಿರುಚಿತ್ರದ ಕಣ್ಣುಗಳಂತೆ ಶೂಟಿಂಗ್ ಮಾಡಿದ್ದಾರೆ. ಸಂಕಲನವನ್ನು ದೀಕ್ಷಿತ್ ಮತ್ತು ಪೋಸ್ಟರ್ ಡಿಸೈನ್ ನ್ನು ಚರಣ್ ಅನಂತಾಡಿ ಮಾಡಿದ್ದು, ಮಿತುನ್ ರಾಜ್ ವಿದ್ಯಾಪುರ ಕಿರುಚಿತ್ರಕ್ಕೆ ಅಧ್ಬುತ ಸಂಗೀತ ಸಂಯೋಜಿಸಿದ್ದಾರೆ. ಮತ್ತು ಈ ಕಿರುಚಿತ್ರಕ್ಕೆ ರಮೇಶ್ ಪೂಜಾರಿ ಮುಜಲ,ಹರೀಶ್ ಪೂಜಾರಿ ಬಾಕಿಲ ಮತ್ತು ಶಿವರಾಜ್ ಪಿ.ಆರ್ ರವರು ನಿರ್ಮಾಪಕರಾಗಿದ್ದಾರೆ.

ತುಳುಚಿತ್ರರಂಗ ಹಾಗೂ ಕನ್ನಡ ಸಿನಿಮಾರಂಗದಿಂದಲೂ “ಆತ್ಮವಂದನಾ” ಕಿರುಚಿತ್ರಕ್ಕೆ ಎಲ್ಲೆಡೆಯಿಂದ ಭಾರಿ ಪ್ರಶಂಸೆ ಸಿಕ್ಕಿದೆ. ಆಗೋಸ್ಟ್ 22 ರಂದು ಯೂಟ್ಯೂಬ್ ನಲ್ಲಿ ಬಿಡುಗಡೆಗೊಳ್ಳಲಿದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »