TOP STORIES:

ನಮ್ಮ ತುಳುನಾಡಿನ ಹಾಗೂ ಬಿಲ್ಲವ ಸಮಾಜದ ಬಹುಮುಖ ಪ್ರತಿಭೆ ಅನ್ವಿಷಾ ಪೂಜಾರಿ ವಾಮಂಜೂರು


ಕರಾವಳಿ ಭಾಗ ಪ್ರತಿಭೆಗಳ ತವರುರೂ ಎನಿಸಿಕೊಂಡಿರುವುದು ಎರಡು ಮಾತಿಲ್ಲ ಸಿನಿಮಾ, ಕ್ರಿಡೆ, ನೃತ್ಯ, ಸಿನಿಮಾ ಡ್ಯಾನ್ಸ್, ರಾಜಕೀಯ ಹಾಗೂ ದೇಶ ವಿದೇಶದಲ್ಲೂ ಕರಾವಳಿಗರ ಹೆಸರೆ ಕೇಳಿಬರುವುದು. ಹಾಗೆಯೆ ಕರ್ನಾಟಕದಾದ್ಯಂತ ಮನೆಮಾತಗಿದ್ದ “ಎಕ್ಸ್ ಪ್ರೆಶನ್ ಕ್ವೀನ್” ಅನ್ವಿಷಾ ಪೂಜಾರಿ ನಮ್ಮ ಬಿಲ್ಲವ ಸಮಾಜದ ಹೆಮ್ಮೆಯ ಪ್ರತಿಭೆ.ಕಠಿಣವಾದ ಪರಿಶ್ರಮ, ಶ್ರದ್ದೆಯಿಂದ ಮಾತ್ರ ಯಾವುದೆ ಒಂದು ಸಾಧನೆ ಮಾಡಲು ಸಾಧ್ಯ, ಹಾಗೂ ಪ್ರತಿಭೆಗೆ ಇರುವ ಮನೆಯ ವಾತವರಣವು ಅಗತ್ಯವಾಗಿರುತ್ತದೆ. ವಾಮಂಜೂರು ನಿವಾಸಿ ಅನಿಲ್ ಕುಮಾರ್ ಮತ್ತು ಅನುಷಾ ದಂಪತಿಗಳ ಪುತ್ರಿ. ಅನ್ವಿಷಾ ಪೂಜಾರಿ ವಾಮಂಜೂರ್ ಇವರಿಗೂ ಮನೆಯೇ ಮೊದಲ ಪಾಠ ಶಾಲೆ. ತಾಯಿಯೇ ಮೊದಲ ಗುರು. ಮನೆಯವರ ಪ್ರೋತ್ಸಾಹದಿಂದ ಈ ಮಟ್ಟಕ್ಕೆ ಏರಿದ್ಡಾರೆ.

ನೃತ್ಯ, ಯಕ್ಷಗಾನ, ಭರತನಾಟ್ಯ, ಸಿನಿಮಾ ಡ್ಯಾನ್ಸ್, ಯೋಗ, ರಂಗೋಲಿ, ಕೀ ಭೊರ್ಡ್ ಅಭ್ಯಾಸ ಮಾಡಿ ಸುಮಾರು 200 ಕ್ಕೂ ಹೆಚ್ಚು ಶೋ ಹಾಗೂ ಸ್ಪರ್ದೆಗಳಿಗೆ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿದ್ದಾರೆ.‘ಉಡುಪಿ ಕಿಡ್ಸ್ ಟ್ಯಾಲೆಂಟ್, ದೈಜಿ ವರ್ಲ್ಡ್ ಮಾಧ್ಯಮ ನಡೆಸಿದ “ಜೂನಿಯರ್ ಮಸ್ತಿ ಸೀಸನ್ 2″ ರಿಯಾಲಿಟಿ ಶೋ ಗೆ ಆಯ್ಕೆ, ಮಂಗಳೂರಿನ ಫಾರಂ ಪಿಜ್ಜಾ ಮಾಲ್ ಏರ್ಪಡಿಸಿದ ‘ಮಾಡೆಲ್ಲಿಂಗ್ ಮ್ಯಾಕ್ಸ್ ಮಾಡೆಲ್ಲಿಂಗ್ ” ನಲ್ಲಿ ‘ಮ್ಯಾಕ್ಸ್ ಮಂಗಳೂರು ಸೂಪರ್ ಕಿಡ್ಸ್’ ಟ್ರೋಫಿಯನ್ನು ಹಾಗೂ ‘Mangalore Little Princess’ ಟ್ರೋಫಿ ಗಳಿಸಿದ್ದಾರೆ.

ಇವರು ಜ಼ಿ ಕನ್ನಡದ ಆಯೊಜಿಸಿದ್ದ ಡ್ಯಾನ್ಸ್ ಕರ್ನಾಟಕ ಹಾಗೂ ಡ್ರಾಮ ಜೂನಿಯರ್ ನಲ್ಲಿ ಭಾಗವಹಿಸಿ, ಕರ್ನಾಟಕದ ಮನೆ ಮಾತಾಗಿರುವ ಅನ್ವಿಷಾ, ಡ್ಯಾನ್ಸ್ ಕರ್ನಾಟಕದಲ್ಲಿ “ಎಕ್ಸ್ ಪ್ರೆಶನ್ ಕ್ವೀನ್” ಎಂದೇ ಖ್ಯಾತಿ ಪಡೆದ್ದಿದಾರೆ. ಡ್ಯಾನ್ಸ್ ಕರ್ನಾಟಕದಲ್ಲಿ ಖ್ಯಾತ ನೃತ್ಯ ಸಂಯೋಜಕರಾದ ಶಶಿ ಮಾಸ್ಟರ್ ಮತ್ತು ರಾಹುಲ್ ಇವರಿಂದ ತರಬೇತಿಯನ್ನು ಪಡೆದ್ದಿದ್ದಾರೆ.ಹಾಗೂ ತುಳು ಸಿನಿಮಾಗಳಾದ ಜಬರ್ದಾಸ್ತ್ ಶಂಕರ, ಪೆಪ್ಪೆರೆ ಪೆರೆರೆರೆ, ಚಿತ್ರರಂಗದ ಖ್ಯಾತ ನಟರಾದ ನವೀನ್ ಡಿ ಪಡಿಲ್ ಜೊತೆಗೆ ನಟಿಸುವ ಮೂಲಕ ತುಳು ಸಿನಿಮಾ ರಂಗಕ್ಕೂ ಕಾಲಿಟ್ಟಿದ್ದಾರೆ.

ಅನ್ವಿಷಾ ಮಂಗಳೂರಿನ ಶುಭೋದಯ ವಿದ್ಯಾಲಯ, ಮೂಡುಶೆಡ್ಡೆಯಲ್ಲಿ ೫ ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕೇವಲ ತನ್ನ ಪ್ರತಿಭೆಯ ಜತೆಗೆ ವಿದ್ಯಾಭ್ಯಾಸದಲ್ಲೂ ಭೇಶ್ ಎನಿಸಿಕೊಂಡಿದ್ದಾರೆ.

ಇವರಿಗೆ ಕರ್ನಾಟಕ ಸರ್ಕಾರದ ”ಜಿಲ್ಲಾ ಅಸಾಧಾರಣ ಪ್ರತಿಭೆ”, ಕರ್ನಾಟಕ ಕಲಾಶ್ರಿ, ತುಳುನಾಡ ರಕ್ಷಣಾ ವೇದಿಕೆಯಿಂದ ತೌಳವ ಕುಮಾರಿ, ಜೆ ಸಿ ಮಡಾಂತ್ಯಾರ್ ಸಾಧನಶ್ರಿ ಸೇವ ಪುರಸ್ಕಾರ್, ಕರ್ನಾಟಕ ಪ್ರತಿಭ ರತ್ನ, ವೀರಕೇಸರಿ ಬೆಳ್ತಂಗಡಿ ವತಿಯಿಂದ ಕಲಾ ಸೇವಾರತ್ನ ಪುರಸ್ಕಾರ. ಮುಂತಾದ ಹಲವು ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡಿದ್ದಾರೆ.

ಅನ್ವಿಷಾ ಪೂಜಾರಿ ವಾಮಂಜೂರು ಹೀಗೆ ತನ್ನ ಸಾಧನೆಯನ್ನು ಮುಂದುವರಿಸುತ್ತಾ ದೇಶ ವಿದೇಶದಲ್ಲೂ ಹೆಸರು ಗಿಟ್ಟಿಸಿಕೊಳ್ಳಲಿ, ಹಾಗೂ ನಮ್ಮ ತುಳುನಾಡಿನ ಹಾಗು ಬಿಲ್ಲವ ಸಮಾಜದ ಹೆಮ್ಮೆಯಾಗಲಿ.

ಬರಹ: ಪುಷ್ಪರಾಜ್ ಪೂಜಾರಿ


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »