TOP STORIES:

ದೇಹದಲ್ಲಿ ಕಬ್ಬಿಣದ ಸಮಸ್ಯೆಯಿದ್ರೆ ಈ ಪಾತ್ರೆಯಲ್ಲಿ ಆಹಾರ ತಯಾರಿಸಿ


ಹಿಂದೆ ಜನರು ಕಬ್ಬಿಣದ ಪಾತ್ರೆಗಳನ್ನು ಹೆಚ್ಚು ಬಳಸುತ್ತಿದ್ದರು. ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಾರುಕಟ್ಟೆಗೆ, ಉಕ್ಕು, ನಾನ್ ಸ್ಟಿಕ್ ಸೇರಿದಂತೆ ನಾನಾ ಬಗೆಯ ಪಾತ್ರೆಗಳು ಲಗ್ಗೆಯಿಟ್ಟಿವೆ. ಆದ್ರೆ ಹಿಂದಿನ ಕಾಲದಲ್ಲಿ ಬಳಸ್ತಿದ್ದ ಕಬ್ಬಿಣದ ಪಾತ್ರೆಯಷ್ಟು ಉತ್ತಮವಾದ ಪಾತ್ರೆ ಯಾವುದೂ ಇಲ್ಲ.


ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಕಬ್ಬಿಣದ ಪಾತ್ರೆಗಳಲ್ಲಿ ಆಹಾರವನ್ನು ಬೇಯಿಸಿ ತಿಂದರೆ, ದೇಹದಲ್ಲಿ ಕಬ್ಬಿಣದ ಸಮಸ್ಯೆ ಎದುರಾಗುವುದಿಲ್ಲ. ಇದು ಆರೋಗ್ಯ ವೃದ್ಧಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ. ಕಬ್ಬಿಣದ ಪಾತ್ರೆಯನ್ನು ಅಡುಗೆಯಲ್ಲಿ ಸರಿಯಾಗಿ ಬಳಸಿದರೆ, ದೇಹದಲ್ಲಿ ಕಬ್ಬಿಣದ ಮಟ್ಟವನ್ನು ಕಾಪಾಡಬಹುದೆಂದು ವರದಿಯಲ್ಲಿ ಹೇಳಲಾಗಿದೆ.

ಕಬ್ಬಿಣದ ಪಾತ್ರೆಯಲ್ಲಿ ಯಾವುದೇ ಆಹಾರವನ್ನು ನೀವು ತಯಾರಿಸಬಹುದು. ಹೆಚ್ಚು ಹುಳಿ ಪದಾರ್ಥಗಳನ್ನು ಬೇಯಿಸಬಾರದು. ಕಬ್ಬಿಣದ ತವಾದಲ್ಲಿ ರೊಟ್ಟಿ, ಚಪಾತಿ, ದೋಸೆಯನ್ನು ಬೇಯಿಸಿ ಸೇವನೆ ಮಾಡಬಹುದು. ಇದು ಆಹಾರದಲ್ಲಿ ಕಬ್ಬಿಣದ ಗುಣಗಳನ್ನು ಹೆಚ್ಚಿಸುವುದಲ್ಲದೆ, ಸುವಾಸನೆಯನ್ನು ಹೆಚ್ಚಿಸುತ್ತದೆ.

ನೀರು ಅಥವಾ ಯಾವುದೇ ಇತರ ಪಾನೀಯವನ್ನು ಕಬ್ಬಿಣದ ಪಾತ್ರೆಗಳಲ್ಲಿ ಇಡಬಾರದು. ಕಬ್ಬಿಣವು ತೇವಾಂಶದೊಂದಿಗೆ ಪ್ರತಿಕ್ರಿಯಿಸಿ, ತುಕ್ಕನ್ನು ಉತ್ಪಾದಿಸುತ್ತದೆ.

ಕಬ್ಬಿಣದ ಪಾತ್ರೆಗಳಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ತಕ್ಷಣವೇ ಬೇರೆ ಯಾವುದೇ ಪಾತ್ರೆಗೆ, ವಿಶೇಷವಾಗಿ ಗಾಜಿನ ಪಾತ್ರೆಗೆ ವರ್ಗಾಯಿಸಬೇಕು.

ಹುಳಿ ಅಥವಾ ಆಮ್ಲೀಯ ಆಹಾರಗಳು ಕಬ್ಬಿಣದೊಂದಿಗೆ ಪ್ರತಿಕ್ರಿಯಿಸುತ್ತವೆ. ಇದು ಜೀರ್ಣಕ್ರಿಯೆ ಸಮಸ್ಯೆಗೆ ಕಾರಣವಾಗಬಹುದು. ಆದ್ದರಿಂದ, ಕಬ್ಬಿಣದ ಪಾತ್ರೆಯಲ್ಲಿ ಕರಿ, ರಸಂ, ಸಾಂಬಾರ್, ಟೊಮೆಟೊಗಳಿಂದ ಮಾಡಿದ ಆಹಾರವನ್ನು ತಯಾರಿಸಬಾರದು.

ಕಬ್ಬಿಣದ ಪಾತ್ರೆಗಳನ್ನು ತೊಳೆದು ತಕ್ಷಣ ಒರೆಸಬೇಕು. ಒರಟಾದ ಸ್ಕ್ರಬ್ಬರ್ ಬಳಸಬೇಡಿ. ಪಾತ್ರೆಗಳನ್ನು ಯಾವಾಗಲೂ ಸ್ವಚ್ಛ ಮತ್ತು ಶುಷ್ಕ ಸ್ಥಳದಲ್ಲಿ ಇರಿಸಿ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »